<p><strong>ವಾರಾಣಸಿ:</strong> ಸ್ವಕ್ಷೇತ್ರ ವಾರಾಣಸಿಯಲ್ಲಿ ಶುಕ್ರವಾರ ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಕೋವಿಡ್ ಲಸಿಕೆಗಳ ಪರಿಣಾಮಕಾರಿತ್ವ ಮತ್ತು ಸುರಕ್ಷತೆಯ ಬಗೆಗಿನ ಆತಂಕ, ತಪ್ಪು ಕಲ್ಪನೆಗಳನ್ನು ನಿವಾರಿಸುವ ಪ್ರಯತ್ನ ಮಾಡಿದ್ದಾರೆ.</p>.<p>'ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ಲಸಿಕೆಗೆ ಕ್ಲೀನ್ ಚಿಟ್ ನೀಡಿದಾಗ, ಲಸಿಕೆಯ ಪರಿಣಾಮಕಾರಿತ್ವದ ಬಗ್ಗೆ ಜನರಿಗೆ ಸಂದೇಶ ರವಾನೆಯಾಗುತ್ತದೆ,' ಎಂದು ಮೋದಿ ವಿಡಿಯೊ ಸಂವಾದದಲ್ಲಿ ಹೇಳಿದರು.</p>.<p>ಕೋವಿಡ್ ಲಸಿಕೆಯನ್ನು ತೆಗೆದುಕೊಂಡ ಆರೋಗ್ಯ ಕಾರ್ಯಕರ್ತರರು ಮತ್ತು ಇತರರು ಈ ಸಂವಾದದಲ್ಲಿ ಭಾಗವಹಿಸಿದ್ದರು. ಅವರು ಲಸಿಕೆ ಪಡೆದ ತಮ್ಮ ಅನುಭವಗಳನ್ನು ಹಂಚಿಕೊಂಡರು.</p>.<p>'ಕೋವಿಡ್ ಲಸಿಕೆಯನ್ನು ಪಡೆದ ನಂತರ ತಮಗೆ ಯಾವುದೇ ಸಮಸ್ಯೆಯಾಗಿಲ್ಲ,' ಎಂದು ನರ್ಸ್ಗಳು, ಲ್ಯಾಬ್ ತಂತ್ರಜ್ಞರು, ವೈದ್ಯರು ಹೇಳಿದರು. ಆರೋಗ್ಯ ಕಾರ್ಯಕರ್ತರ ಈ ಅಭಿಪ್ರಾಯವನ್ನು ಮೋದಿ ಗೌರವಿಸಿದರು, ಶ್ಲಾಘಿಸಿದರು.</p>.<p>ಲಸಿಕೆ ಹಾಕಿಸಿಕೊಳ್ಳಲು ಅಧಿಕಾರಿಗಳು ಹಿಂಜರಿಯುತ್ತಿರುವ, ಅನೇಕ ಆರೋಗ್ಯ ಕಾರ್ಯಕರ್ತರು ತಮ್ಮ ನಿಯೋಜಿತ ಕೇಂದ್ರಗಳಲ್ಲಿ ಲಸಿಕೆ ಹಾಕಿಸಿಕೊಳ್ಳದ ಘಟನೆ ದೇಶದ ಅಲ್ಲಲ್ಲಿ ಕೇಳಿ ಬರುತ್ತಿದೆ. ಇದೇ ಹಿನ್ನೆಲೆಯಲ್ಲಿ ಮೋದಿ ಅವರು ಈ ಸಂವಾದದ ಮೂಲಕ ಅನುಮಾನಗಳನ್ನು ನಿವಾರಿಸುವ ಪ್ರಯತ್ನ ಮಾಡಿದರು.</p>.