ಮುಖ್ಯಮಂತ್ರಿ ಜೈರಾಮ್ ಠಾಕೂರ್ ನೇತೃತ್ವದ ಬಿಜೆಪಿ ಸರ್ಕಾರದ ನಾಲ್ಕನೇ ವರ್ಷ ಪೂರ್ಣಗೊಳಿಸಿದ್ದು, ಇದರ ಅಂಗವಾಗಿ ಮಂಡಿಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, 'ಕೇಂದ್ರವು ಪ್ರಾರಂಭಿಸಿದ ವಿವಿಧ ಜನಪರ ಯೋಜನೆಗಳನ್ನು ಹಿಮಾಚಲ ಪ್ರದೇಶದಲ್ಲಿ ಠಾಕೂರ್ ಸರ್ಕಾರವು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದ ಪರಿಣಾಮ ಕಳೆದ ನಾಲ್ಕು ವರ್ಷಗಳಲ್ಲಿ ಜನರು ಹೆಚ್ಚು ಪ್ರಯೋಜನ ಪಡೆದಿದ್ದಾರೆ' ಎಂದು ಹೇಳಿದರು.