<p><strong>ವಾರಾಣಸಿ(ಉತ್ತರ ಪ್ರದೇಶ): </strong>ಕೋವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವಾರಾಣಸಿಯ ವೈದ್ಯರು, ದಾದಿಯರು, ಇತರ ವೈದ್ಯಕೀಯ ಸಿಬ್ಬಂದಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಶ್ಲಾಘಿಸಿದರು.</p>.<p>ವಾರಾಣಸಿಯ ಆರೋಗ್ಯ ಕಾರ್ಯಕರ್ತರೊಂದಿಗೆ ವಿಡಿಯೊ ಸಂವಾದ ನಡೆಸಿದ ಮೋದಿ, ‘ಮನೆ ಬಾಗಿಲಿನಲ್ಲೇ ರೋಗಿಗಳಿಗೆ ಚಿಕಿತ್ಸೆ( ಜಹಾ ಬಿಮರ್, ವಹೀ ಉಪಚಾರ್) ನೀಡುವ ಮೂಲಕ ಕೋವಿಡ್ ಎರಡನೇ ಅಲೆಯ ಒತ್ತಡವನ್ನು ಕಡಿಮೆ ಮಾಡಬಹುದು’ ಎಂದು ಹೇಳಿದರು.</p>.<p>‘ಬಹುತೇಕ ಕೆಲಸಗಳು ಆಗಿವೆ. ಆದರೆ ಉತ್ತರಪ್ರದೇಶದ ಪೂರ್ವ ಭಾಗದ ಗ್ರಾಮೀಣ ಪ್ರದೇಶದ ಮೇಲೆ ಹೆಚ್ಚಿನ ಗಮನವಿಡುವ ಅವಶ್ಯಕತೆ ಇದೆ. ಸೋಂಕು ಬಹಳ ತೀವ್ರವಾಗಿದ್ದು ಎಷ್ಟೇ ಪ್ರಯತ್ನಿಸಿದರೂ ಹಲವಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ’ ಎಂದು ಗದ್ಗದಿತರಾಗಿ ನುಡಿದರು.</p>.<p>‘ನೀವು ಸೋಂಕನ್ನು ಗಮನಾರ್ಹವಾಗಿ ನಿಯಂತ್ರಿಸಿದ್ದೀರಿ. ಆದರೆ ಅಷ್ಟಕ್ಕೇ ಸಮಾಧಾನ ಪಡುವಂತಿಲ್ಲ. ಏಕೆಂದರೆ ಇದು ದೀರ್ಘ ಕಾಲದ ಹೋರಾಟ’ ಎಂದು ಅವರು ವಾರಾಣಸಿಯ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಲ್ಲಿ ಅಭಿಪ್ರಾಯ ಹಂಚಿಕೊಂಡರು.</p>.<p>ಇದೇ ಸಂದರ್ಭದಲ್ಲಿ ಪ್ರಧಾನಿ ಅವರು, ಪಂಡಿತ್ ರಾಜನ್ ಮಿಶ್ರಾ ಆಸ್ಪತ್ರೆ ಸೇರಿದಂತೆ ನಗರದ ಇತರ ಕಡೆಗಳಲ್ಲಿರುವ ಕೋವಿಡ್ ಆಸ್ಪತ್ರೆಗಳಲ್ಲಿ ಸಿದ್ಧತೆಯನ್ನು ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾರಾಣಸಿ(ಉತ್ತರ ಪ್ರದೇಶ): </strong>ಕೋವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವಾರಾಣಸಿಯ ವೈದ್ಯರು, ದಾದಿಯರು, ಇತರ ವೈದ್ಯಕೀಯ ಸಿಬ್ಬಂದಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಶ್ಲಾಘಿಸಿದರು.</p>.<p>ವಾರಾಣಸಿಯ ಆರೋಗ್ಯ ಕಾರ್ಯಕರ್ತರೊಂದಿಗೆ ವಿಡಿಯೊ ಸಂವಾದ ನಡೆಸಿದ ಮೋದಿ, ‘ಮನೆ ಬಾಗಿಲಿನಲ್ಲೇ ರೋಗಿಗಳಿಗೆ ಚಿಕಿತ್ಸೆ( ಜಹಾ ಬಿಮರ್, ವಹೀ ಉಪಚಾರ್) ನೀಡುವ ಮೂಲಕ ಕೋವಿಡ್ ಎರಡನೇ ಅಲೆಯ ಒತ್ತಡವನ್ನು ಕಡಿಮೆ ಮಾಡಬಹುದು’ ಎಂದು ಹೇಳಿದರು.</p>.<p>‘ಬಹುತೇಕ ಕೆಲಸಗಳು ಆಗಿವೆ. ಆದರೆ ಉತ್ತರಪ್ರದೇಶದ ಪೂರ್ವ ಭಾಗದ ಗ್ರಾಮೀಣ ಪ್ರದೇಶದ ಮೇಲೆ ಹೆಚ್ಚಿನ ಗಮನವಿಡುವ ಅವಶ್ಯಕತೆ ಇದೆ. ಸೋಂಕು ಬಹಳ ತೀವ್ರವಾಗಿದ್ದು ಎಷ್ಟೇ ಪ್ರಯತ್ನಿಸಿದರೂ ಹಲವಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ’ ಎಂದು ಗದ್ಗದಿತರಾಗಿ ನುಡಿದರು.</p>.<p>‘ನೀವು ಸೋಂಕನ್ನು ಗಮನಾರ್ಹವಾಗಿ ನಿಯಂತ್ರಿಸಿದ್ದೀರಿ. ಆದರೆ ಅಷ್ಟಕ್ಕೇ ಸಮಾಧಾನ ಪಡುವಂತಿಲ್ಲ. ಏಕೆಂದರೆ ಇದು ದೀರ್ಘ ಕಾಲದ ಹೋರಾಟ’ ಎಂದು ಅವರು ವಾರಾಣಸಿಯ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಲ್ಲಿ ಅಭಿಪ್ರಾಯ ಹಂಚಿಕೊಂಡರು.</p>.<p>ಇದೇ ಸಂದರ್ಭದಲ್ಲಿ ಪ್ರಧಾನಿ ಅವರು, ಪಂಡಿತ್ ರಾಜನ್ ಮಿಶ್ರಾ ಆಸ್ಪತ್ರೆ ಸೇರಿದಂತೆ ನಗರದ ಇತರ ಕಡೆಗಳಲ್ಲಿರುವ ಕೋವಿಡ್ ಆಸ್ಪತ್ರೆಗಳಲ್ಲಿ ಸಿದ್ಧತೆಯನ್ನು ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>