ಅತಿಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿರುವ ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್, ಉತ್ತರ ಪ್ರದೇಶ, ದೆಹಲಿ. ಛತ್ತೀಸಗಡ, ಕರ್ನಾಟಕ, ಕೇರಳ, ತಮಿಳುನಾಡು, ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದಲ್ಲಿನ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಈ ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ಅಗತ್ಯವಿರುವ ಆಮ್ಲಜನಕದ ಪ್ರಮಾಣದ ಅಂದಾಜನ್ನು ಪ್ರಧಾನಿಗೆ ವಿವರಿಸಲಾಗಿದೆ. ಏಪ್ರಿಲ್ 20ರ ವೇಳೆಗೆ 4,880 ಟನ್, ಏಪ್ರಿಲ್ 25ರ ವೇಳೆಗೆ 5,619 ಟನ್ ಮತ್ತು ಏಪ್ರಿಲ್ 30 ವೇಳೆಗೆ 6,593 ಟನ್ ಆಮ್ಲಜನಕವನ್ನು ಹಂಚಿಕೆ ಮಾಡಲಾಗಿದೆ ಎಂದು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