<p>ಲಸಿಕೆ ಕುರಿತ ಜನರ ಆತಂಕ ದೂರ ಮಾಡುವ ನಿಟ್ಟಿನಲ್ಲಿ ಸ್ವತಃ ಪ್ರಧಾನಿ, ಮುಖ್ಯಮಂತ್ರಿಗಳು ಎರಡನೇ ಹಂತದ ಲಸಿಕೆ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾರಾಣಸಿ:</strong> ಸ್ವಕ್ಷೇತ್ರ ವಾರಾಣಸಿಯಲ್ಲಿ ಶುಕ್ರವಾರ ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಕೋವಿಡ್ ಲಸಿಕೆಗಳ ಪರಿಣಾಮಕಾರಿತ್ವ ಮತ್ತು ಸುರಕ್ಷತೆಯ ಬಗೆಗಿನ ಆತಂಕ, ತಪ್ಪು ಕಲ್ಪನೆಗಳನ್ನು ನಿವಾರಿಸುವ ಪ್ರಯತ್ನ ಮಾಡಿದ್ದಾರೆ.</p>.<p>'ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ಲಸಿಕೆಗೆ ಕ್ಲೀನ್ ಚಿಟ್ ನೀಡಿದಾಗ, ಲಸಿಕೆಯ ಪರಿಣಾಮಕಾರಿತ್ವದ ಬಗ್ಗೆ ಜನರಿಗೆ ಸಂದೇಶ ರವಾನೆಯಾಗುತ್ತದೆ,' ಎಂದು ಮೋದಿ ವಿಡಿಯೊ ಸಂವಾದದಲ್ಲಿ ಹೇಳಿದರು.</p>.<p>ಕೋವಿಡ್ ಲಸಿಕೆಯನ್ನು ತೆಗೆದುಕೊಂಡ ಆರೋಗ್ಯ ಕಾರ್ಯಕರ್ತರರು ಮತ್ತು ಇತರರು ಈ ಸಂವಾದದಲ್ಲಿ ಭಾಗವಹಿಸಿದ್ದರು. ಅವರು ಲಸಿಕೆ ಪಡೆದ ತಮ್ಮ ಅನುಭವಗಳನ್ನು ಹಂಚಿಕೊಂಡರು.</p>.<p>'ಕೋವಿಡ್ ಲಸಿಕೆಯನ್ನು ಪಡೆದ ನಂತರ ತಮಗೆ ಯಾವುದೇ ಸಮಸ್ಯೆಯಾಗಿಲ್ಲ,' ಎಂದು ನರ್ಸ್ಗಳು, ಲ್ಯಾಬ್ ತಂತ್ರಜ್ಞರು, ವೈದ್ಯರು ಹೇಳಿದರು. ಆರೋಗ್ಯ ಕಾರ್ಯಕರ್ತರ ಈ ಅಭಿಪ್ರಾಯವನ್ನು ಮೋದಿ ಗೌರವಿಸಿದರು, ಶ್ಲಾಘಿಸಿದರು.</p>.<p>ಲಸಿಕೆ ಹಾಕಿಸಿಕೊಳ್ಳಲು ಅಧಿಕಾರಿಗಳು ಹಿಂಜರಿಯುತ್ತಿರುವ, ಅನೇಕ ಆರೋಗ್ಯ ಕಾರ್ಯಕರ್ತರು ತಮ್ಮ ನಿಯೋಜಿತ ಕೇಂದ್ರಗಳಲ್ಲಿ ಲಸಿಕೆ ಹಾಕಿಸಿಕೊಳ್ಳದ ಘಟನೆ ದೇಶದ ಅಲ್ಲಲ್ಲಿ ಕೇಳಿ ಬರುತ್ತಿದೆ. ಇದೇ ಹಿನ್ನೆಲೆಯಲ್ಲಿ ಮೋದಿ ಅವರು ಈ ಸಂವಾದದ ಮೂಲಕ ಅನುಮಾನಗಳನ್ನು ನಿವಾರಿಸುವ ಪ್ರಯತ್ನ ಮಾಡಿದರು.</p>.<p>ಲಸಿಕೆ ಕುರಿತ ಜನರ ಆತಂಕ ದೂರ ಮಾಡುವ ನಿಟ್ಟಿನಲ್ಲಿ ಸ್ವತಃ ಪ್ರಧಾನಿ, ಮುಖ್ಯಮಂತ್ರಿಗಳು ಎರಡನೇ ಹಂತದ ಲಸಿಕೆ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>