<p><strong>ಹಲ್ದಿಯಾ (ಪ.ಬಂಗಾಳ):</strong> ಪ್ರಧಾನಿ ನರೇಂದ್ರ ಮೋದಿ ಪ್ರಾರಂಭಿಸಿರುವ ಕೇಂದ್ರ ಯೋಜನೆಗಳ ಪೋಸ್ಟರ್ಗಳಲ್ಲಿ ತಮ್ಮ ಫೋಟೊಗಳನ್ನು ಲಗತ್ತಿಸುವ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆಸರು ಮಾಡಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ.</p>.<p>ಕೇಂದ್ರ ಸರ್ಕಾರದ ಹಲವು ಯೋಜನೆಗಳ ಹೆಸರು ಬದಲಾಯಿಸಿ ದೀದಿ ಅವುಗಳನ್ನು ತಮ್ಮ ಯೋಜನೆಗಳೆಂದು ಸುಳ್ಳು ಹೇಳಿಕೊಂಡು ಪ್ರಚಾರ ಗಿಟ್ಟಿಸುತ್ತಿದ್ದಾರೆ ಎಂದು ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದರು.</p>.<p>ಅದೇ ಹೊತ್ತಿಗೆ ತಾಯಂದಿರು ಹಾಗೂ ಜನಸಾಮಾನ್ಯರ ಮೇಲೆ ಹಿಂಸಾಚಾರವನ್ನು ಮಾಡುತ್ತಿರುವ 'ಇಂತಹ ಮಗಳಿಗೆ' ರಾಜ್ಯದ ಜನತೆಯು ಮತ ಚಲಾಯಿಸುತ್ತಾರೆಯೇ ಎಂದು ಪ್ರಶ್ನಿಸಿದರು.</p>.<p>80 ವರ್ಷದ ತಾಯಿಯ ಮೇಲೆ ಹಿಂಸಾಚಾರ ಮಾಡುವ 'ಇಂತಹ ಮಗಳಿಗೆ' ಜನರು ಮತ ಚಲಾಯಿಸುತ್ತಾರೆಯೇ? ಬಿಜೆಪಿ ಕಾರ್ಯಕರ್ತರನ್ನು ಗಲ್ಲಿಗೇರಿಸುವ 'ಇಂತಹ ಮಗಳಿಗೆ' ನೀವು ಮತ ಹಾಕುವೀರಾ? ರಾಜ್ಯದ ಜನರು ನಿಜವಾದ ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಅಭಿಯಾನದ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/suvendu-files-nomination-from-nandigram-in-high-stakes-battle-against-mamata-812661.html" itemprop="url">ನಂದಿಗ್ರಾಮ ಕ್ಷೇತ್ರದಲ್ಲಿ ಸುವೇಂದು ಅಧಿಕಾರಿ ನಾಮಪತ್ರ ಸಲ್ಲಿಕೆ </a></p>.<p>ಟಿಎಂಸಿ ಸರ್ಕಾರದ ಕೆಟ್ಟ ರಾಜನೀತಿಯಿಂದಾಗಿ ಪಿಎಂ-ಕಿಸಾನ್ ಯೋಜನೆ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಯೋಜನೆಗಳ ಪ್ರಯೋಜನಗಳು ಪಶ್ಚಿಮ ಬಂಗಾಳ ಜನರನ್ನು ತಲುಪಿಲ್ಲ ಎಂದು ಟೀಕಿಸಿದರು.</p>.<p>ಜನ ಸಾಮಾನ್ಯರ ಹಿತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಗಲಿರುಳು ದುಡಿಯುತ್ತಿದ್ದಾರೆ. ಇನ್ನೊಂದೆಡೆ ಫೋಟೊ ಕ್ಲಿಕ್ಲಿಸುವಲ್ಲಿ ತಲ್ಲೀನವಾಗಿರುವ ದೀದಿ, ಹಲವಾರು ಕೇಂದ್ರ ಯೋಜನೆಗಳ ಶ್ರೇಯಸ್ಸು ಪಡೆಯುವಲ್ಲಿ ನಿರತವಾಗಿದ್ದಾರೆ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲ್ದಿಯಾ (ಪ.