ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಸಕಾಲದಲ್ಲಿ ಚುನಾವಣೆ ನಡೆಸಬೇಕು ಎಂದು ಕೋರಿ ಆಮ್ ಆದ್ಮಿ ಪಕ್ಷದ ಮೇಯರ್ ಅಭ್ಯರ್ಥಿ ಶೆಲ್ಲಿ ಒಬೆರಾಯ್ ಅವರು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಫೆ. 3ರಂದು ಕೈಗೆತ್ತಿಕೊಳ್ಳುವುದಾಗಿ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರಿದ್ದ ಪೀಠವು ಹೇಳಿದೆ.