<p class="title"><strong>ನವದೆಹಲಿ (ಪಿಟಿಐ):</strong> ‘ಪ್ರಾರ್ಥನಾ ಸ್ಥಳಗಳ ಕಾಯ್ದೆ 1991’ರ ಕೆಲ ನಿಬಂಧನೆಗಳ ಕ್ರಮಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಡಿಸೆಂಬರ್ 12ರ ಒಳಗೆ ವಿಸ್ತೃತವಾದ ಪ್ರಮಾಣಪತ್ರವನ್ನು ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿತು.</p>.<p class="title">ಪ್ರಾರ್ಥನಾ ಮತ್ತು ಪೂಜಾ ಸ್ಥಳಗಳ ಸ್ವರೂಪದ ಬದಲಾವಣೆಯನ್ನು ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಸುವುದನ್ನು ಕಾಯ್ದೆಯ ಕೆಲ ನಿಬಂಧನೆಗಳಡಿ ನಿರ್ಬಂಧಿಸಲಾಗಿದೆ. ಇದರ ಸಿಂಧುತ್ವವನ್ನು ಪ್ರಶ್ನಿಸಲಾಗಿದೆ.</p>.<p>ಕೇಂದ್ರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ತಕ್ಷಣಕ್ಕೆ ಇದಕ್ಕೆ ಉತ್ತರಿಸಲಾಗದು. ಸರ್ಕಾರದ ಜೊತೆಗೆ ಚರ್ಚಿಸಬೇಕು. ಅದಕ್ಕೆ ಸಮಯ ಬೇಕು’ ಎಂದರು. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆ.ಬಿ.ಪಾರ್ದಿವಾಲಾ ಅವರಿದ್ದ ಪೀಠವು ಇದನ್ನು ಮಾನ್ಯ ಮಾಡಿತು.</p>.<p>ಬಳಿಕ, ‘ಡಿಸೆಂಬರ್ 12ರ ಒಳಗೆ ಸವಿವರ ಪ್ರಮಾಣಪತ್ರವನ್ನು ಸಲ್ಲಿಸಬೇಕು. ಈ ಮಾಹಿತಿಯನ್ನು ಸಂಬಂಧಿಸಿದವರಿಗೂ ತಿಳಿಸಬೇಕು’ ಎಂದು ಕೇಂದ್ರಕ್ಕೆ ಸೂಚಿಸಿದ ಪೀಠವು, 2023ರ ಜನವರಿ ಮೊದಲ ವಾರ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿತು.</p>.<p>ಅರ್ಜಿ ಸಲ್ಲಿಸಿರುವ ರಾಜ್ಯಸಭೆ ಸದಸ್ಯ, ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ಅವರು, ಅಯೋಧ್ಯೆಯ ರಾಮಮಂದಿರ ಸ್ಥಳದ ವಿವಾದದಂತೆ, ಕಾಶಿ ಮತ್ತು ಮಥುರಾ ಅನ್ನು ಈ ಕಾಯ್ದೆಯಿಂದ ಹೊರಗಿಡಲಾಗಿದೆ. ಈ ಕಾಯ್ದೆಯನ್ನೇ ರದ್ದುಪಡಿಸಬೇಕು ಎಂದು ನಾನು ಕೋರುತ್ತಿಲ್ಲ. ಉಲ್ಲೇಖಿಸಿದ ಎರಡೂ ದೇವಸ್ಥಾನಗಳನ್ನು ಕಾಯ್ದೆಯ ವ್ಯಾಪ್ತಿಗೆ ಸೇರ್ಪಡೆಗೊಳಿಸಿ ಉಳಿಸಿಕೊಳ್ಳಬೇಕು‘ ಎಂದು ಪೀಠಕ್ಕೆ ಮನವಿ ಮಾಡಿದರು.</p>.<p>ಅರ್ಜಿಯ ವಿಚಾರಣೆಯ ವೇಳೆ ಈ ಮನವಿಯನ್ನು ಪರಿಗಣಿಸಲಾಗುವುದು ಎಂದು ಪೀಠ ಪ್ರತಿಕ್ರಿಯಿಸಿತು. ಇದಕ್ಕೂ ಮೊದಲು ಪೀಠವು, ಈ ಸಂಬಂಧ ಪ್ರತಿಕ್ರಿಯೆ ದಾಖಲಿಸಲು ಅಕ್ಟೋಬರ್ 31ರವರೆಗೂ ಕೇಂದ್ರಕ್ಕೆ ಸಮಯಾವಕಾಶ ನೀಡಿತ್ತು.</p>.<p>ವಕೀಲ ಅಶ್ವಿನಿ ಉಪಾಧ್ಯಾಯ ಅವರು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು, ಉಲ್ಲೇಖಿತ ಕಾಯ್ದೆಯ 2, 3 ಮತ್ತು 4ನೇ ಸೆಕ್ಷನ್ಗಳನ್ನು ಕೈಬಿಡಬೇಕು ಎಂದು ಕೋರಿದ್ದಾರೆ. ಇದು, ಪೀಠದ ಎದುರು ವಿಚಾರಣೆಯಲ್ಲಿದೆ.</p>.<p>‘ಯಾವುದೇ ವ್ಯಕ್ತಿ ಅಥವಾ ಧರ್ಮಕ್ಕೆ ಸೇರಿರುವ ಗುಂಪು ನಿರ್ದಿಷ್ಟ ಪ್ರಾರ್ಥನಾ ಹಾಗೂ ಪೂಜಾ ಸ್ಥಳದ ಹಕ್ಕಿಗಾಗಿ ಕೋರ್ಟ್ನಿಂದ ಪರಿಹಾರ ಕೋರುವ ಅವಕಾಶಗಳನ್ನು ಈ ಸೆಕ್ಷನ್ಗಳು ಕಸಿದುಕೊಳ್ಳಲಿವೆ‘ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ (ಪಿಟಿಐ):</strong> ‘ಪ್ರಾರ್ಥನಾ ಸ್ಥಳಗಳ ಕಾಯ್ದೆ 1991’ರ ಕೆಲ ನಿಬಂಧನೆಗಳ ಕ್ರಮಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಡಿಸೆಂಬರ್ 12ರ ಒಳಗೆ ವಿಸ್ತೃತವಾದ ಪ್ರಮಾಣಪತ್ರವನ್ನು ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿತು.</p>.<p class="title">ಪ್ರಾರ್ಥನಾ ಮತ್ತು ಪೂಜಾ ಸ್ಥಳಗಳ ಸ್ವರೂಪದ ಬದಲಾವಣೆಯನ್ನು ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಸುವುದನ್ನು ಕಾಯ್ದೆಯ ಕೆಲ ನಿಬಂಧನೆಗಳಡಿ ನಿರ್ಬಂಧಿಸಲಾಗಿದೆ. ಇದರ ಸಿಂಧುತ್ವವನ್ನು ಪ್ರಶ್ನಿಸಲಾಗಿದೆ.</p>.<p>ಕೇಂದ್ರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ತಕ್ಷಣಕ್ಕೆ ಇದಕ್ಕೆ ಉತ್ತರಿಸಲಾಗದು. ಸರ್ಕಾರದ ಜೊತೆಗೆ ಚರ್ಚಿಸಬೇಕು. ಅದಕ್ಕೆ ಸಮಯ ಬೇಕು’ ಎಂದರು. