ರಾಜಧಾನಿ ದೆಹಲಿಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ಕೋವಿಡ್ ರೋಗಿಗಳ ಸಂಕಷ್ಟದ ಬಗ್ಗೆ ಪ್ರಧಾನಿ ಗಮನ ಸೆಳೆದ ಕೇಜ್ರಿವಾಲ್, ದೆಹಲಿಯಲ್ಲಿ ಆಕ್ಸಿಜನ್ ಪ್ಲಾಂಟ್ ಇಲ್ಲವೆಂಬ ಕಾರಣಕ್ಕೆ ದೆಹಲಿಯ 2 ಕೋಟಿ ಜನ ಆಮ್ಲಜನಕ ಪಡೆಯಬಾರದೇ? ರಾಷ್ಟ್ರದ 130 ಕೋಟಿ ಜನರಿಗೆ ರಾಷ್ಟ್ರದ ಸಂಪನ್ಮೂಲಗಳ ಮೇಲೆ ಸಮಾನವಾದ ಹಕ್ಕು ಇಲ್ಲವೇ ಎಂದು ಪ್ರಶ್ನಿಸಿದ್ದರು. ಇದು ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿತ್ತು.