<p><strong>ನವದೆಹಲಿ:</strong> ಸಕಾರಾತ್ಮಕ ಮನೋಭಾವವು ಸಕಾರಾತ್ಮಕ ಫಲಿತಾಂಶಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ಆಸ್ಟ್ರೇಲಿಯಾ ವಿರುದ್ಧದ ‘ಗಾಬಾ ಟೆಸ್ಟ್’ ಪಂದ್ಯದಲ್ಲಿ ಭಾರತವು ಜಯ ಗಳಿಸಿದ್ದನ್ನು ಪ್ರಧಾನಿ ನರೇಂದ್ರ ಮೋದಿ ಉಲ್ಲೇಖಿಸಿದ್ದಾರೆ. ‘ಆತ್ಮ ನಿರ್ಭರ ಭಾರತ’ಕ್ಕೆ ಸಕಾರಾತ್ಮಕ ಮನೋಭಾವ ಅತಿ ಮುಖ್ಯ ಎಂದು ಅವರು ಹೇಳಿದ್ದಾರೆ.</p>.<p>ತೇಜ್ಪುರ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ‘ಆತ್ಮ ನಿರ್ಭರ ಭಾರತ’ಕ್ಕಾಗಿ ವಿದ್ಯಾರ್ಥಿಗಳು ಪ್ರಯತ್ನಿಸಬೇಕು. ಸುಧಾರಿತ ಸಂಪರ್ಕ, ಆರೋಗ್ಯ ಮತ್ತು ಶಿಕ್ಷಣದೊಂದಿಗೆ ಈಶಾನ್ಯದಲ್ಲಿ ಹೊಸ ಅವಕಾಶಗಳು ತೆರೆದುಕೊಳ್ಳುತ್ತಿವೆ ಎಂದು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/pm-modi-calls-on-youth-to-work-for-new-india-through-atmanirbhar-bharat-798590.html" itemprop="url">'ಆತ್ಮನಿರ್ಭರ ಭಾರತ್‘ ಮೂಲಕ ನವ ಭಾರತಕ್ಕಾಗಿ ಕೆಲಸ ಮಾಡಲು ಪ್ರಧಾನಿ ಮೋದಿ ಕರೆ</a></p>.<p>ಯುವ ಕ್ರಿಕೆಟಿಗರನ್ನು ಒಳಗೊಂಡ ತಂಡವನ್ನು ಶ್ಲಾಘಿಸಿದ ಮೋದಿ, ರಿಸ್ಕ್ ತೆಗೆದುಕೊಳ್ಳುವ ಮೂಲಕ ವೈಫಲ್ಯವನ್ನು ಮೀರಿ ನಿಲ್ಲಲು ಯತ್ನಿಸಬೇಕು. ‘ಆತ್ಮ ನಿರ್ಭರ ಭಾರತ’ ಯೋಜನೆಯು ನಮ್ಮ ಪ್ರತಿ ದಿನದ ಕೆಲಸಗಳ ಅಂಗವಾಗಿಬಿಟ್ಟಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಕಾರಾತ್ಮಕ ಮನೋಭಾವವು ಸಕಾರಾತ್ಮಕ ಫಲಿತಾಂಶಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ಆಸ್ಟ್ರೇಲಿಯಾ ವಿರುದ್ಧದ ‘ಗಾಬಾ ಟೆಸ್ಟ್’ ಪಂದ್ಯದಲ್ಲಿ ಭಾರತವು ಜಯ ಗಳಿಸಿದ್ದನ್ನು ಪ್ರಧಾನಿ ನರೇಂದ್ರ ಮೋದಿ ಉಲ್ಲೇಖಿಸಿದ್ದಾರೆ. ‘ಆತ್ಮ ನಿರ್ಭರ ಭಾರತ’ಕ್ಕೆ ಸಕಾರಾತ್ಮಕ ಮನೋಭಾವ ಅತಿ ಮುಖ್ಯ ಎಂದು ಅವರು ಹೇಳಿದ್ದಾರೆ.</p>.<p>ತೇಜ್ಪುರ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ‘ಆತ್ಮ ನಿರ್ಭರ ಭಾರತ’ಕ್ಕಾಗಿ ವಿದ್ಯಾರ್ಥಿಗಳು ಪ್ರಯತ್ನಿಸಬೇಕು. ಸುಧಾರಿತ ಸಂಪರ್ಕ, ಆರೋಗ್ಯ ಮತ್ತು ಶಿಕ್ಷಣದೊಂದಿಗೆ ಈಶಾನ್ಯದಲ್ಲಿ ಹೊಸ ಅವಕಾಶಗಳು ತೆರೆದುಕೊಳ್ಳುತ್ತಿವೆ ಎಂದು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/pm-modi-calls-on-youth-to-work-for-new-india-through-atmanirbhar-bharat-798590.html" itemprop="url">'ಆತ್ಮನಿರ್ಭರ ಭಾರತ್‘ ಮೂಲಕ ನವ ಭಾರತಕ್ಕಾಗಿ ಕೆಲಸ ಮಾಡಲು ಪ್ರಧಾನಿ ಮೋದಿ ಕರೆ</a></p>.<p>ಯುವ ಕ್ರಿಕೆಟಿಗರನ್ನು ಒಳಗೊಂಡ ತಂಡವನ್ನು ಶ್ಲಾಘಿಸಿದ ಮೋದಿ, ರಿಸ್ಕ್ ತೆಗೆದುಕೊಳ್ಳುವ ಮೂಲಕ ವೈಫಲ್ಯವನ್ನು ಮೀರಿ ನಿಲ್ಲಲು ಯತ್ನಿಸಬೇಕು. ‘ಆತ್ಮ ನಿರ್ಭರ ಭಾರತ’ ಯೋಜನೆಯು ನಮ್ಮ ಪ್ರತಿ ದಿನದ ಕೆಲಸಗಳ ಅಂಗವಾಗಿಬಿಟ್ಟಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>