ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆಯಲ್ಲಿ ಆಡಳಿತಾರೂಢ ಬಿಜೆಪಿಯ ನಾಯಕರಾಗಿ ಪಿಯೂಷ್‌ ಗೋಯಲ್‌ ಆಯ್ಕೆ

ಅಕ್ಷರ ಗಾತ್ರ

ನವದೆಹಲಿ: ರಾಜ್ಯಸಭೆಯಲ್ಲಿ ಆಡಳಿತಾರೂಢ ಬಿಜೆಪಿಯ ನಾಯಕರಾಗಿ ಪಿಯೂಷ್‌ ಗೋಯಲ್‌ ಅವರು ಆಯ್ಕೆಯಾಗಿದ್ದಾರೆ.

ಇದಕ್ಕೂ ಮೊದಲು ರಾಜ್ಯಸಭೆಯಲ್ಲಿ ಬಿಜೆಪಿಯ ನಾಯಕರನ್ನಾಗಿ ತಾವರ್‌ಚಂದ್‌ ಗೆಹ್ಲೋಟ್‌, ಉಪ ನಾಯಕರನ್ನಾಗಿ ಪಿಯೂಷ್‌ ಗೋಯಲ್‌ ಅವರನ್ನು ನೇಮಿಸಲಾಗಿತ್ತು.

ತಾವರ್‌ಚಂದ್‌ ಗೆಹ್ಲೋಟ್‌ ಅವರು ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ಸಚಿವ ಸಂಪುಟದ ಪುನರ್‌ರಚನೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಈ ನೇಮಕಾತಿ ಆದೇಶ ಹೊರಡಿಸಲಾಗಿತ್ತು.

ರಾಜ್ಯಸಭೆಯಲ್ಲಿ ಬಿಜೆಪಿಯ ನೂತನನಾಯಕರಾಗಿ ನೇಮಕಗೊಂಡಿರುವ57 ವರ್ಷದ ಪಿಯೂಷ್‌ ಗೋಯಲ್‌ ಅವರು ಪ್ರಸ್ತುತ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾಗಿ ಕೇಂದ್ರ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 19ರಿಂದ ಆರಂಭವಾಗಲಿದ್ದು, ಸಂಸದೀಯ ವ್ಯವಹಾರಗಳ ಸಚಿವಾಲಯ ಈ ಕುರಿತು ಅಧಿಸೂಚನೆ‌ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT