<p><strong>ಭೋಪಾಲ್:</strong> ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಜನ್ಮದಿನದ ಅಂಗವಾಗಿ ನವೆಂಬರ್ 15ರಂದು ಇಲ್ಲಿ ನಡೆಯಲಿರುವ ‘ಜನ್ಜಾತಿಯ ಬೃಹತ್ ಸಮಾವೇಶ‘ದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಮಧ್ಯಪ್ರದೇಶ ಸರ್ಕಾರದ ಪ್ರಕಟಣೆ ತಿಳಿಸಿದೆ.</p>.<p>ಇದೇ ವೇಳೆ, ನಗರದಲ್ಲಿ ನಿರ್ಮಾಣ ಮಾಡಿರುವ ವಿಶ್ವದರ್ಜೆಯ ಹಬೀಬ್ಗಂಜ್ ರೈಲು ನಿಲ್ದಾಣವನ್ನು ಪ್ರಧಾನಿಯವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಸಮಾವೇಶದಲ್ಲಿ ಬುಡಕಟ್ಟು ಸಮುದಾಯದ ಸ್ವ-ಸಹಾಯ ಗುಂಪುಗಳು ಸಿದ್ಧಪಡಿಸಿದ ಉತ್ಪನ್ನಗಳ ಪ್ರದರ್ಶನವನ್ನು ಸಹ ಆಯೋಜಿಸಲಾಗುವುದು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಪ್ರಧಾನಿಯವರು ರೈಲ್ವೆ ನಿಲ್ದಾಣದ ಉದ್ಘಾಟನೆಗೆ ಆಗಮಿಸಿದಾಗ ನಿಲ್ದಾಣದಲ್ಲಿರುವ ಸೌಲಭ್ಯಗಳನ್ನು ವಿವರಿಸುವಂತಹ ಕಿರುಚಿತ್ರವೊಂದನ್ನು ಪ್ರದರ್ಶಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p>ಈ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮಂಗಳವಾರ ಸಮಾವೇಶದ ಸಿದ್ಧತೆಗಳು ಮತ್ತುಹಬೀಬ್ಗಂಜ್ ರೈಲು ನಿಲ್ದಾಣದಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.</p>.<p>ಸಮಾವೇಶದಲ್ಲಿ ಬುಡಕಟ್ಟು ಸಮುದಾಯದ ಸಂಸ್ಕೃತಿ, ಸಂಪ್ರದಾಯ ಮತ್ತು ಜೀವನದ ಮೌಲ್ಯಗಳನ್ನು ಪರಿಚಯಿಸುವಂತಹ ಕಾರ್ಯಕ್ರಮಗಳನ್ನು ರೂಪಿಸಲು ಅಧಿಕಾರಿಗಳಿಗೆ ಚೌಹಾಣ್ ನಿರ್ದೇಶನ ನೀಡಿದರು.</p>.<p>ಇದಕ್ಕೂ ಮುನ್ನ ಪ್ರತಿ ವರ್ಷ ಬಿರ್ಸಾ ಮುಂಡಾ ಜನ್ಮ ದಿನವಾದ ನವೆಂಬರ್ 15 ಅನ್ನು ‘ಜನ್ ಜಾತಿಯ ದಿವಸ್‘ ಆಗಿ ಆಚರಿಸುವಂತೆ ಚೌಹಾಣ್ ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಜನ್ಮದಿನದ ಅಂಗವಾಗಿ ನವೆಂಬರ್ 15ರಂದು ಇಲ್ಲಿ ನಡೆಯಲಿರುವ ‘ಜನ್ಜಾತಿಯ ಬೃಹತ್ ಸಮಾವೇಶ‘ದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಮಧ್ಯಪ್ರದೇಶ ಸರ್ಕಾರದ ಪ್ರಕಟಣೆ ತಿಳಿಸಿದೆ.</p>.<p>ಇದೇ ವೇಳೆ, ನಗರದಲ್ಲಿ ನಿರ್ಮಾಣ ಮಾಡಿರುವ ವಿಶ್ವದರ್ಜೆಯ ಹಬೀಬ್ಗಂಜ್ ರೈಲು ನಿಲ್ದಾಣವನ್ನು ಪ್ರಧಾನಿಯವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಸಮಾವೇಶದಲ್ಲಿ ಬುಡಕಟ್ಟು ಸಮುದಾಯದ ಸ್ವ-ಸಹಾಯ ಗುಂಪುಗಳು ಸಿದ್ಧಪಡಿಸಿದ ಉತ್ಪನ್ನಗಳ ಪ್ರದರ್ಶನವನ್ನು ಸಹ ಆಯೋಜಿಸಲಾಗುವುದು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಪ್ರಧಾನಿಯವರು ರೈಲ್ವೆ ನಿಲ್ದಾಣದ ಉದ್ಘಾಟನೆಗೆ ಆಗಮಿಸಿದಾಗ ನಿಲ್ದಾಣದಲ್ಲಿರುವ ಸೌಲಭ್ಯಗಳನ್ನು ವಿವರಿಸುವಂತಹ ಕಿರುಚಿತ್ರವೊಂದನ್ನು ಪ್ರದರ್ಶಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p>ಈ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮಂಗಳವಾರ ಸಮಾವೇಶದ ಸಿದ್ಧತೆಗಳು ಮತ್ತುಹಬೀಬ್ಗಂಜ್ ರೈಲು ನಿಲ್ದಾಣದಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.</p>.<p>ಸಮಾವೇಶದಲ್ಲಿ ಬುಡಕಟ್ಟು ಸಮುದಾಯದ ಸಂಸ್ಕೃತಿ, ಸಂಪ್ರದಾಯ ಮತ್ತು ಜೀವನದ ಮೌಲ್ಯಗಳನ್ನು ಪರಿಚಯಿಸುವಂತಹ ಕಾರ್ಯಕ್ರಮಗಳನ್ನು ರೂಪಿಸಲು ಅಧಿಕಾರಿಗಳಿಗೆ ಚೌಹಾಣ್ ನಿರ್ದೇಶನ ನೀಡಿದರು.</p>.<p>ಇದಕ್ಕೂ ಮುನ್ನ ಪ್ರತಿ ವರ್ಷ ಬಿರ್ಸಾ ಮುಂಡಾ ಜನ್ಮ ದಿನವಾದ ನವೆಂಬರ್ 15 ಅನ್ನು ‘ಜನ್ ಜಾತಿಯ ದಿವಸ್‘ ಆಗಿ ಆಚರಿಸುವಂತೆ ಚೌಹಾಣ್ ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>