<p><strong>ಪುದುಚೇರಿ (ಪಿಟಿಐ):</strong> ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನೆರವು ನೀಡುವುದು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದರು.</p>.<p>ಪೂರ್ಣಗೊಂಡ ವಿವಿಧ ಯೋಜನೆಗಳ ಉದ್ಘಾಟನೆ, ಹಲವು ಯೋಜನೆಗಳಡಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ನಂತರ ಅವರು ಮಾತನಾಡಿದರು.</p>.<p>‘ದೇಶದ ಅಭಿವೃದ್ಧಿಗೆ ಉತ್ತಮ ರಸ್ತೆ ಸೇರಿದಂತೆ ಸಂಪರ್ಕ ಜಾಲ ಅಗತ್ಯ. ಉತ್ತಮ ಸಂಪರ್ಕ ರಸ್ತೆಗಳ ನಿರ್ಮಾಣದಿಂದ ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆಯೂ ಲಭಿಸುತ್ತದೆ’ ಎಂದರು.</p>.<p>ರಾಷ್ಟ್ರೀಯ ಹೆದ್ದಾರಿ 45ಎ ಪೈಕಿ ಸತ್ಯನಾಥಪುರಂ–ನಾಗಪಟ್ಟಿನಂ ನಡುವಿನ ಹೆದ್ದಾರಿಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗೆ ಉತ್ತೇಜನ ಸಿಗಲಿದೆ ಎಂದರು.</p>.<p>‘ಪುದುಚೇರಿ ಅಗಾಧ ಮಾನವ ಸಂಪನ್ಮೂಲ ಹೊಂದಿದೆ. ಪ್ರವಾಸೋದ್ಯಮಕ್ಕೂ ಇಲ್ಲಿ ವಿಪುಲ ಅವಕಾಶಗಳಿವೆ. ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವುದರಿಂದ ಉದ್ಯಮಗಳು ಬೆಳೆಯುತ್ತವೆ. ಉದ್ಯೋಗಾವಕಾಶಗಳು ಹೆಚ್ಚಲಿವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p class="Briefhead"><strong>ರಾಹುಲ್ ವಿರುದ್ಧ ವಾಗ್ದಾಳಿ</strong></p>.<p>‘ದೇಶವನ್ನಾಗಳಿದ ಬ್ರಿಟಿಷರು ವಿಭಜಿಸಿ ಆಳುವ ನೀತಿ ಅನುಸರಿಸುತ್ತಿದ್ದರು. ಈಗಿನ ಕಾಂಗ್ರೆಸ್ ಜನರನ್ನು ವಿಭಜಿಸಿ, ಸುಳ್ಳು ಹೇಳಿ, ಆಡಳಿತ ನಡೆಸುವ ನೀತಿಯನ್ನು ಅನುಸರಿಸುತ್ತಿದೆ’ ಎಂದು ಪ್ರಧಾನಿ ಮೋದಿ ಟೀಕಿಸಿದರು.</p>.<p>ಚುನಾವಣೆ ಹೊಸ್ತಿಲಲ್ಲಿರುವ ಪುದುಚೇರಿಯಲ್ಲಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧವೂ ವಾಗ್ದಾಳಿ ನಡೆಸಿದರು.</p>.<p>‘ಕಾಂಗ್ರೆಸ್ನ ಕೆಲವು ಮುಖಂಡರು ಒಂದು ಪ್ರದೇಶದ ವಿರುದ್ಧ ಮತ್ತೊಂದು ಪ್ರದೇಶವನ್ನು, ಒಂದು ಸಮುದಾಯದ ವಿರುದ್ಧ ಮತ್ತೊಂದು ಸಮುದಾಯವನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>ಇತ್ತೀಚೆಗೆ ಕೇರಳಕ್ಕೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ‘ಉತ್ತರ ಭಾರತದಲ್ಲಿ ಬೇರೆ ರೀತಿಯ ರಾಜಕಾರಣದಲ್ಲಿ ತೊಡಗಿರುವ ನನಗೆ, ದಕ್ಷಿಣದಲ್ಲಿನ ರಾಜಕಾರಣ ಚೇತೋಹಾರಿ ಎನಿಸುತ್ತದೆ’ ಎಂದು ಹೇಳಿದ್ದರು.</p>.<p>‘ಮೀನುಗಾರಿಕೆಗೆ ಸಂಬಂಧಿಸಿ ಕೇಂದ್ರದಲ್ಲಿ ಪ್ರತ್ಯೇಕ ಸಚಿವಾಲಯವನ್ನು 2019ರಲ್ಲಿ ಎನ್ಡಿಎ ಸರ್ಕಾರ ರಚಿಸಿತು. ಅಲ್ಲಿಯವರೆಗೂ ಇಂಥ ಸಚಿವಾಲಯವೇ ಇರಲಿಲ್ಲ ಎಂದರೆ ಅಚ್ಚರಿ ಎನಿಸುತ್ತದೆ’ ಎನ್ನುವ ಮೂಲಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.</p>.<p>ಪುದುಚೇರಿ ಮುಖ್ಯಮಂತ್ರಿಯಾಗಿದ್ದ ವಿ.ನಾರಾಯಣಸ್ವಾಮಿ ಅವರ ಆದ್ಯತೆಗಳೇ ಬೇರೆ ಇದ್ದವು. ಅವರು ಜನರ ಕಲ್ಯಾಣವನ್ನು ನಿರ್ಲಕ್ಷಿಸಿದ್ದರು ಎಂದೂ ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುದುಚೇರಿ (ಪಿಟಿಐ):</strong> ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನೆರವು ನೀಡುವುದು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದರು.</p>.<p>ಪೂರ್ಣಗೊಂಡ ವಿವಿಧ ಯೋಜನೆಗಳ ಉದ್ಘಾಟನೆ, ಹಲವು ಯೋಜನೆಗಳಡಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ನಂತರ ಅವರು ಮಾತನಾಡಿದರು.</p>.<p>‘ದೇಶದ ಅಭಿವೃದ್ಧಿಗೆ ಉತ್ತಮ ರಸ್ತೆ ಸೇರಿದಂತೆ ಸಂಪರ್ಕ ಜಾಲ ಅಗತ್ಯ. ಉತ್ತಮ ಸಂಪರ್ಕ ರಸ್ತೆಗಳ ನಿರ್ಮಾಣದಿಂದ ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆಯೂ ಲಭಿಸುತ್ತದೆ’ ಎಂದರು.</p>.<p>ರಾಷ್ಟ್ರೀಯ ಹೆದ್ದಾರಿ 45ಎ ಪೈಕಿ ಸತ್ಯನಾಥಪುರಂ–ನಾಗಪಟ್ಟಿನಂ ನಡುವಿನ ಹೆದ್ದಾರಿಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗೆ ಉತ್ತೇಜನ ಸಿಗಲಿದೆ ಎಂದರು.</p>.<p>‘ಪುದುಚೇರಿ ಅಗಾಧ ಮಾನವ ಸಂಪನ್ಮೂಲ ಹೊಂದಿದೆ. ಪ್ರವಾಸೋದ್ಯಮಕ್ಕೂ ಇಲ್ಲಿ ವಿಪುಲ ಅವಕಾಶಗಳಿವೆ. ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವುದರಿಂದ ಉದ್ಯಮಗಳು ಬೆಳೆಯುತ್ತವೆ. ಉದ್ಯೋಗಾವಕಾಶಗಳು ಹೆಚ್ಚಲಿವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p class="Briefhead"><strong>ರಾಹುಲ್ ವಿರುದ್ಧ ವಾಗ್ದಾಳಿ</strong></p>.<p>‘ದೇಶವನ್ನಾಗಳಿದ ಬ್ರಿಟಿಷರು ವಿಭಜಿಸಿ ಆಳುವ ನೀತಿ ಅನುಸರಿಸುತ್ತಿದ್ದರು. ಈಗಿನ ಕಾಂಗ್ರೆಸ್ ಜನರನ್ನು ವಿಭಜಿಸಿ, ಸುಳ್ಳು ಹೇಳಿ, ಆಡಳಿತ ನಡೆಸುವ ನೀತಿಯನ್ನು ಅನುಸರಿಸುತ್ತಿದೆ’ ಎಂದು ಪ್ರಧಾನಿ ಮೋದಿ ಟೀಕಿಸಿದರು.</p>.<p>ಚುನಾವಣೆ ಹೊಸ್ತಿಲಲ್ಲಿರುವ ಪುದುಚೇರಿಯಲ್ಲಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧವೂ ವಾಗ್ದಾಳಿ ನಡೆಸಿದರು.</p>.<p>‘ಕಾಂಗ್ರೆಸ್ನ ಕೆಲವು ಮುಖಂಡರು ಒಂದು ಪ್ರದೇಶದ ವಿರುದ್ಧ ಮತ್ತೊಂದು ಪ್ರದೇಶವನ್ನು, ಒಂದು ಸಮುದಾಯದ ವಿರುದ್ಧ ಮತ್ತೊಂದು ಸಮುದಾಯವನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>ಇತ್ತೀಚೆಗೆ ಕೇರಳಕ್ಕೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ‘ಉತ್ತರ ಭಾರತದಲ್ಲಿ ಬೇರೆ ರೀತಿಯ ರಾಜಕಾರಣದಲ್ಲಿ ತೊಡಗಿರುವ ನನಗೆ, ದಕ್ಷಿಣದಲ್ಲಿನ ರಾಜಕಾರಣ ಚೇತೋಹಾರಿ ಎನಿಸುತ್ತದೆ’ ಎಂದು ಹೇಳಿದ್ದರು.</p>.<p>‘ಮೀನುಗಾರಿಕೆಗೆ ಸಂಬಂಧಿಸಿ ಕೇಂದ್ರದಲ್ಲಿ ಪ್ರತ್ಯೇಕ ಸಚಿವಾಲಯವನ್ನು 2019ರಲ್ಲಿ ಎನ್ಡಿಎ ಸರ್ಕಾರ ರಚಿಸಿತು. ಅಲ್ಲಿಯವರೆಗೂ ಇಂಥ ಸಚಿವಾಲಯವೇ ಇರಲಿಲ್ಲ ಎಂದರೆ ಅಚ್ಚರಿ ಎನಿಸುತ್ತದೆ’ ಎನ್ನುವ ಮೂಲಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.</p>.<p>ಪುದುಚೇರಿ ಮುಖ್ಯಮಂತ್ರಿಯಾಗಿದ್ದ ವಿ.ನಾರಾಯಣಸ್ವಾಮಿ ಅವರ ಆದ್ಯತೆಗಳೇ ಬೇರೆ ಇದ್ದವು. ಅವರು ಜನರ ಕಲ್ಯಾಣವನ್ನು ನಿರ್ಲಕ್ಷಿಸಿದ್ದರು ಎಂದೂ ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>