<p><strong>ನವದೆಹಲಿ:</strong> ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಬಿಜೆಪಿ ಶಾಸಕ ವಿಜಯ್ ರಹಂಗ್ಡೇಲ್ ಅವರ ಪುತ್ರ ಆವಿಷ್ಕರ್ ರಹಂಗ್ಡೇಲ್ ಸೇರಿದಂತೆ ಏಳು ಮಂದಿ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.</p>.<p>ಸೆಲ್ಸುರಾ ಗ್ರಾಮದ ಬಳಿ ದಿಯೋಲಿಯಿಂದ ವಾರ್ಧಾ ಕಡೆಗೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ನೇರವಾಗಿ ಕೆಳಗೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಎಲ್ಲಾ ಏಳು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಮೃತರನ್ನು ನೀರಜ್ ಚೌಹಾಣ್, ನಿತೇಶ್ ಸಿಂಗ್, ವಿವೇಕ್ ನಂದನ್, ಪ್ರತ್ಯೂಷ್ ಸಿಂಗ್, ಶುಭಂ ಜೈಸ್ವಾಲ್, ಪವನ್ ಶಕ್ತಿ ಎಂದು ಗುರುತಿಸಲಾಗಿದೆ.</p>.<p>ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳು ವಾರ್ಧಾದ ಸಾವಂಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.</p>.<p><strong>ಪ್ರಧಾನಿ ಸಂತಾಪ</strong>: ಕಾರು ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಕ್ಕಾಗಿ ತಲಾ ₹ 2 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಈ ಕುರಿತು ಪ್ರಧಾನ ಮಂತ್ರಿಗಳ ಕಚೇರಿಯು ಟ್ವೀಟ್ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಬಿಜೆಪಿ ಶಾಸಕ ವಿಜಯ್ ರಹಂಗ್ಡೇಲ್ ಅವರ ಪುತ್ರ ಆವಿಷ್ಕರ್ ರಹಂಗ್ಡೇಲ್ ಸೇರಿದಂತೆ ಏಳು ಮಂದಿ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.</p>.<p>ಸೆಲ್ಸುರಾ ಗ್ರಾಮದ ಬಳಿ ದಿಯೋಲಿಯಿಂದ ವಾರ್ಧಾ ಕಡೆಗೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ನೇರವಾಗಿ ಕೆಳಗೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಎಲ್ಲಾ ಏಳು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಮೃತರನ್ನು ನೀರಜ್ ಚೌಹಾಣ್, ನಿತೇಶ್ ಸಿಂಗ್, ವಿವೇಕ್ ನಂದನ್, ಪ್ರತ್ಯೂಷ್ ಸಿಂಗ್, ಶುಭಂ ಜೈಸ್ವಾಲ್, ಪವನ್ ಶಕ್ತಿ ಎಂದು ಗುರುತಿಸಲಾಗಿದೆ.</p>.<p>ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳು ವಾರ್ಧಾದ ಸಾವಂಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.</p>.<p><strong>ಪ್ರಧಾನಿ ಸಂತಾಪ</strong>: ಕಾರು ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಕ್ಕಾಗಿ ತಲಾ ₹ 2 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಈ ಕುರಿತು ಪ್ರಧಾನ ಮಂತ್ರಿಗಳ ಕಚೇರಿಯು ಟ್ವೀಟ್ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>