ನವದೆಹಲಿ: ಯುದ್ಧಪೀಡಿತ ಉಕ್ರೇನ್ನಿಂದ ಮರಳಿ ಬಂದಿರುವ ವಿದ್ಯಾರ್ಥಿಗಳಿಗೆ ಭಾರತೀಯ ಪಠ್ಯಕ್ರಮದ ಅನುಸಾರ ವೈದ್ಯಕೀಯ ಕೋರ್ಸ್ ಮುಂದುವರಿಸಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.
ವಕೀಲರಾದ ರಾಣಾ ಸಂದೀಪ್ ಬುಸ್ಸಾ, ಡಾ.ನೀತು ನಾಯ್ಡು ರಾಯಲಾ ಅವರು ಈ ಪಿಐಎಲ್ ಸಲ್ಲಿಸಿದ್ದಾರೆ.
ಉಕ್ರೇನ್ನಿಂದ ಬಂದಿರುವ ಭಾರತೀಯ ವಿದ್ಯಾರ್ಥಿಗಳು ಭಾರತದಲ್ಲಿ ವೈದ್ಯಕೀಯ ಕೋರ್ಸ್ಗೆ ಪ್ರವೇಶ ಮತ್ತು ಅಧ್ಯಯನ ಮುಂದುವರಿಕೆಗೆ ಸಂಬಂಧಿಸಿದಂತೆ ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊರಡಿಸಲು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶನ ನೀಡುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.