<p class="title"><strong>ನವದೆಹಲಿ: </strong>ತಾಪಮಾನ ಬದಲಾವಣೆ ಮತ್ತು ಪೌಷ್ಟಿಕಾಂಶ ಕೊರತೆಯ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ವಿಭಿನ್ನ ಗುಣಲಕ್ಷಣಗಳುಳ್ಳ 35 ಬೆಳೆಗಳ ತಳಿಯನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದರು.</p>.<p class="title">ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್) ಇವನ್ನು ಅಭಿವೃದ್ಧಿಪಡಿಸಿದೆ. ಐಸಿಎಆರ್, ಕೃಷಿ ವಿಜ್ಞಾನ ಕೇಂದ್ರಗಳು, ಕೃಷಿ ವಿ.ವಿಗಳಲ್ಲಿ ನಡೆದ ವಿಡಿಯೊ ಕಾನ್ಫರೆನ್ಸ್ನಲ್ಲಿ ಮಂಗಳವಾರ ಬಿಡುಗಡೆ ಮಾಡಲಾಯಿತು.</p>.<p class="title">ಪ್ರಧಾನಮಂತ್ರಿ ಕಚೇರಿಯ ಹೇಳಿಕೆಯನುಸಾರ, ಅಭಿವೃದ್ಧಿ ಪಡಿಸಲಾಗಿರುವ ನೂತನ ತಳಿಗಳು ತಾಪಮಾನ ಬದಲಾವಣೆ ಸವಾಲು ಎದುರಿಸಲು ಪೂರಕವಾದ ಸ್ಥಿತಿಸ್ಥಾಪಕತ್ವ, ಅತ್ಯಧಿಕ ಪೌಷ್ಟಿಕಾಂಶವನ್ನು ಒಳಗೊಂಡಿದೆ.</p>.<p>ಬರಗಾಲದ ಸಹಿಷ್ಣು ಮಾದರಿಯ ಕಡಲೆ, ಬೀಜ ನಿರೋಧಕ ಗುಣವುಳ್ಳ ತೊಗರಿ, ತ್ವರಿತವಾಗಿ ಫಸಲು ನೀಡುವ ಸೋಯಾಬೀನ್, ರೋಗನಿರೋಧಕ ಸಾಮರ್ಥ್ಯದ ಭತ್ತ, ಜೈವಿಕ ಬಲವರ್ಧಿತವಾದ ಗೋಧಿ, ಜೋಳ, ತೊಗರಿ, ರಾಗಿ, ನವಣೆ ಅಕ್ಕಿ, ಹುರುಳಿ ಬೆಳೆಗಳ ತಳಿಗಳು ಇವುಗಳಲ್ಲಿ ಸೇರಿವೆ.</p>.<p>ವಿಶೇಷ ಗುಣಗಳಿರುವ ಈ ತಳಿಗಳು ಪೌಷ್ಟಿಕಾಂಶ ನಿರೋಧಕ ಶಕ್ತಿಯನ್ನೂ ಹೊಂದಿವೆ. ಕೆಲವು ತಳಿಗಳಲ್ಲಿರುವ ಅಂಶಗಳು ಮನುಷ್ಯ, ಪ್ರಾಣಿಗಳ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದವು. ಇದು ಆ ಕೊರತೆ ನೀಗಿಸಲಿದೆ.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು, ದೇಶದಲ್ಲಿ ಶೇ 86ರಷ್ಟು ರೈತರು ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರೇ ಆಗಿದ್ದಾರೆ. ಈ ಸಮೂಹದ ಕೃಷಿಕರ ಆದಾಯವನ್ನು ಹೆಚ್ಚಿಸುವುದು ಪ್ರಧಾನಮಂತ್ರಿಗಳ ಆದ್ಯತೆಯಾಗಿದೆ ಎಂದು ಪ್ರತಿಪಾದಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/business/commerce-news/petrol-and-diesel-prices-hiked-more-to-come-as-crude-nears-usd-80barrel-870706.html" target="_blank">2 ತಿಂಗಳಲ್ಲಿ ಮೊದಲ ಬಾರಿ ಪೆಟ್ರೋಲ್ ದರ ಲೀಟರ್ಗೆ 20 ಪೈಸೆ ಏರಿಕೆ</a></strong></p>.