ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರನ್ನು ವಿಭಜಿಸುವ ಯತ್ನ: ಮೋದಿ ಎಚ್ಚರಿಕೆ

ಬಿಬಿಸಿ ಸಾಕ್ಷ್ಯಚಿತ್ರದ ಹಿನ್ನೆಲೆಯಲ್ಲಿ ಪ್ರಧಾನಿ ಕಿವಿಮಾತು
Last Updated 29 ಜನವರಿ 2023, 11:12 IST
ಅಕ್ಷರ ಗಾತ್ರ

ನವದೆಹಲಿ: ‘ದೇಶದ ಜನರಲ್ಲಿ ಭಿನ್ನಾಭಿಪ್ರಾಯದ ಬೀಜ ಬಿತ್ತುವ, ಆ ಮೂಲಕ ಜನರನ್ನು ವಿಭಜಿಸುವ ಯತ್ನಗಳ ಬಗ್ಗೆ ಎಚ್ಚರದಿಂದಿರಬೇಕು’ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ಇಂಥ ಪ್ರಯತ್ನಗಳು ಫಲ ನೀಡವು ಎಂದು ಪ್ರತಿಪಾದಿಸಿದರು.

ಇಲ್ಲಿನ ಕಂಟೋನ್ಮೆಂಟ್‌ನಲ್ಲಿರುವ ಕಾರಿಯಪ್ಪ ಮೈದಾನದಲ್ಲಿ ನಡೆದ ಎನ್‌ಸಿಸಿ ರ‍್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಭಾರತದ ಭವಿಷ್ಯ ಉಜ್ವಲವಾಗಲು, ಅಭಿವೃದ್ಧಿ ಸಾಧಿಸಲು ಏಕತೆ ಎಂಬ ಮಂತ್ರವೊಂದರಿಂದ ಸಾಧ್ಯ’ ಎಂದು ಮೋದಿ ಹೇಳಿದರು.

ಗುಜರಾತ್‌ ಗಲಭೆ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರವು ದೇಶದಲ್ಲಿ ವಿವಾದ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಈ ಹೇಳಿಕೆಗೆ ಮಹತ್ವ ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

‘ದೇಶದಲ್ಲಿ ಯುವಕರ ಸಂಖ್ಯೆ ಅಧಿಕ. ಇದೇ ದೇಶದ ಶಕ್ತಿ. ಯುವ ಜನತೆಯ ಅಭ್ಯುದಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಡಿಜಿಟಲ್‌, ಸ್ಟಾರ್ಟ್‌ ಅಪ್ ಹಾಗೂ ನವೀನ ತಂತ್ರಜ್ಞಾನ ಕ್ಷೇತ್ರದಲ್ಲಿ ನಮ್ಮ ಸರ್ಕಾರ ಕ್ರಾಂತಿಯನ್ನೇ ಮಾಡಿದೆ. ಈ ಕಾರಣಕ್ಕಾಗಿಯೇ ವಿಶ್ವವು ಇಂದು ಭಾರತದತ್ತ ಮುಖಮಾಡಿದೆ’ ಎಂದರು.

‘ದೇಶವನ್ನು ಒಡೆಯುವ ಸಲುವಾಗಿ ಹಲವಾರು ನೆಪಗಳನ್ನು ಹುಡುಕಲಾಗುತ್ತದೆ. ತಾಯಿ ಭಾರತಿಯ ಮಕ್ಕಳ ನಡುವೆ ಕಂದಕ ಸೃಷ್ಟಿಸಲು ನೂರಾರು ವಿಷಯಗಳನ್ನು ಮುನ್ನೆಲೆಗೆ ತರಲಾಗುತ್ತದೆ. ಈ ಬಗ್ಗೆ ಎಲ್ಲರೂ ಎಚ್ಚರದಿಂದಿರಬೇಕು’ ಎಂದು ಮೋದಿ ಹೇಳಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT