<p><strong>ನವದೆಹಲಿ: </strong>ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ವೇಳೆ ಭಾಗವಹಿಸುವ ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆದೆಹಲಿ ಹೈಕೋರ್ಟ್ ಗುರುವಾರ ನೋಟಿಸ್ ನೀಡಿದೆ.</p>.<p>ಈ ಕುರಿತು ಉತ್ತರ ಪ್ರದೇಶದ ಮಾಜಿ ಡಿಜಿಪಿ ಮತ್ತು ಸೆಂಟರ್ ಫಾರ್ ಅಕೌಂಟೆಬಿಲಿಟಿ ಮತ್ತು ಸಿಸ್ಟಮಿಕ್ ಚೇಂಜ್ ಸಂಸ್ಥೆ ಅಧ್ಯಕ್ಷರಾಗಿರುವ ವಿಕ್ರಮ್ ಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರನ್ನೊಳಗೊಂಡ ಪೀಠ ನಡೆಸಿತು.</p>.<p>ಚುನಾವಣಾ ಪ್ರಚಾರದಲ್ಲಿ ತೊಡಗಿರುವವರು ಹಾಗೂ ಅಭ್ಯರ್ಥಿಗಳು, ಕೋವಿಡ್– 19 ಪ್ರಸರಣ ನಿಯಂತ್ರಿಸುವ ಸಂಬಂಧ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ಪದೇಪದೇ ಉಲ್ಲಂಘಿಸುತ್ತಿದ್ದಾರೆ ಎಂದು ಅರ್ಜಿದಾರರು ದೂರಿದ್ದಾರೆ.</p>.<p>ನ್ಯಾಯಪೀಠವು ಅರ್ಜಿಯ ವಿಚಾರಣೆಯನ್ನು ಏ. 30ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ವೇಳೆ ಭಾಗವಹಿಸುವ ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆದೆಹಲಿ ಹೈಕೋರ್ಟ್ ಗುರುವಾರ ನೋಟಿಸ್ ನೀಡಿದೆ.</p>.<p>ಈ ಕುರಿತು ಉತ್ತರ ಪ್ರದೇಶದ ಮಾಜಿ ಡಿಜಿಪಿ ಮತ್ತು ಸೆಂಟರ್ ಫಾರ್ ಅಕೌಂಟೆಬಿಲಿಟಿ ಮತ್ತು ಸಿಸ್ಟಮಿಕ್ ಚೇಂಜ್ ಸಂಸ್ಥೆ ಅಧ್ಯಕ್ಷರಾಗಿರುವ ವಿಕ್ರಮ್ ಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರನ್ನೊಳಗೊಂಡ ಪೀಠ ನಡೆಸಿತು.</p>.<p>ಚುನಾವಣಾ ಪ್ರಚಾರದಲ್ಲಿ ತೊಡಗಿರುವವರು ಹಾಗೂ ಅಭ್ಯರ್ಥಿಗಳು, ಕೋವಿಡ್– 19 ಪ್ರಸರಣ ನಿಯಂತ್ರಿಸುವ ಸಂಬಂಧ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ಪದೇಪದೇ ಉಲ್ಲಂಘಿಸುತ್ತಿದ್ದಾರೆ ಎಂದು ಅರ್ಜಿದಾರರು ದೂರಿದ್ದಾರೆ.</p>.<p>ನ್ಯಾಯಪೀಠವು ಅರ್ಜಿಯ ವಿಚಾರಣೆಯನ್ನು ಏ. 30ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>