ನೈಸರ್ಗಿಕ ಕೃಷಿಯ ಪ್ರಯೋಜನಗಳನ್ನು ವಿವರಿಸಿದ ಮೋದಿ, ‘ನಮ್ಮ ಸರ್ಕಾರವು ಈ ಕೃಷಿ ಪದ್ಧತಿಯಉತ್ತೇಜನಕ್ಕಾಗಿ ‘ಪರಂಪರಾಗತ್ ಕೃಷಿ ವಿಕಾಸ್ ಯೋಜನೆ’ಯನ್ನು ಕೈಗೊಂಡಿದೆ. ಈ ಯೋಜನೆಯಡಿ ಲಕ್ಷಾಂತ ರೈತರ ಅನುಕೂಲಕ್ಕಾಗಿ ದೇಶದಾದ್ಯಂತ 30 ಸಾವಿರ ಕ್ಲಸ್ಟರ್ಗಳನ್ನು ರಚಿಸಲಾಗಿದೆ. ‘ನಮಾಮಿ ಗಂಗೆ’ ಯೋಜನೆಯೊಂದಿಗೆ ನೈಸರ್ಗಿಕ ಕೃಷಿಗೂ ಸಂಬಂಧ ಕಲ್ಪಿಸಲಾಗಿದ್ದು, ಗಂಗಾ ನದಿಯುದ್ದಕ್ಕೂ ನೈಸರ್ಗಿಕ ಕೃಷಿ ಕಾರಿಡಾರ್ ರಚಿಸಲು ಪ್ರತ್ಯೇಕ ಅಭಿಯಾನವನ್ನು ಕೈಗೊಳ್ಳಲಾಗಿದೆ. ಈ ಕೃಷಿ ಉತ್ಪನ್ನಗಳನ್ನು ಪ್ರಮಾಣೀಕರಿಸಲು ಸರ್ಕಾರವು ಗುಣಮಟ್ಟದ ಭರವಸೆ ವ್ಯವಸ್ಥೆಯನ್ನೂ ಅಭಿವೃದ್ಧಿಪಡಿಸಿದೆ. ರೈತರು ಇಂತಹ ಉತ್ಪನ್ನಗಳನ್ನು ವಿಶ್ವ ಮಾರುಕಟ್ಟೆಯಲ್ಲಿ ಉತ್ತಮ ದರಕ್ಕೆ ರಫ್ತು ಮಾಡುತ್ತಿದ್ದಾರೆ’ ಎಂದೂ ಮೋದಿ ವಿವರಿಸಿದರು.