<p><strong>ಮುಂಬೈ:</strong> ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಚೋಪ್ಡಾ ಬಳಿ ಶುಕ್ರವಾರ ತರಬೇತಿ ವಿಮಾನ ಪತನಗೊಂಡು ಪೈಲಟ್ ತರಬೇತುದಾರ, ಬೆಂಗಳೂರಿನ ನೂರುಲ್ ಅಮೀನ್ (28) ಮೃತಪಟ್ಟಿದ್ದಾರೆ.</p>.<p>ತರಬೇತಿ ಪಡೆಯುತ್ತಿದ್ದ ಮಹಿಳಾ ಪೈಲಟ್, ಮಧ್ಯ ಪ್ರದೇಶದ ಅನಿಷ್ಕಾ ಗುರ್ಜರ್ ಗಾಯಗೊಂಡಿದ್ದಾರೆ. ಇವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರ್ಜರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಎರಡು ಆಸನಗಳ ಇಟಲಿ ನಿರ್ಮಿತ ತರಬೇತಿ ವಿಮಾನವು ಧುಲೆ ನಗರದ ಶಿರ್ಪುರದಲ್ಲಿರುವ ಎನ್ಎಂಐಎಂಎಸ್ ಅಕಾಡೆಮಿಗೆ ಸೇರಿದ್ದು ಎನ್ನಲಾಗಿದೆ. ವಿಮಾನವು ಶಿರ್ಪುರದಿಂದ ಟೇಕಾಫ್ ಆಗಿತ್ತು.</p>.<p>‘ನಾವೊಬ್ಬ ಪೈಲಟ್ನನ್ನು ಕಳೆದುಕೊಂಡಿದ್ದೇವೆ ಹಾಗೂ ತರಬೇತಿ ಪಡೆಯುತ್ತಿದ್ದ ಪೈಲಟ್ ಗಾಯಗೊಂಡಿದ್ದಾರೆ’ ಎಂದು ಎನ್ಎಂಐಎಂಎಸ್ ವಿಮಾನಯಾನ ತರಬೇತಿ ಸಂಸ್ಥೆಯ ನಿರ್ದೇಶಕ ಹಿತೇಶ್ ಪಟೇಲ್ ‘ಡೆಕ್ಕನ್ ಹೆರಾಲ್ಡ್’ಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.</p>.<p>ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ನಾಗರಿಕ ವಿಮಾಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ತನಿಖಾ ತಂಡ ಸ್ಥಳಕ್ಕೆ ತೆರಳಿದೆ ಎಂದು ತಿಳಿಸಿದ್ದಾರೆ.</p>.<p>ವಿಮಾನ ಪತನಕ್ಕೆ ಕಾರಣ ಏನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಚೋಪ್ಡಾ ಬಳಿ ಶುಕ್ರವಾರ ತರಬೇತಿ ವಿಮಾನ ಪತನಗೊಂಡು ಪೈಲಟ್ ತರಬೇತುದಾರ, ಬೆಂಗಳೂರಿನ ನೂರುಲ್ ಅಮೀನ್ (28) ಮೃತಪಟ್ಟಿದ್ದಾರೆ.</p>.<p>ತರಬೇತಿ ಪಡೆಯುತ್ತಿದ್ದ ಮಹಿಳಾ ಪೈಲಟ್, ಮಧ್ಯ ಪ್ರದೇಶದ ಅನಿಷ್ಕಾ ಗುರ್ಜರ್ ಗಾಯಗೊಂಡಿದ್ದಾರೆ. ಇವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರ್ಜರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಎರಡು ಆಸನಗಳ ಇಟಲಿ ನಿರ್ಮಿತ ತರಬೇತಿ ವಿಮಾನವು ಧುಲೆ ನಗರದ ಶಿರ್ಪುರದಲ್ಲಿರುವ ಎನ್ಎಂಐಎಂಎಸ್ ಅಕಾಡೆಮಿಗೆ ಸೇರಿದ್ದು ಎನ್ನಲಾಗಿದೆ. ವಿಮಾನವು ಶಿರ್ಪುರದಿಂದ ಟೇಕಾಫ್ ಆಗಿತ್ತು.</p>.<p>‘ನಾವೊಬ್ಬ ಪೈಲಟ್ನನ್ನು ಕಳೆದುಕೊಂಡಿದ್ದೇವೆ ಹಾಗೂ ತರಬೇತಿ ಪಡೆಯುತ್ತಿದ್ದ ಪೈಲಟ್ ಗಾಯಗೊಂಡಿದ್ದಾರೆ’ ಎಂದು ಎನ್ಎಂಐಎಂಎಸ್ ವಿಮಾನಯಾನ ತರಬೇತಿ ಸಂಸ್ಥೆಯ ನಿರ್ದೇಶಕ ಹಿತೇಶ್ ಪಟೇಲ್ ‘ಡೆಕ್ಕನ್ ಹೆರಾಲ್ಡ್’ಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.</p>.<p>ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ನಾಗರಿಕ ವಿಮಾಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ತನಿಖಾ ತಂಡ ಸ್ಥಳಕ್ಕೆ ತೆರಳಿದೆ ಎಂದು ತಿಳಿಸಿದ್ದಾರೆ.</p>.<p>ವಿಮಾನ ಪತನಕ್ಕೆ ಕಾರಣ ಏನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>