<p>ಈ ವರ್ಗದ ರೈತರ ಆದಾಯ ದುಪ್ಪಟ್ಟುಗೊಳಿಸಲು ಹಾಗೂ ಭಾರತವನ್ನು ಕೃಷಿ ಕ್ಷೇತ್ರದಲ್ಲಿ ಸ್ವಾವಲಂಬಿಯಾಗಿಸಲು ಈ ಮೂಲಕ ಕೃಷಿಕರಿಗೆ ಹಲವು ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದೆ ಎಂದು ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ ರಾಯ್ಪುರದಲ್ಲಿ ರಾಷ್ಟ್ರೀಯ ಜೈವಿಕ ಒತ್ತಡ ಸಹಿಷ್ಣು ಕೇಂದ್ರ (ಎನ್ಐಬಿಎಸ್ಟಿ) ಸ್ಥಾಪನೆಗಾಗಿ ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೆಲ್ ಅವರು ಪ್ರಧಾನಿಗೆ ಕೃತಜ್ಞತೆ ಸಲ್ಲಿಸಿದರು.</p>.<p>ಕೇಂದ್ರ ಮೀನುಗಾರಿಕೆ, ಪಶು ಸಂಗೋಪನಾ ಸಚಿವ ಪರಶೋತ್ತಮ್ ರೂಪಾಲಾ, ಕೃಷಿ ಖಾತೆ ರಾಜ್ಯ ಸಚಿವರಾದ ಕೈಲಾಶ್ ಚೌಧರಿ, ಶೋಭಾ ಕರಂದ್ಲಾಜೆ, ಛತ್ತೀಸಗಡದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ತಾಪಮಾನ ಬದಲಾವಣೆ ಮತ್ತು ಪೌಷ್ಟಿಕಾಂಶ ಕೊರತೆಯ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ವಿಭಿನ್ನ ಗುಣಲಕ್ಷಣಗಳುಳ್ಳ 35 ಬೆಳೆಗಳ ತಳಿಯನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದರು.</p>.<p class="title">ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್) ಇವನ್ನು ಅಭಿವೃದ್ಧಿಪಡಿಸಿದೆ. ಐಸಿಎಆರ್, ಕೃಷಿ ವಿಜ್ಞಾನ ಕೇಂದ್ರಗಳು, ಕೃಷಿ ವಿ.ವಿಗಳಲ್ಲಿ ನಡೆದ ವಿಡಿಯೊ ಕಾನ್ಫರೆನ್ಸ್ನಲ್ಲಿ ಮಂಗಳವಾರ ಬಿಡುಗಡೆ ಮಾಡಲಾಯಿತು.</p>.<p class="title">ಪ್ರಧಾನಮಂತ್ರಿ ಕಚೇರಿಯ ಹೇಳಿಕೆಯನುಸಾರ, ಅಭಿವೃದ್ಧಿ ಪಡಿಸಲಾಗಿರುವ ನೂತನ ತಳಿಗಳು ತಾಪಮಾನ ಬದಲಾವಣೆ ಸವಾಲು ಎದುರಿಸಲು ಪೂರಕವಾದ ಸ್ಥಿತಿಸ್ಥಾಪಕತ್ವ, ಅತ್ಯಧಿಕ ಪೌಷ್ಟಿಕಾಂಶವನ್ನು ಒಳಗೊಂಡಿದೆ.</p>.