ನವದೆಹಲಿ: ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿನ ಕೋವಿಡ್ ಪರಿಸ್ಥಿತಿಗಳ ಬಗ್ಗೆ ಪರಿಶೀಲನೆ ನಡೆಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಿಗ್ಗೆ 11 ಗಂಟೆಗೆ ಸಭೆ ಕರೆದಿದ್ದಾರೆ.
‘ಪ್ರಧಾನಿ ಅವರು ಹಿರಿಯ ಅಧಿಕಾರಿಗಳು, ಸ್ಥಳೀಯ ಆಡಳಿತಗಳ ಅಧಿಕಾರಿಗಳು, ವೈದ್ಯರ ಜತೆಗೆ ಸಮಾಲೋಚನೆ ನಡೆಸಲಿದ್ದಾರೆ’ ಎಂದು ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.
ಉತ್ತರ ಪ್ರದೇಶದ ಇತರ ನಗರಗಳಂತೆ ವಾರಾಣಸಿಯಲ್ಲಿ ಸಹ ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಳವಾಗಿದ್ದು, ಅಲ್ಲಿನ ಲೋಕಸಭಾ ಸದಸ್ಯರಾಗಿರುವ ನರೇಂದ್ರ ಮೋದಿ ಅವರು ಪರಿಸ್ಥಿತಿಯ ಅವಲೋಕನ ಮತ್ತು ಮಾರ್ಗದರ್ಶನಕ್ಕಾಗಿ ಈ ಸಭೆ ನಡೆಸಲಿದ್ದಾರೆ.