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆ.ಬಿ.ಪಾರ್ದಿವಾಲಾ ಅವರಿದ್ದ ಪೀಠವು ಇದನ್ನು ಮಾನ್ಯ ಮಾಡಿತು.</p>.<p>ಬಳಿಕ, ‘ಡಿಸೆಂಬರ್ 12ರ ಒಳಗೆ ಸವಿವರ ಪ್ರಮಾಣಪತ್ರವನ್ನು ಸಲ್ಲಿಸಬೇಕು. ಈ ಮಾಹಿತಿಯನ್ನು ಸಂಬಂಧಿಸಿದವರಿಗೂ ತಿಳಿಸಬೇಕು’ ಎಂದು ಕೇಂದ್ರಕ್ಕೆ ಸೂಚಿಸಿದ ಪೀಠವು, 2023ರ ಜನವರಿ ಮೊದಲ ವಾರ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿತು.</p>.<p>ಅರ್ಜಿ ಸಲ್ಲಿಸಿರುವ ರಾಜ್ಯಸಭೆ ಸದಸ್ಯ, ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ಅವರು, ಅಯೋಧ್ಯೆಯ ರಾಮಮಂದಿರ ಸ್ಥಳದ ವಿವಾದದಂತೆ, ಕಾಶಿ ಮತ್ತು ಮಥುರಾ ಅನ್ನು ಈ ಕಾಯ್ದೆಯಿಂದ ಹೊರಗಿಡಲಾಗಿದೆ. ಈ ಕಾಯ್ದೆಯನ್ನೇ ರದ್ದುಪಡಿಸಬೇಕು ಎಂದು ನಾನು ಕೋರುತ್ತಿಲ್ಲ. ಉಲ್ಲೇಖಿಸಿದ ಎರಡೂ ದೇವಸ್ಥಾನಗಳನ್ನು ಕಾಯ್ದೆಯ ವ್ಯಾಪ್ತಿಗೆ ಸೇರ್ಪಡೆಗೊಳಿಸಿ ಉಳಿಸಿಕೊಳ್ಳಬೇಕು‘ ಎಂದು ಪೀಠಕ್ಕೆ ಮನವಿ ಮಾಡಿದರು.</p>.<p>ಅರ್ಜಿಯ ವಿಚಾರಣೆಯ ವೇಳೆ ಈ ಮನವಿಯನ್ನು ಪರಿಗಣಿಸಲಾಗುವುದು ಎಂದು ಪೀಠ ಪ್ರತಿಕ್ರಿಯಿಸಿತು. ಇದಕ್ಕೂ ಮೊದಲು ಪೀಠವು, ಈ ಸಂಬಂಧ ಪ್ರತಿಕ್ರಿಯೆ ದಾಖಲಿಸಲು ಅಕ್ಟೋಬರ್ 31ರವರೆಗೂ ಕೇಂದ್ರಕ್ಕೆ ಸಮಯಾವಕಾಶ ನೀಡಿತ್ತು.</p>.<p>ವಕೀಲ ಅಶ್ವಿನಿ ಉಪಾಧ್ಯಾಯ ಅವರು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು, ಉಲ್ಲೇಖಿತ ಕಾಯ್ದೆಯ 2, 3 ಮತ್ತು 4ನೇ ಸೆಕ್ಷನ್ಗಳನ್ನು ಕೈಬಿಡಬೇಕು ಎಂದು ಕೋರಿದ್ದಾರೆ. ಇದು, ಪೀಠದ ಎದುರು ವಿಚಾರಣೆಯಲ್ಲಿದೆ.</p>.<p>‘ಯಾವುದೇ ವ್ಯಕ್ತಿ ಅಥವಾ ಧರ್ಮಕ್ಕೆ ಸೇರಿರುವ ಗುಂಪು ನಿರ್ದಿಷ್ಟ ಪ್ರಾರ್ಥನಾ ಹಾಗೂ ಪೂಜಾ ಸ್ಥಳದ ಹಕ್ಕಿಗಾಗಿ ಕೋರ್ಟ್ನಿಂದ ಪರಿಹಾರ ಕೋರುವ ಅವಕಾಶಗಳನ್ನು ಈ ಸೆಕ್ಷನ್ಗಳು ಕಸಿದುಕೊಳ್ಳಲಿವೆ‘ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>