<p><strong>ನವದೆಹಲಿ</strong>: ಪತ್ರಕರ್ತರು, ಹೋರಾಟಗಾರರು, ರಾಜಕೀಯ ನಾಯಕರು ಮತ್ತಿತರ ಮೇಲೆ ಪೆಗಾಸಸ್ ಬೇಹುಗಾರಿಕೆ ನಡೆಸಿರುವ ಆರೋಪದ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡದಿಂದ (ಎಸ್ಐಟಿ) ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.</p>.<p>ಈ ಕುರಿತು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ವಕೀಲ ಎಂ.ಎಲ್.ಶರ್ಮಾ, ‘ಪೆಗಾಸಸ್ ಗೂಢಚಾರಿಕೆ ಪ್ರಕರಣ, ದೇಶದ ಪ್ರಜಾಪ್ರಭುತ್ವ, ನ್ಯಾಯಾಂಗ ಮತ್ತು ದೇಶದ ಭದ್ರತೆ ಮೇಲೆ ನಡೆದಿರುವ ಗಂಭೀರವಾದ ದಾಳಿ. ಅಷ್ಟೇ ಅಲ್ಲ, ಈ ಬೇಹುಗಾರಿಕೆಯನ್ನು ಉತ್ತರಾದಾಯಿತ್ವ ಇಲ್ಲದೇ ಎಲ್ಲೆಂದರಲ್ಲಿ ಬಳಸಲಾಗುತ್ತಿದೆ. ಇದು ನೈತಿಕತೆಯನ್ನು ವಿರೂಪಗೊಳಿಸುವ‘ ಪ್ರಯತ್ನ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಖಾಸಗಿತನ ಎಂದರೆ ಕೇವಲ ಯಾರಿಗೂ ಹೇಳದಂತೆ ಮುಚ್ಚಿಟ್ಟುಕೊಳ್ಳುವ ವಿಚಾರವಲ್ಲ. ಅದು ನಮ್ಮ ಸ್ವಂತ ಆಲೋಚನೆಗಳು ಮತ್ತು ಅಸ್ತಿತ್ವವು ಬೇರೊಬ್ಬರ ಉದ್ದೇಶಗಳ ಸಾಧನವಾಗಬಾರದು ಎಂದು ರಕ್ಷಿಸುವ ಪ್ರಯತ್ನ. ಇದು ಘನತೆಯ ಅತ್ಯಗತ್ಯ ಅಂಶವಾಗಿದೆ‘ ಎಂದು ಅದು ಅರ್ಜಿಯಲ್ಲಿ ಹೇಳಲಾಗಿದೆ.</p>.<p>‘ಪೆಗಾಸಸ್ ಕೇವಲ ಕಣ್ಗಾವಲು ಸಾಧನವಷ್ಟೇ ಅಲ್ಲ. ಇದು ಭಾರತೀಯ ರಾಜಕೀಯದ ಮೇಲೆ ದಾಳಿ ಮಾಡಲು ಬಳಸುವ ಸೈಬರ್-ಆಯುಧವಾಗಿದೆ‘ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.</p>.<p>ಪೆಗಾಸಸ್ ಬೇಹುಗಾರಿಕೆ ಪ್ರಕರಣ ದಿನೇ ದಿನೇ ಬೆಳವಣಿಗೆ ಕಾಣುತ್ತಿದ್ದು, ಮುಂದಿನ ದಿನಗಳಲ್ಲಿ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪತ್ರಕರ್ತರು, ಹೋರಾಟಗಾರರು, ರಾಜಕೀಯ ನಾಯಕರು ಮತ್ತಿತರ ಮೇಲೆ ಪೆಗಾಸಸ್ ಬೇಹುಗಾರಿಕೆ ನಡೆಸಿರುವ ಆರೋಪದ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡದಿಂದ (ಎಸ್ಐಟಿ) ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.</p>.<p>ಈ ಕುರಿತು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ವಕೀಲ ಎಂ.ಎಲ್.ಶರ್ಮಾ, ‘ಪೆಗಾಸಸ್ ಗೂಢಚಾರಿಕೆ ಪ್ರಕರಣ, ದೇಶದ ಪ್ರಜಾಪ್ರಭುತ್ವ, ನ್ಯಾಯಾಂಗ ಮತ್ತು ದೇಶದ ಭದ್ರತೆ ಮೇಲೆ ನಡೆದಿರುವ ಗಂಭೀರವಾದ ದಾಳಿ. ಅಷ್ಟೇ ಅಲ್ಲ, ಈ ಬೇಹುಗಾರಿಕೆಯನ್ನು ಉತ್ತರಾದಾಯಿತ್ವ ಇಲ್ಲದೇ ಎಲ್ಲೆಂದರಲ್ಲಿ ಬಳಸಲಾಗುತ್ತಿದೆ. ಇದು ನೈತಿಕತೆಯನ್ನು ವಿರೂಪಗೊಳಿಸುವ‘ ಪ್ರಯತ್ನ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಖಾಸಗಿತನ ಎಂದರೆ ಕೇವಲ ಯಾರಿಗೂ ಹೇಳದಂತೆ ಮುಚ್ಚಿಟ್ಟುಕೊಳ್ಳುವ ವಿಚಾರವಲ್ಲ. ಅದು ನಮ್ಮ ಸ್ವಂತ ಆಲೋಚನೆಗಳು ಮತ್ತು ಅಸ್ತಿತ್ವವು ಬೇರೊಬ್ಬರ ಉದ್ದೇಶಗಳ ಸಾಧನವಾಗಬಾರದು ಎಂದು ರಕ್ಷಿಸುವ ಪ್ರಯತ್ನ. ಇದು ಘನತೆಯ ಅತ್ಯಗತ್ಯ ಅಂಶವಾಗಿದೆ‘ ಎಂದು ಅದು ಅರ್ಜಿಯಲ್ಲಿ ಹೇಳಲಾಗಿದೆ.</p>.<p>‘ಪೆಗಾಸಸ್ ಕೇವಲ ಕಣ್ಗಾವಲು ಸಾಧನವಷ್ಟೇ ಅಲ್ಲ. ಇದು ಭಾರತೀಯ ರಾಜಕೀಯದ ಮೇಲೆ ದಾಳಿ ಮಾಡಲು ಬಳಸುವ ಸೈಬರ್-ಆಯುಧವಾಗಿದೆ‘ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.</p>.<p>ಪೆಗಾಸಸ್ ಬೇಹುಗಾರಿಕೆ ಪ್ರಕರಣ ದಿನೇ ದಿನೇ ಬೆಳವಣಿಗೆ ಕಾಣುತ್ತಿದ್ದು, ಮುಂದಿನ ದಿನಗಳಲ್ಲಿ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>