ಬಂಗಾಳ):</strong> ಪ್ರಧಾನಿ ನರೇಂದ್ರ ಮೋದಿ ಪ್ರಾರಂಭಿಸಿರುವ ಕೇಂದ್ರ ಯೋಜನೆಗಳ ಪೋಸ್ಟರ್ಗಳಲ್ಲಿ ತಮ್ಮ ಫೋಟೊಗಳನ್ನು ಲಗತ್ತಿಸುವ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆಸರು ಮಾಡಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ.</p>.<p>ಕೇಂದ್ರ ಸರ್ಕಾರದ ಹಲವು ಯೋಜನೆಗಳ ಹೆಸರು ಬದಲಾಯಿಸಿ ದೀದಿ ಅವುಗಳನ್ನು ತಮ್ಮ ಯೋಜನೆಗಳೆಂದು ಸುಳ್ಳು ಹೇಳಿಕೊಂಡು ಪ್ರಚಾರ ಗಿಟ್ಟಿಸುತ್ತಿದ್ದಾರೆ ಎಂದು ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದರು.</p>.<p>ಅದೇ ಹೊತ್ತಿಗೆ ತಾಯಂದಿರು ಹಾಗೂ ಜನಸಾಮಾನ್ಯರ ಮೇಲೆ ಹಿಂಸಾಚಾರವನ್ನು ಮಾಡುತ್ತಿರುವ 'ಇಂತಹ ಮಗಳಿಗೆ' ರಾಜ್ಯದ ಜನತೆಯು ಮತ ಚಲಾಯಿಸುತ್ತಾರೆಯೇ ಎಂದು ಪ್ರಶ್ನಿಸಿದರು.</p>.<p>80 ವರ್ಷದ ತಾಯಿಯ ಮೇಲೆ ಹಿಂಸಾಚಾರ ಮಾಡುವ 'ಇಂತಹ ಮಗಳಿಗೆ' ಜನರು ಮತ ಚಲಾಯಿಸುತ್ತಾರೆಯೇ? ಬಿಜೆಪಿ ಕಾರ್ಯಕರ್ತರನ್ನು ಗಲ್ಲಿಗೇರಿಸುವ 'ಇಂತಹ ಮಗಳಿಗೆ' ನೀವು ಮತ ಹಾಕುವೀರಾ? ರಾಜ್ಯದ ಜನರು ನಿಜವಾದ ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಅಭಿಯಾನದ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/suvendu-files-nomination-from-nandigram-in-high-stakes-battle-against-mamata-812661.html" itemprop="url">ನಂದಿಗ್ರಾಮ ಕ್ಷೇತ್ರದಲ್ಲಿ ಸುವೇಂದು ಅಧಿಕಾರಿ ನಾಮಪತ್ರ ಸಲ್ಲಿಕೆ </a></p>.<p>ಟಿಎಂಸಿ ಸರ್ಕಾರದ ಕೆಟ್ಟ ರಾಜನೀತಿಯಿಂದಾಗಿ ಪಿಎಂ-ಕಿಸಾನ್ ಯೋಜನೆ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಯೋಜನೆಗಳ ಪ್ರಯೋಜನಗಳು ಪಶ್ಚಿಮ ಬಂಗಾಳ ಜನರನ್ನು ತಲುಪಿಲ್ಲ ಎಂದು ಟೀಕಿಸಿದರು.</p>.<p>ಜನ ಸಾಮಾನ್ಯರ ಹಿತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಗಲಿರುಳು ದುಡಿಯುತ್ತಿದ್ದಾರೆ. ಇನ್ನೊಂದೆಡೆ ಫೋಟೊ ಕ್ಲಿಕ್ಲಿಸುವಲ್ಲಿ ತಲ್ಲೀನವಾಗಿರುವ ದೀದಿ, ಹಲವಾರು ಕೇಂದ್ರ ಯೋಜನೆಗಳ ಶ್ರೇಯಸ್ಸು ಪಡೆಯುವಲ್ಲಿ ನಿರತವಾಗಿದ್ದಾರೆ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>