ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ ಗೃಹಬಂಧನದಲ್ಲಿ ಇರಿಸಲಾಗಿದೆ: ಮೆಹಬೂಬಾ ಮುಫ್ತಿ ಆರೋಪ

Last Updated 18 ನವೆಂಬರ್ 2021, 10:28 IST
ಅಕ್ಷರ ಗಾತ್ರ

ಶ್ರೀನಗರ: ತನ್ನನ್ನು ಮತ್ತೆ ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಗುರುವಾರ ಆರೋಪಿಸಿದ್ದಾರೆ.

ಈ ಮಧ್ಯೆ ಪಕ್ಷದ ಇಬ್ಬರು ಸಹೋದ್ಯೋಗಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮೆಹಬೂಬಾ, 'ಮತ್ತೆ ನನ್ನನ್ನು ಗೃಹಬಂಧನದಲ್ಲಿ ಇರಿಸಲಾಗಿದ್ದು, ಪಕ್ಷದ ಮುಖ್ಯ ವಕ್ತಾರ ಸುಹೈಲ್ ಬುಖಾರಿ ಹಾಗೂ ವಕ್ತಾರ ನಜ್ಮು ಸಾಕೀಬ್‌ರನ್ನು ಪೊಲೀಸರು ಬಂಧಿಸಿದ್ದಾರೆ' ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಉಗ್ರರ ಹೆಸರಿನಲ್ಲಿ ಅಮಾಯಕ ನಾಗರಿಕರನ್ನು ಕೊಲ್ಲುತ್ತಿದೆ ಎಂದು ಮೆಹಬೂಬಾ ಮುಫ್ತಿ ಆರೋಪ ಮಾಡಿದ್ದಾರೆ. ಹೈದರ್‌ಪೋರಾ ಎನ್‌ಕೌಂಟರ್ ವಿರುದ್ಧ ಪ್ರತಿಭಟನೆಯನ್ನು ನಡೆಸಿದ್ದರಲ್ಲದೆ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದರು.

ನಾಗರಿಕರ ಮೃತದೇಹಗಳನ್ನು ಅಂತ್ಯಕ್ರಿಯೆ ನಡೆಸಲು ಕುಟುಂಬಗಳಿಗೆ ಹಸ್ತಾಂತರಿಸದಿರುವುದು ಅಮಾನವೀಯ ಕೃತ್ಯವಾಗಿದೆ ಎಂದು ಮೆಹಬೂಬಾ ಮುಫ್ತಿಆರೋಪಿಸಿದ್ದಾರೆ.

ಏತನ್ಮಧ್ಯೆ ಹೈದರ್‌ಪೋರಾ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಆದೇಶಿಸಿದ್ದಾರೆ. ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮೃತಪಟ್ಟಿದ್ದರು. ಅವರು ಭಯೋತ್ಪಾದಕರ ಸಂಪರ್ಕ ಹೊಂದಿದ್ದರು ಎಂದು ಭದ್ರತಾ ಪಡೆ ವಾದಿಸಿದರೆ, ಅಮಾಯಕ ನಾಗರಿಕರು ಎಂದು ಕುಟುಂಬ ಸದಸ್ಯರು ಹೇಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT