<p class="title"><strong>ನವದೆಹಲಿ</strong>: ನೈಸರ್ಗಿಕ ವಿಕೋಪಗಳು ಅಥವಾ ಮಾನವೀಯ ಬಿಕ್ಕಟ್ಟಿನ ಸಂದರ್ಭಗಳಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಭಾರತವು ಅಗತ್ಯ ವೈದ್ಯಕೀಯ ನೆರವು ಒದಗಿಸುವ ‘ಆರೋಗ್ಯ ಮೈತ್ರಿ’ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಘೋಷಿಸಿದ್ದಾರೆ. </p>.<p class="title">ಈ ದೇಶಗಳ ಸಮಸ್ಯೆಗಳ ಪರಿಹಾರಕ್ಕಾಗಿ ‘ಉತ್ಕೃಷ್ಟತಾ ಕೇಂದ್ರ’ವನ್ನೂ ಸ್ಥಾಪಿಸಲಾಗುವುದು ಎಂದೂ ಅವರು ಹೇಳಿದ್ದಾರೆ. </p>.<p class="bodytext">‘ವಾಯ್ಸ್ ಆಫ್ ಗ್ಲೋಬಲ್ ಸೌತ್ ವರ್ಚುವಲ್’ ಶೃಂಗಸಭೆಯ ಮುಕ್ತಾಯದ ಅಧಿವೇಶನದಲ್ಲಿ ಮಾತನಾಡಿದ ಅವರು, ‘ಭಾರತವು ತನ್ನ ಪರಿಣತಿಯನ್ನು ಇತರ ಅಭಿವೃದ್ಧಿಶೀಲ ರಾಷ್ಟ್ರಗಳೊಂದಿಗೆ ಹಂಚಿಕೊಳ್ಳಲು ‘ವಿಜ್ಞಾನ ಮತ್ತು ತಂತ್ರಜ್ಞಾನ ಉಪಕ್ರಮ’ವನ್ನು ಪ್ರಾರಂಭಿಸುತ್ತದೆ ಎಂದು ಹೇಳಿದ್ದಾರೆ. </p>.<p class="bodytext">‘ಅಭಿವೃದ್ಧಿಶೀಲ ರಾಷ್ಟ್ರಗಳ ವಿದ್ಯಾರ್ಥಿಗಳು ಭಾರತದಲ್ಲಿ ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ‘ಗ್ಲೋಬಲ್ ಸೌತ್ ಸ್ಕಾಲರ್ಶಿಪ್’ ಅನ್ನೂ ಸ್ಥಾಪಿಸಲಾಗುವುದು ಎಂದು ಮೋದಿ ಇದೇ ಸಂದರ್ಭದಲ್ಲಿ ಪ್ರಕಟಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ನೈಸರ್ಗಿಕ ವಿಕೋಪಗಳು ಅಥವಾ ಮಾನವೀಯ ಬಿಕ್ಕಟ್ಟಿನ ಸಂದರ್ಭಗಳಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಭಾರತವು ಅಗತ್ಯ ವೈದ್ಯಕೀಯ ನೆರವು ಒದಗಿಸುವ ‘ಆರೋಗ್ಯ ಮೈತ್ರಿ’ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಘೋಷಿಸಿದ್ದಾರೆ. </p>.<p class="title">ಈ ದೇಶಗಳ ಸಮಸ್ಯೆಗಳ ಪರಿಹಾರಕ್ಕಾಗಿ ‘ಉತ್ಕೃಷ್ಟತಾ ಕೇಂದ್ರ’ವನ್ನೂ ಸ್ಥಾಪಿಸಲಾಗುವುದು ಎಂದೂ ಅವರು ಹೇಳಿದ್ದಾರೆ. </p>.<p class="bodytext">‘ವಾಯ್ಸ್ ಆಫ್ ಗ್ಲೋಬಲ್ ಸೌತ್ ವರ್ಚುವಲ್’ ಶೃಂಗಸಭೆಯ ಮುಕ್ತಾಯದ ಅಧಿವೇಶನದಲ್ಲಿ ಮಾತನಾಡಿದ ಅವರು, ‘ಭಾರತವು ತನ್ನ ಪರಿಣತಿಯನ್ನು ಇತರ ಅಭಿವೃದ್ಧಿಶೀಲ ರಾಷ್ಟ್ರಗಳೊಂದಿಗೆ ಹಂಚಿಕೊಳ್ಳಲು ‘ವಿಜ್ಞಾನ ಮತ್ತು ತಂತ್ರಜ್ಞಾನ ಉಪಕ್ರಮ’ವನ್ನು ಪ್ರಾರಂಭಿಸುತ್ತದೆ ಎಂದು ಹೇಳಿದ್ದಾರೆ. </p>.<p class="bodytext">‘ಅಭಿವೃದ್ಧಿಶೀಲ ರಾಷ್ಟ್ರಗಳ ವಿದ್ಯಾರ್ಥಿಗಳು ಭಾರತದಲ್ಲಿ ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ‘ಗ್ಲೋಬಲ್ ಸೌತ್ ಸ್ಕಾಲರ್ಶಿಪ್’ ಅನ್ನೂ ಸ್ಥಾಪಿಸಲಾಗುವುದು ಎಂದು ಮೋದಿ ಇದೇ ಸಂದರ್ಭದಲ್ಲಿ ಪ್ರಕಟಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>