<p>ಬರಗಾಲದ ಸಹಿಷ್ಣು ಮಾದರಿಯ ಕಡಲೆ, ಬೀಜ ನಿರೋಧಕ ಗುಣವುಳ್ಳ ತೊಗರಿ, ತ್ವರಿತವಾಗಿ ಫಸಲು ನೀಡುವ ಸೋಯಾಬೀನ್, ರೋಗನಿರೋಧಕ ಸಾಮರ್ಥ್ಯದ ಭತ್ತ, ಜೈವಿಕ ಬಲವರ್ಧಿತವಾದ ಗೋಧಿ, ಜೋಳ, ತೊಗರಿ, ರಾಗಿ, ನವಣೆ ಅಕ್ಕಿ, ಹುರುಳಿ ಬೆಳೆಗಳ ತಳಿಗಳು ಇವುಗಳಲ್ಲಿ ಸೇರಿವೆ.</p>.<p>ವಿಶೇಷ ಗುಣಗಳಿರುವ ಈ ತಳಿಗಳು ಪೌಷ್ಟಿಕಾಂಶ ನಿರೋಧಕ ಶಕ್ತಿಯನ್ನೂ ಹೊಂದಿವೆ. ಕೆಲವು ತಳಿಗಳಲ್ಲಿರುವ ಅಂಶಗಳು ಮನುಷ್ಯ, ಪ್ರಾಣಿಗಳ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದವು. ಇದು ಆ ಕೊರತೆ ನೀಗಿಸಲಿದೆ.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು, ದೇಶದಲ್ಲಿ ಶೇ 86ರಷ್ಟು ರೈತರು ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರೇ ಆಗಿದ್ದಾರೆ. ಈ ಸಮೂಹದ ಕೃಷಿಕರ ಆದಾಯವನ್ನು ಹೆಚ್ಚಿಸುವುದು ಪ್ರಧಾನಮಂತ್ರಿಗಳ ಆದ್ಯತೆಯಾಗಿದೆ ಎಂದು ಪ್ರತಿಪಾದಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/business/commerce-news/petrol-and-diesel-prices-hiked-more-to-come-as-crude-nears-usd-80barrel-870706.html" target="_blank">2 ತಿಂಗಳಲ್ಲಿ ಮೊದಲ ಬಾರಿ ಪೆಟ್ರೋಲ್ ದರ ಲೀಟರ್ಗೆ 20 ಪೈಸೆ ಏರಿಕೆ</a></strong></p>.<p>ಈ ವರ್ಗದ ರೈತರ ಆದಾಯ ದುಪ್ಪಟ್ಟುಗೊಳಿಸಲು ಹಾಗೂ ಭಾರತವನ್ನು ಕೃಷಿ ಕ್ಷೇತ್ರದಲ್ಲಿ ಸ್ವಾವಲಂಬಿಯಾಗಿಸಲು ಈ ಮೂಲಕ ಕೃಷಿಕರಿಗೆ ಹಲವು ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದೆ ಎಂದು ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ ರಾಯ್ಪುರದಲ್ಲಿ ರಾಷ್ಟ್ರೀಯ ಜೈವಿಕ ಒತ್ತಡ ಸಹಿಷ್ಣು ಕೇಂದ್ರ (ಎನ್ಐಬಿಎಸ್ಟಿ) ಸ್ಥಾಪನೆಗಾಗಿ ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೆಲ್ ಅವರು ಪ್ರಧಾನಿಗೆ ಕೃತಜ್ಞತೆ ಸಲ್ಲಿಸಿದರು.</p>.<p>ಕೇಂದ್ರ ಮೀನುಗಾರಿಕೆ, ಪಶು ಸಂಗೋಪನಾ ಸಚಿವ ಪರಶೋತ್ತಮ್ ರೂಪಾಲಾ, ಕೃಷಿ ಖಾತೆ ರಾಜ್ಯ ಸಚಿವರಾದ ಕೈಲಾಶ್ ಚೌಧರಿ, ಶೋಭಾ ಕರಂದ್ಲಾಜೆ, ಛತ್ತೀಸಗಡದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>