<p class="title"><strong>ನವದೆಹಲಿ:</strong> ‘ಸ್ವಾಮಿತ್ವ’ (ಮಾಲೀಕತ್ವ) ಯೋಜನೆಯಡಿ ಗ್ರಾಮೀಣ ಕುಟುಂಬಗಳಿಗೆ ‘ಆಸ್ತಿ ಹಕ್ಕು’ ಕಾರ್ಡ್ ನೀಡುವ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.</p>.<p class="bodytext">‘ಇದೊಂದು ಐತಿಹಾಸಿಕ ಹೆಜ್ಜೆ’ ಎಂದು ಪ್ರಧಾನಿ ಬಣ್ಣಿಸಿದರು. ಗ್ರಾಮೀಣ ಕುಟುಂಬಗಳು ಸಾಲ ಮತ್ತು ಇತರೆ ಹಣಕಾಸು ಸೌಲಭ್ಯಗಳನ್ನು ಪಡೆಯಲು ಈ ಕಾರ್ಡ್ ಅನ್ನು ಬಳಸಬಹುದಾಗಿದೆ.</p>.<p class="bodytext">ಯೋಜನೆಗೆ ಚಾಲನೆ ನೀಡಿರುವುದರಿಂದ ಮೊದಲ ಹಂತದಲ್ಲಿ ಸುಮಾರು 1 ಲಕ್ಷ ಕುಟುಂಬಗಳು ತಮಗೆ ಕಳುಹಿಸಲಾದ ಎಸ್.ಎಂ.ಎಸ್ ಲಿಂಕ್ ಬಳಸಿ ಆಸ್ತಿ ಕಾರ್ಡ್ಗಳನ್ನ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.</p>.<p class="bodytext">ಈ ಫಲಾನುಭವಿ ಕುಟುಂಬಗಳನ್ನು ಕರ್ನಾಟಕದ ಎರಡು ಗ್ರಾಮಗಳು ಸೇರಿದಂತೆ ದೇಶದಾದ್ಯಂತ 763 ಗ್ರಾಮಗಳಿಂದ ಆಯ್ಕೆ ಮಾಡಲಾಗಿದೆ. ಉಳಿದಂತೆ, ಉತ್ತರ ಪ್ರದೇಶದ 346, ಹರಿಯಾಣದ 221, ಮಹಾರಾಷ್ಟ್ರದ 100, ಮಧ್ಯಪ್ರದೇಶದ 44 ಮತ್ತು ಉತ್ತರಾಖಂಡದ 50 ಗ್ರಾಮಗಳು ಸೇರಿವೆ.</p>.<p class="bodytext">‘ಸ್ವಾಮಿತ್ವ‘ ಯೋಜನೆಯಡಿ ಆಯ್ಕೆಯಾದ ಗ್ರಾಮಗಳ ಕೆಲ ಫಲಾನುಭವಿಗಳ ಜೊತೆಗೂ ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ಸಂವಾದ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ‘ಸ್ವಾಮಿತ್ವ’ (ಮಾಲೀಕತ್ವ) ಯೋಜನೆಯಡಿ ಗ್ರಾಮೀಣ ಕುಟುಂಬಗಳಿಗೆ ‘ಆಸ್ತಿ ಹಕ್ಕು’ ಕಾರ್ಡ್ ನೀಡುವ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.</p>.<p class="bodytext">‘ಇದೊಂದು ಐತಿಹಾಸಿಕ ಹೆಜ್ಜೆ’ ಎಂದು ಪ್ರಧಾನಿ ಬಣ್ಣಿಸಿದರು. ಗ್ರಾಮೀಣ ಕುಟುಂಬಗಳು ಸಾಲ ಮತ್ತು ಇತರೆ ಹಣಕಾಸು ಸೌಲಭ್ಯಗಳನ್ನು ಪಡೆಯಲು ಈ ಕಾರ್ಡ್ ಅನ್ನು ಬಳಸಬಹುದಾಗಿದೆ.</p>.<p class="bodytext">ಯೋಜನೆಗೆ ಚಾಲನೆ ನೀಡಿರುವುದರಿಂದ ಮೊದಲ ಹಂತದಲ್ಲಿ ಸುಮಾರು 1 ಲಕ್ಷ ಕುಟುಂಬಗಳು ತಮಗೆ ಕಳುಹಿಸಲಾದ ಎಸ್.ಎಂ.ಎಸ್ ಲಿಂಕ್ ಬಳಸಿ ಆಸ್ತಿ ಕಾರ್ಡ್ಗಳನ್ನ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.</p>.<p class="bodytext">ಈ ಫಲಾನುಭವಿ ಕುಟುಂಬಗಳನ್ನು ಕರ್ನಾಟಕದ ಎರಡು ಗ್ರಾಮಗಳು ಸೇರಿದಂತೆ ದೇಶದಾದ್ಯಂತ 763 ಗ್ರಾಮಗಳಿಂದ ಆಯ್ಕೆ ಮಾಡಲಾಗಿದೆ. ಉಳಿದಂತೆ, ಉತ್ತರ ಪ್ರದೇಶದ 346, ಹರಿಯಾಣದ 221, ಮಹಾರಾಷ್ಟ್ರದ 100, ಮಧ್ಯಪ್ರದೇಶದ 44 ಮತ್ತು ಉತ್ತರಾಖಂಡದ 50 ಗ್ರಾಮಗಳು ಸೇರಿವೆ.</p>.<p class="bodytext">‘ಸ್ವಾಮಿತ್ವ‘ ಯೋಜನೆಯಡಿ ಆಯ್ಕೆಯಾದ ಗ್ರಾಮಗಳ ಕೆಲ ಫಲಾನುಭವಿಗಳ ಜೊತೆಗೂ ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ಸಂವಾದ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>