<p class="title"><strong>ಪಿಲಿಭಿತ್ (ಪಿಟಿಐ):</strong>ಉತ್ತರ ಪ್ರದೇಶ ಸರ್ಕಾರವು ತನ್ನ ಪಿಲಿಭಿತ್ ರಕ್ಷಿತಾರಣ್ಯಕ್ಕೆ (ಪಿಟಿಆರ್) ಬಿಡಲು ಬುಧವಾರ ಕರ್ನಾಟಕದಿಂದನಾಲ್ಕು ಆನೆಗಳನ್ನು ಪಡೆದುಕೊಂಡಿದೆ.</p>.<p>ಕಾಡಿನ ಪಕ್ಕದಲ್ಲಿರುವ ಗ್ರಾಮೀಣ ಪ್ರದೇಶಗಳಲ್ಲಿ ಮಾನವ- ವನ್ಯಜೀವಿ ಸಂಘರ್ಷದ ಘಟನೆಗಳನ್ನು ಪರೀಕ್ಷಿಸಲು ಕರ್ನಾಟಕದ ಅರಣ್ಯ ಇಲಾಖೆಯಿಂದ ನಾಲ್ಕು ಆನೆಗಳನ್ನು ತರಲಾಗಿದೆ. ಗಸ್ತು ಮೂಲಕ ಆನೆಗಳ ಚಲನವಲನದ ಮೇಲ್ವಿಚಾರಣೆ ಮಾಡಲಾಗುತ್ತದೆ ಎಂದು ಪಿಟಿಆರ್ ಉಪ ನಿರ್ದೇಶಕ ನವೀನ್ ಖಂಡೇಲ್ವಾಲ್ ಹೇಳಿದ್ದಾರೆ.</p>.<p>ಮೀಸಲು ಪ್ರದೇಶದಿಂದ ಹೊರಬರುವ ಹುಲಿಗಳನ್ನು ರಕ್ಷಿಸಲು ಮತ್ತು ಅವುಗಳನ್ನು ಪುನಾ ಕಾಡಿಗೆ ಸೇರಿಸಲುಈ ಆನೆಗಳು ವಿಶೇಷ ರೀತಿಯಲ್ಲಿ ನೆರವಾಗಲಿವೆ ಎಂದು ಅವರು ತಿಳಿಸಿದರು.</p>.<p>ನಿಸರ್ಗ (12), ಮಣಿಕಂಠ (8) ಹೆಸರಿನ ಎರಡು ಆನೆಗಳು ಮತ್ತು ಏಳು ಹಾಗೂ 14 ವರ್ಷದ ಇನ್ನೆರಡು ಆನೆಗಳನ್ನು ಉತ್ತರಪ್ರದೇಶಅರಣ್ಯ ಸಚಿವ ಅರುಣ್ ಸಕ್ಸೇನಾ ಅವರುಮಾಲಾ ವಲಯದಲ್ಲಿ ಸ್ವಾಗತಿಸಿ, ಪೂಜೆ ಸಲ್ಲಿಸಿದರು. ಈ ಆನೆಗಳು ಪ್ರವಾಸಿಗರನ್ನು ಆಕರ್ಷಿಸಲು ನೆರವಾಗಲಿವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಪಿಲಿಭಿತ್ (ಪಿಟಿಐ):</strong>ಉತ್ತರ ಪ್ರದೇಶ ಸರ್ಕಾರವು ತನ್ನ ಪಿಲಿಭಿತ್ ರಕ್ಷಿತಾರಣ್ಯಕ್ಕೆ (ಪಿಟಿಆರ್) ಬಿಡಲು ಬುಧವಾರ ಕರ್ನಾಟಕದಿಂದನಾಲ್ಕು ಆನೆಗಳನ್ನು ಪಡೆದುಕೊಂಡಿದೆ.</p>.<p>ಕಾಡಿನ ಪಕ್ಕದಲ್ಲಿರುವ ಗ್ರಾಮೀಣ ಪ್ರದೇಶಗಳಲ್ಲಿ ಮಾನವ- ವನ್ಯಜೀವಿ ಸಂಘರ್ಷದ ಘಟನೆಗಳನ್ನು ಪರೀಕ್ಷಿಸಲು ಕರ್ನಾಟಕದ ಅರಣ್ಯ ಇಲಾಖೆಯಿಂದ ನಾಲ್ಕು ಆನೆಗಳನ್ನು ತರಲಾಗಿದೆ. ಗಸ್ತು ಮೂಲಕ ಆನೆಗಳ ಚಲನವಲನದ ಮೇಲ್ವಿಚಾರಣೆ ಮಾಡಲಾಗುತ್ತದೆ ಎಂದು ಪಿಟಿಆರ್ ಉಪ ನಿರ್ದೇಶಕ ನವೀನ್ ಖಂಡೇಲ್ವಾಲ್ ಹೇಳಿದ್ದಾರೆ.</p>.<p>ಮೀಸಲು ಪ್ರದೇಶದಿಂದ ಹೊರಬರುವ ಹುಲಿಗಳನ್ನು ರಕ್ಷಿಸಲು ಮತ್ತು ಅವುಗಳನ್ನು ಪುನಾ ಕಾಡಿಗೆ ಸೇರಿಸಲುಈ ಆನೆಗಳು ವಿಶೇಷ ರೀತಿಯಲ್ಲಿ ನೆರವಾಗಲಿವೆ ಎಂದು ಅವರು ತಿಳಿಸಿದರು.</p>.<p>ನಿಸರ್ಗ (12), ಮಣಿಕಂಠ (8) ಹೆಸರಿನ ಎರಡು ಆನೆಗಳು ಮತ್ತು ಏಳು ಹಾಗೂ 14 ವರ್ಷದ ಇನ್ನೆರಡು ಆನೆಗಳನ್ನು ಉತ್ತರಪ್ರದೇಶಅರಣ್ಯ ಸಚಿವ ಅರುಣ್ ಸಕ್ಸೇನಾ ಅವರುಮಾಲಾ ವಲಯದಲ್ಲಿ ಸ್ವಾಗತಿಸಿ, ಪೂಜೆ ಸಲ್ಲಿಸಿದರು. ಈ ಆನೆಗಳು ಪ್ರವಾಸಿಗರನ್ನು ಆಕರ್ಷಿಸಲು ನೆರವಾಗಲಿವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>