ಈ ಘಟನೆಯಲ್ಲಿ ಮಮತಾ ಬ್ಯಾನರ್ಜಿ ಅವರ ಬೆನ್ನು ಮತ್ತು ಎದೆಗೆ ಗಾಯವಾಗಿದ್ದು, ಈ ಕುರಿತು ವರದಿ ಸಲ್ಲಿಸುವಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ)ಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಸೂಚಿಸಿದೆ. ಅಲ್ಲದೆ ಮಮತಾ ಅವರ ಚಾರ್ಟರ್ಡ್ ವಿಮಾನ ಹಾರಾಟಕ್ಕೆ ಅನುಮೋದನೆ ನೀಡಲಾಗಿತ್ತೇ ಎಂಬ ಬಗ್ಗೆ ಮಾಹಿತಿ ನೀಡುವಂತೆಯೂ ಡಿಜಿಸಿಎಗೆ ಸೂಚಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಪರ ಪ್ರಚಾರ ನಡೆಸಿ ವಾಪಸ್ ಬಂಗಾಳಕ್ಕೆ ತೆರಳುವ ವೇಳೆ ಈ ಘಟನೆ ಸಂಭವಿಸಿದೆ.