<p><strong>ಮುಂಬೈ: </strong>ನಗರದಿಂದ ಸೊಲ್ಲಾಪುರ ಮತ್ತು ಸಾಯಿನಗರ ಶಿರಡಿಗೆ ಸಂಪರ್ಕಿಸುವ ಎರಡು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಶುಕ್ರವಾರ ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.</p>.<p>ಮಧ್ಯಾಹ್ನ ಮುಂಬೈಗೆ ಬಂದಿಳಿದ ಪ್ರಧಾನಿ ಮೋದಿ, ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ವಿಶ್ವ ಪಾರಂಪರಿಕ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ಗೆ ಚಾಲನೆ ನೀಡಿದರು </p>.<p>ಎರಡು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಮಹಾರಾಷ್ಟ್ರದ ಪ್ರಮುಖ ಯಾತ್ರಾ ಕೇಂದ್ರಗಳನ್ನು ಸಂಪರ್ಕಿಸುತ್ತವೆ ಮತ್ತು ಧಾರ್ಮಿಕ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮುಂಬೈ-ಸೋಲಾಪುರ ವಂದೇ ಭಾರತ್ ರೈಲು, ಸಿದ್ಧೇಶ್ವರ, ಅಕ್ಕಲಕೋಟ್, ತುಳಜಾಪುರ, ಪಂಢರಾಪುರ ಮತ್ತು ಸುತ್ತಮುತ್ತಲಿನ ಧಾರ್ಮಿಕ ಕ್ಷೇತ್ರಗಳ ಸಂಪರ್ಕ ಸುಲಭವಾಗಿಸಲಿದೆ.</p>.<p>ಅದೇ ರೀತಿ, ಮುಂಬೈ-ಸಾಯಿನಗರ ಶಿರಡಿ ವಂದೇ ಭಾರತ್ ರೈಲು ತ್ರಯಂಬಕೇಶ್ವರ, ಶಿರಡಿಯ ಸಾಯಿಬಾಬಾ ದೇವಸ್ಥಾನ ಸೇರಿದಂತೆ ಇತರ ಪ್ರಮುಖ ಸ್ಥಳಗಳಿಗೆ ಹೋಗುವ ಭಕ್ತರಿಗೆ ಅನುಕೂಲ ಕಲ್ಪಿಸಲಿದೆ.</p>.<p>ಇದು ಮೂರು ವಾರಗಳಲ್ಲಿ ಮುಂಬೈಗೆ ಪ್ರಧಾನಿ ಮೋದಿಯವರ ಎರಡನೇ ಭೇಟಿಯಾಗಿದೆ. ಜನವರಿ 19 ರಂದು ಅವರು ಮುಂಬೈ ಮೆಟ್ರೋ ಲೈನ್ 2 ಮತ್ತು ಲೈನ್ 7ಕ್ಕೆ ಚಾಲನೆ ನೀಡಿ, ₹38,000 ಕೋಟಿ ಮೌಲ್ಯದ ಮೂಲಸೌಕರ್ಯ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ನಗರದಿಂದ ಸೊಲ್ಲಾಪುರ ಮತ್ತು ಸಾಯಿನಗರ ಶಿರಡಿಗೆ ಸಂಪರ್ಕಿಸುವ ಎರಡು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಶುಕ್ರವಾರ ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.</p>.<p>ಮಧ್ಯಾಹ್ನ ಮುಂಬೈಗೆ ಬಂದಿಳಿದ ಪ್ರಧಾನಿ ಮೋದಿ, ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ವಿಶ್ವ ಪಾರಂಪರಿಕ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ಗೆ ಚಾಲನೆ ನೀಡಿದರು </p>.<p>ಎರಡು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಮಹಾರಾಷ್ಟ್ರದ ಪ್ರಮುಖ ಯಾತ್ರಾ ಕೇಂದ್ರಗಳನ್ನು ಸಂಪರ್ಕಿಸುತ್ತವೆ ಮತ್ತು ಧಾರ್ಮಿಕ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮುಂಬೈ-ಸೋಲಾಪುರ ವಂದೇ ಭಾರತ್ ರೈಲು, ಸಿದ್ಧೇಶ್ವರ, ಅಕ್ಕಲಕೋಟ್, ತುಳಜಾಪುರ, ಪಂಢರಾಪುರ ಮತ್ತು ಸುತ್ತಮುತ್ತಲಿನ ಧಾರ್ಮಿಕ ಕ್ಷೇತ್ರಗಳ ಸಂಪರ್ಕ ಸುಲಭವಾಗಿಸಲಿದೆ.</p>.<p>ಅದೇ ರೀತಿ, ಮುಂಬೈ-ಸಾಯಿನಗರ ಶಿರಡಿ ವಂದೇ ಭಾರತ್ ರೈಲು ತ್ರಯಂಬಕೇಶ್ವರ, ಶಿರಡಿಯ ಸಾಯಿಬಾಬಾ ದೇವಸ್ಥಾನ ಸೇರಿದಂತೆ ಇತರ ಪ್ರಮುಖ ಸ್ಥಳಗಳಿಗೆ ಹೋಗುವ ಭಕ್ತರಿಗೆ ಅನುಕೂಲ ಕಲ್ಪಿಸಲಿದೆ.</p>.<p>ಇದು ಮೂರು ವಾರಗಳಲ್ಲಿ ಮುಂಬೈಗೆ ಪ್ರಧಾನಿ ಮೋದಿಯವರ ಎರಡನೇ ಭೇಟಿಯಾಗಿದೆ. ಜನವರಿ 19 ರಂದು ಅವರು ಮುಂಬೈ ಮೆಟ್ರೋ ಲೈನ್ 2 ಮತ್ತು ಲೈನ್ 7ಕ್ಕೆ ಚಾಲನೆ ನೀಡಿ, ₹38,000 ಕೋಟಿ ಮೌಲ್ಯದ ಮೂಲಸೌಕರ್ಯ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>