<p><strong>ನವದೆಹಲಿ:</strong> ‘ಕೋವಿಡ್ 19‘ ಪಿಡುಗಿನಿಂದ ಅನಾಥವಾಗುವ ಮಕ್ಕಳು ಕಾನೂನು ಪ್ರಕಾರ ದತ್ತು ಪಡೆಯುವವರೆಗೂ, ಆ ಮಕ್ಕಳನ್ನು ‘ಕಳ್ಳಸಾಗಣೆ‘ಯಿಂದ ರಕ್ಷಿಸಬೇಕೆಂದು ಕೋರಿ ದೆಹಲಿ ಹೈಕೋರ್ಟ್ನಲ್ಲಿ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದ್ದು, ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಸೋಮವಾರ ನೋಟಿಸ್ ನೀಡಲಾಗಿದೆ.</p>.<p>ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರನ್ನೊಳಗೊಂಡ ನ್ಯಾಯಪೀಠ, ಈ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಆರೋಗ್ಯ ಸಚಿವಾಲಯ, ದೆಹಲಿ ಸರ್ಕಾರ ಮತ್ತು ನಗರ ಪೊಲೀಸರಿಂದ ಪ್ರತಿಕ್ರಿಯೆ ಕೇಳಿದೆ.</p>.<p>ವಕೀಲರಾದ ಜಿತೇಂದ್ರ ಗುಪ್ತಾ ಮತ್ತು ಆನಂದ್ ಅವರು ಈ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.</p>.<p>‘ಕೋವಿಡ್ ಬಿಕ್ಕಟ್ಟಿನಲ್ಲಿ ಅನಾಥವಾಗುವ ಮಕ್ಕಳಿಗೆ, ಅವರ ಹತ್ತಿರದ ಸಂಬಂಧಿಕರಿಂದ ಅಥವಾ ಮಕ್ಕಳ ಆರೈಕೆ ಕೇಂದ್ರಗಳಲ್ಲಿ ರಕ್ಷಣೆ ನೀಡುವಂತೆ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಗಳಲ್ಲಿ ಮನವಿ ಮಾಡಲಾಗಿದೆ.</p>.<p>ಮತ್ತೊಂದು ಅರ್ಜಿಯಲ್ಲಿ ‘ಆಮ್ಲಜನಕ ಮತ್ತು ಔಷಧ ಸಮಸ್ಯೆ, ಹಣಕಾಸು ಸಮಸ್ಯೆಯಿಂದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನಿರಾಕರಿಸಿದ ಕಾರಣಗಳಿಂದ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ ಯಾವ ರೀತಿ ಆರ್ಥಿಕ ನೆರವು ನೀಡಲಾಗುತ್ತಿದೆ‘ ಎಂಬುದನ್ನು ತಿಳಿಸುವಂತೆ ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕೋವಿಡ್ 19‘ ಪಿಡುಗಿನಿಂದ ಅನಾಥವಾಗುವ ಮಕ್ಕಳು ಕಾನೂನು ಪ್ರಕಾರ ದತ್ತು ಪಡೆಯುವವರೆಗೂ, ಆ ಮಕ್ಕಳನ್ನು ‘ಕಳ್ಳಸಾಗಣೆ‘ಯಿಂದ ರಕ್ಷಿಸಬೇಕೆಂದು ಕೋರಿ ದೆಹಲಿ ಹೈಕೋರ್ಟ್ನಲ್ಲಿ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದ್ದು, ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಸೋಮವಾರ ನೋಟಿಸ್ ನೀಡಲಾಗಿದೆ.</p>.<p>ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರನ್ನೊಳಗೊಂಡ ನ್ಯಾಯಪೀಠ, ಈ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಆರೋಗ್ಯ ಸಚಿವಾಲಯ, ದೆಹಲಿ ಸರ್ಕಾರ ಮತ್ತು ನಗರ ಪೊಲೀಸರಿಂದ ಪ್ರತಿಕ್ರಿಯೆ ಕೇಳಿದೆ.</p>.<p>ವಕೀಲರಾದ ಜಿತೇಂದ್ರ ಗುಪ್ತಾ ಮತ್ತು ಆನಂದ್ ಅವರು ಈ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.</p>.<p>‘ಕೋವಿಡ್ ಬಿಕ್ಕಟ್ಟಿನಲ್ಲಿ ಅನಾಥವಾಗುವ ಮಕ್ಕಳಿಗೆ, ಅವರ ಹತ್ತಿರದ ಸಂಬಂಧಿಕರಿಂದ ಅಥವಾ ಮಕ್ಕಳ ಆರೈಕೆ ಕೇಂದ್ರಗಳಲ್ಲಿ ರಕ್ಷಣೆ ನೀಡುವಂತೆ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಗಳಲ್ಲಿ ಮನವಿ ಮಾಡಲಾಗಿದೆ.</p>.<p>ಮತ್ತೊಂದು ಅರ್ಜಿಯಲ್ಲಿ ‘ಆಮ್ಲಜನಕ ಮತ್ತು ಔಷಧ ಸಮಸ್ಯೆ, ಹಣಕಾಸು ಸಮಸ್ಯೆಯಿಂದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನಿರಾಕರಿಸಿದ ಕಾರಣಗಳಿಂದ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ ಯಾವ ರೀತಿ ಆರ್ಥಿಕ ನೆರವು ನೀಡಲಾಗುತ್ತಿದೆ‘ ಎಂಬುದನ್ನು ತಿಳಿಸುವಂತೆ ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>