<p><strong>ಚಂಡೀಗಡ: </strong>ಪಂಜಾಬ್ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ತಮ್ಮ ಹೇಳಿಕೆಗಳಿಂದ ಸಾಕಷ್ಟು ಸುದ್ದಿಗೆ ಗ್ರಾಸವಾಗುತ್ತಿದ್ದಾರೆ. ಇದು ಅದೇ ಹೆಸರಿನ ಭಾರತದ ಫುಟ್ಬಾಲ್ ತಂಡದ ಗೋಲ್ ಕೀಪರ್ ಅಮರಿಂದರ್ ಸಿಂಗ್ ಅವರಿಗೆ ಪೀಕಲಾಟಕ್ಕೆ ಕಾರಣವಾಗಿದೆ.</p>.<p>ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರಿಗೆ ಸಂಬಂಧಿಸಿದ ಸುದ್ದಿಗಳನ್ನು ಗೋಲ್ ಕೀಪರ್ ಅಮರಿಂದರ್ ಸಿಂಗ್ ಅವರಿಗೆ ಹಲವರು ತಪ್ಪಾಗಿ ಟ್ಯಾಗ್ ಮಾಡುತ್ತಿದ್ದಾರೆ. ಇದರಿಂದ ಬೇಸತ್ತಿರುವ ಅವರು, ನಾನವನಲ್ಲ, ನಾನು ಬೇರೆ ಎಂದು ಟ್ವಿಟರ್ನಲ್ಲಿ ಸ್ಪಷ್ಟನೆ ನೀಡಿದ್ದಾರೆ.</p>.<p>‘ಆತ್ಮೀಯ ಮಾಧ್ಯಮ ಮಿತ್ರರೇ, ನಾನು ಭಾರತೀಯ ಫುಟ್ಬಾಲ್ ತಂಡದ ಗೋಲ್ ಕೀಪರ್ ಅಮರಿಂದರ್ ಸಿಂಗ್, ಪಂಜಾಬ್ ರಾಜ್ಯದ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅಲ್ಲ. ದಯವಿಟ್ಟು ಟ್ಯಾಗ್ ಮಾಡುವುದನ್ನು ನಿಲ್ಲಿಸಿ’ ಎಂದು ಟ್ವೀಟ್ ಮಾಡಿದ್ದಾರೆ.</p>.<p>ಗೋಲ್ ಕೀಪರ್ ಅಮರಿಂದರ್ ಸಿಂಗ್ ಮನವಿ ಮಾಡಿರುವ ಟ್ವೀಟ್ ಅನ್ನು ರೀಟ್ವೀಟ್ ಮಾಡಿರುವ ಕ್ಯಾಪ್ಟನ್ ಅಮರಿಂದರ್ ಸಿಂಗ್, ‘ನನ್ನ ಯುವ ಸ್ನೇಹಿತ, ನಿಮ್ಮ ಬಗ್ಗೆ ನನಗೆ ಸಹಾನುಭೂತಿ ಇದೆ. ನಿಮ್ಮ ಮುಂದಿನ ಆಟಕ್ಕೆ ಶುಭವಾಗಲಿ’ಎಂದು ಬರೆದಿದ್ದಾರೆ.<br /><br />ಗೋಲ್ ಕೀಪರ್ ಅಮರಿಂದರ್ ಅವರು ಭಾರತ ಮತ್ತು ಎಟಿಕೆ ಮೋಹನ್ ಬಾಗನ್ಪರ ಆಡುತ್ತಿದ್ದಾರೆ. ಅಮರಿಂದರ್ ಸಿಂಗ್ ಅವರಿಗೆ ಬುಧವಾರ ಕೋವಿಡ್ ಪಾಸಿಟಿವ್ ಆಗಿದ್ದು, ಅಕ್ಟೋಬರ್ 1ರಿಂದ ಆರಂಭವಾಗಲಿರುವ ಎಸ್ಎಎಫ್ಎಫ್ ಚಾಂಪಿಯನ್ಶಿಪ್ನಲ್ಲಿ ಭಾವಹಿಸಲಿರುವ ಭಾರತ ತಂಡದಿಂದ ಹೊರಗುಳಿದಿದ್ದಾರೆ. ಈ ಕ್ರೀಡಾಕೂಟದ 23 ಜನರ ತಂಡದಲ್ಲಿ ಅಮರಿಂದರ್ ಸಿಂಗ್ ಅವರ ಬದಲಿಗೆ ಧೀರಜ್ ಸಿಂಗ್ ಮೊಯ್ರಾಂಗ್ಥೆಮ್ ಅವರನ್ನು ಸೇರಿಸಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ: </strong>ಪಂಜಾಬ್ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ತಮ್ಮ ಹೇಳಿಕೆಗಳಿಂದ ಸಾಕಷ್ಟು ಸುದ್ದಿಗೆ ಗ್ರಾಸವಾಗುತ್ತಿದ್ದಾರೆ. ಇದು ಅದೇ ಹೆಸರಿನ ಭಾರತದ ಫುಟ್ಬಾಲ್ ತಂಡದ ಗೋಲ್ ಕೀಪರ್ ಅಮರಿಂದರ್ ಸಿಂಗ್ ಅವರಿಗೆ ಪೀಕಲಾಟಕ್ಕೆ ಕಾರಣವಾಗಿದೆ.</p>.<p>ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರಿಗೆ ಸಂಬಂಧಿಸಿದ ಸುದ್ದಿಗಳನ್ನು ಗೋಲ್ ಕೀಪರ್ ಅಮರಿಂದರ್ ಸಿಂಗ್ ಅವರಿಗೆ ಹಲವರು ತಪ್ಪಾಗಿ ಟ್ಯಾಗ್ ಮಾಡುತ್ತಿದ್ದಾರೆ. ಇದರಿಂದ ಬೇಸತ್ತಿರುವ ಅವರು, ನಾನವನಲ್ಲ, ನಾನು ಬೇರೆ ಎಂದು ಟ್ವಿಟರ್ನಲ್ಲಿ ಸ್ಪಷ್ಟನೆ ನೀಡಿದ್ದಾರೆ.</p>.<p>‘ಆತ್ಮೀಯ ಮಾಧ್ಯಮ ಮಿತ್ರರೇ, ನಾನು ಭಾರತೀಯ ಫುಟ್ಬಾಲ್ ತಂಡದ ಗೋಲ್ ಕೀಪರ್ ಅಮರಿಂದರ್ ಸಿಂಗ್, ಪಂಜಾಬ್ ರಾಜ್ಯದ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅಲ್ಲ. ದಯವಿಟ್ಟು ಟ್ಯಾಗ್ ಮಾಡುವುದನ್ನು ನಿಲ್ಲಿಸಿ’ ಎಂದು ಟ್ವೀಟ್ ಮಾಡಿದ್ದಾರೆ.</p>.<p>ಗೋಲ್ ಕೀಪರ್ ಅಮರಿಂದರ್ ಸಿಂಗ್ ಮನವಿ ಮಾಡಿರುವ ಟ್ವೀಟ್ ಅನ್ನು ರೀಟ್ವೀಟ್ ಮಾಡಿರುವ ಕ್ಯಾಪ್ಟನ್ ಅಮರಿಂದರ್ ಸಿಂಗ್, ‘ನನ್ನ ಯುವ ಸ್ನೇಹಿತ, ನಿಮ್ಮ ಬಗ್ಗೆ ನನಗೆ ಸಹಾನುಭೂತಿ ಇದೆ. ನಿಮ್ಮ ಮುಂದಿನ ಆಟಕ್ಕೆ ಶುಭವಾಗಲಿ’ಎಂದು ಬರೆದಿದ್ದಾರೆ.<br /><br />ಗೋಲ್ ಕೀಪರ್ ಅಮರಿಂದರ್ ಅವರು ಭಾರತ ಮತ್ತು ಎಟಿಕೆ ಮೋಹನ್ ಬಾಗನ್ಪರ ಆಡುತ್ತಿದ್ದಾರೆ. ಅಮರಿಂದರ್ ಸಿಂಗ್ ಅವರಿಗೆ ಬುಧವಾರ ಕೋವಿಡ್ ಪಾಸಿಟಿವ್ ಆಗಿದ್ದು, ಅಕ್ಟೋಬರ್ 1ರಿಂದ ಆರಂಭವಾಗಲಿರುವ ಎಸ್ಎಎಫ್ಎಫ್ ಚಾಂಪಿಯನ್ಶಿಪ್ನಲ್ಲಿ ಭಾವಹಿಸಲಿರುವ ಭಾರತ ತಂಡದಿಂದ ಹೊರಗುಳಿದಿದ್ದಾರೆ. ಈ ಕ್ರೀಡಾಕೂಟದ 23 ಜನರ ತಂಡದಲ್ಲಿ ಅಮರಿಂದರ್ ಸಿಂಗ್ ಅವರ ಬದಲಿಗೆ ಧೀರಜ್ ಸಿಂಗ್ ಮೊಯ್ರಾಂಗ್ಥೆಮ್ ಅವರನ್ನು ಸೇರಿಸಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>