ನವದೆಹಲಿ: ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯ್ದೆ 1991ರ ಕೆಲವು ಸೆಕ್ಷನ್ಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ನಿವೃತ್ತ ಸೇನಾ ಅಧಿಕಾರಿ ಅನಿಲ್ ಕಬೋತ್ರಾ ಅವರು ಈ ಅರ್ಜಿ ಸಲ್ಲಿಸಿ, ಕಾಯ್ದೆಯ ಸೆಕ್ಷನ್ 2, 3 ಮತ್ತು 4 ಭಾರತದ ಜಾತ್ಯತೀತ ತತ್ವವನ್ನು ಉಲ್ಲಂಘಿಸುತ್ತಿವೆ ಎಂದು ಆರೋಪಿಸಿದ್ದಾರೆ.
ಧಾರ್ಮಿಕ ಸ್ಥಳಗಳ ಯಥಾಸ್ಥಿತಿ ಕಾಯ್ದುಕೊಳ್ಳುವ ಕುರಿತಂತೆ ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಕಟ್ ಆಫ್ ದಿನಾಂಕವನ್ನು ನಿಗದಿ ಮಾಡಿದೆ. ಅದಕ್ಕಾಗಿ 1947ರ ಆಗಸ್ಟ್ 15ರ ದಿನಾಂಕ ಗುರುತು ಮಾಡಿದೆ ಎಂದು ಆರೋಪಿಸಿದ್ದಾರೆ.