‘ಕೆಲವು ಜನರಿಗೆ ಕಾಶಿ ವಿಶ್ವನಾಥ ಧಾಮ, ರಾಮ ಮಂದಿರ, ಗಂಗಾ ನದಿ ಸ್ವಚ್ಛತೆ ಬಗ್ಗೆ ಸಮಸ್ಯೆ ಇದೆ. ಸೇನಾ ಕಾರ್ಯಾಚರಣೆಯ ಬಗ್ಗೆಯೂ ಇವೇ ಜನರು ಪ್ರಶ್ನೆಗಳನ್ನು ಎತ್ತುತ್ತಾರೆ. ಕೊರೊನಾ ಲಸಿಕೆಯ ಬಗ್ಗೆಯೂ ಅವರು ಪ್ರಶ್ನೆ ಕೇಳುತ್ತಾರೆ’ ಎಂದು ಮೋದಿ ಅವರು ಪ್ರತಿಸ್ಪರ್ಧಿ ಪಕ್ಷಗಳ ನಾಯಕರನ್ನು ಪರೋಕ್ಷವಾಗಿ ಉಲ್ಲೇಖಿಸಿ ಹೇಳಿದ್ದಾರೆ.