‘ಚುನಾವಣೆಗಳು ಅಧಿವೇಶನ ಮತ್ತು ಚರ್ಚೆಯ ಮೇಲೆ ಪರಿಣಾಮ ಬೀರುವುದು ನಿಜ. ಆದರೆ, ಚುನಾವಣೆಗಳು ನಡೆಯಲಿ. ಇಡೀ ವರ್ಷಕ್ಕೆ ನೀಲನಕ್ಷೆಯನ್ನು ಒದಗಿಸಿಕೊಡುವ ಈ ಅಧಿವೇಶವು ಫಲಪ್ರದವಾಗಲಿ ಎಂದು ನಾನು ಎಲ್ಲ ಸಂಸದರಲ್ಲಿ ಮನವಿ ಮಾಡುತ್ತೇನೆ. ಈ ವರ್ಷವು ದೇಶವನ್ನು ಆರ್ಥಿಕತೆಯ ಹೊಸ ಎತ್ತರಕ್ಕೆ ಕೊಂಡೊಯ್ಯಲು ಉತ್ತಮ ಅವಕಾಶ ಕಲ್ಪಿಸಲಿ’ ಎಂದು ಪ್ರಧಾನಿ ಆಶಿಸಿದ್ದಾರೆ.