<p><strong>ತುರಾ: </strong>ಫೆಬ್ರುವರಿ 27ರಂದು ಮೇಘಾಲಯದಲ್ಲಿ 60 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆ ಇಂದು (ಶುಕ್ರವಾರ) ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. </p>.<p>ಮೇಘಾಲಯದ ತುರಾದಲ್ಲಿ ಇಂದು ಮೋದಿ ರೋಡ್ಶೋ ನಡೆಸಲಿದ್ದು, ಬಳಿಕ ಬೃಹತ್ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.</p>.<p>ನಗರದ ಹೃದಯಭಾಗದಲ್ಲಿರುವ ಖಿಂದೈಲಾದ್ ಪ್ರದೇಶದಲ್ಲಿ ನಡೆಯುವ ರೋಡ್ಶೋನಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ ಮತ್ತು ರಾಜ್ಯದ ಮೂವರು ಸ್ವಾತಂತ್ರ್ಯ ಹೋರಾಟಗಾರರಾದ ಯು ಟಿರೋಟ್ ಸಿಂಗ್, ಯು ಕಿಯಾಂಗ್ ನಂಗ್ಬಾ ಮತ್ತು ಪಾ ಟೋಗನ್ ಸಂಗ್ಮಾ ಅವರಿಗೆ ಬೆಳಗ್ಗೆ 11 ಗಂಟೆ ಸುಮಾರಿಗೆ ಪುಷ್ಪ ನಮನ ಸಲ್ಲಿಸಿ ನಂತರ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಮೇಘಾಲಯದ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ತಿಳಿಸಿದರು.</p>.<p>ರೋಡ್ಶೋ ನಂತರ ಪ್ರಧಾನಿ ಮೋದಿ ಅವರು ಮಧ್ಯಾಹ್ನ ಪಶ್ಚಿಮ ಗರೋ ಹಿಲ್ಸ್ ಜಿಲ್ಲೆಯ ತುರಾಗೆ ತೆರಳಲಿದ್ದು, ಅಲ್ಲಿ ಬಿಸಿಸಿಐ ಅನುದಾನಿತ ಅಲೋಟ್ಗ್ರೆ ಕ್ರೀಡಾಂಗಣದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.</p>.<p> ₹127 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪಿ.ಎ. ಸಂಗ್ಮಾ ಕ್ರೀಡಾಂಗಣದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಬೇಕಿತ್ತು. ಆದರೆ ಸುರಕ್ಷತಾ ಕ್ರಮ ಉಲ್ಲೇಖಿಸಿ ಕ್ರೀಡಾ ಇಲಾಖೆ ಮೋದಿ ಭಾಷಣಕ್ಕೆ ಅನುಮತಿ ನಿರಾಕರಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರಾ: </strong>ಫೆಬ್ರುವರಿ 27ರಂದು ಮೇಘಾಲಯದಲ್ಲಿ 60 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆ ಇಂದು (ಶುಕ್ರವಾರ) ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. </p>.<p>ಮೇಘಾಲಯದ ತುರಾದಲ್ಲಿ ಇಂದು ಮೋದಿ ರೋಡ್ಶೋ ನಡೆಸಲಿದ್ದು, ಬಳಿಕ ಬೃಹತ್ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.</p>.<p>ನಗರದ ಹೃದಯಭಾಗದಲ್ಲಿರುವ ಖಿಂದೈಲಾದ್ ಪ್ರದೇಶದಲ್ಲಿ ನಡೆಯುವ ರೋಡ್ಶೋನಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ ಮತ್ತು ರಾಜ್ಯದ ಮೂವರು ಸ್ವಾತಂತ್ರ್ಯ ಹೋರಾಟಗಾರರಾದ ಯು ಟಿರೋಟ್ ಸಿಂಗ್, ಯು ಕಿಯಾಂಗ್ ನಂಗ್ಬಾ ಮತ್ತು ಪಾ ಟೋಗನ್ ಸಂಗ್ಮಾ ಅವರಿಗೆ ಬೆಳಗ್ಗೆ 11 ಗಂಟೆ ಸುಮಾರಿಗೆ ಪುಷ್ಪ ನಮನ ಸಲ್ಲಿಸಿ ನಂತರ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಮೇಘಾಲಯದ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ತಿಳಿಸಿದರು.</p>.<p>ರೋಡ್ಶೋ ನಂತರ ಪ್ರಧಾನಿ ಮೋದಿ ಅವರು ಮಧ್ಯಾಹ್ನ ಪಶ್ಚಿಮ ಗರೋ ಹಿಲ್ಸ್ ಜಿಲ್ಲೆಯ ತುರಾಗೆ ತೆರಳಲಿದ್ದು, ಅಲ್ಲಿ ಬಿಸಿಸಿಐ ಅನುದಾನಿತ ಅಲೋಟ್ಗ್ರೆ ಕ್ರೀಡಾಂಗಣದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.</p>.<p> ₹127 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪಿ.ಎ. ಸಂಗ್ಮಾ ಕ್ರೀಡಾಂಗಣದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಬೇಕಿತ್ತು. ಆದರೆ ಸುರಕ್ಷತಾ ಕ್ರಮ ಉಲ್ಲೇಖಿಸಿ ಕ್ರೀಡಾ ಇಲಾಖೆ ಮೋದಿ ಭಾಷಣಕ್ಕೆ ಅನುಮತಿ ನಿರಾಕರಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>