ಪಂಜಾಬ್ನ ಫಿರೋಜ್ಪುರದಲ್ಲಿ ನಡೆಯಬೇಕಿದ್ದ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಳ್ಳಲು ರಸ್ತೆ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ರಸ್ತೆತಡೆ ಕಾರಣ ಮೇಲ್ಸೇತುವೆಯಲ್ಲಿ 15ರಿಂದ 20 ನಿಮಿಷ ಸಿಲುಕಿದ್ದರು. ಮೋದಿ ಅವರ ಪಂಜಾಬ್ ಭೇಟಿಯನ್ನು ವಿರೋಧಿಸಿ ರೈತ ಸಂಘಟನೆಯು ರಸ್ತೆತಡೆ ನಡೆಸಿತ್ತು. ಇದರಿಂದಾಗಿ ಪ್ರಧಾನಿ ತಮ್ಮ ಕಾರ್ಯಕ್ರಮವನ್ನು ರದ್ದುಗೊಳಿಸಿ ವಾಪಸ್ ಆಗಿದ್ದರು.