ಉತ್ತರ ಪ್ರದೇಶದ ಸೋನೆಭದ್ರದಲ್ಲಿ ಸಾರ್ವಜನಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆ ತರುವ ಯಾವುದೇ ಅವಕಾಶವನ್ನು ನಮ್ಮ ಸರ್ಕಾರ ಕೈಚೆಲ್ಲುವುದಿಲ್ಲ ಎಂದು ಹೇಳಿದರು.
‘ಯುದ್ಧ ಪೀಡಿತ ಉಕ್ರೇನ್ನಿಂದ ಭಾರತೀಯರ ಸ್ಥಳಾಂತರ ಪ್ರಕ್ರಿಯೆಯು ವಿಶ್ವ ಮಟ್ಟದಲ್ಲಿ ಭಾರತದ ಶಕ್ತಿ ಹೆಚ್ಚಿರುವುದರ ಸೂಚಕವಾಗಿದೆ’ಎಂದ ಅವರು, ಅಲ್ಲಿ ಸಿಲುಕಿರುವ ಭಾರತೀಯರನ್ನು ಕರೆ ತರಲು ಸಂಪುಟದ ನಾಲ್ವರು ಸಹೋದ್ಯೋಗಿಗಳನ್ನು ಕಳುಹಿಸಿರುವುದಾಗಿ ಹೇಳಿದರು.