<p><strong>ಕೋಲ್ಕತ್ತ/ನವದೆಹಲಿ: </strong>ಗುಜರಾತ್ನ ಗಾಂಧಿನಗರದಲ್ಲಿ ತಾಯಿ ಹೀರಾಬೆನ್ ಅಂತ್ಯಸಂಸ್ಕಾರ ನೆರವೇರಿಸಿ ಪ್ರಧಾನಿ ನರೇಂದ್ರ ಮೋದಿ ಕರ್ತವ್ಯಕ್ಕೆ ಮರಳಿದ್ದಾರೆ.</p>.<p>ಹೌರಾ ಮತ್ತು ನ್ಯೂ ಜಲಪಾಯ್ಗುರಿ ನಡುವಿನ ‘ವಂದೇ ಭಾರತ್ ಎಕ್ಸ್ಪ್ರೆಸ್’ ರೈಲಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.</p>.<p>ಕೋಲ್ಕತ್ತಾ ಮೆಟ್ರೋ ರೈಲು ಪರ್ಪಲ್ ಲೈನ್ನ ಜೋಕಾ-ತಾರಾಟಾಲಾ ವಿಸ್ತರಣೆ ಮತ್ತು ನ್ಯೂ ಜಲಪಾಯ್ಗುರಿ ರೈಲು ನಿಲ್ದಾಣದಲ್ಲಿ ಅಭಿವೃದ್ಧಿಕೆಲಸಗಳು ಸೇರಿದಂತೆ ಇತರೆ ರೈಲ್ವೆ ಯೋಜನೆಗಳನ್ನುಉದ್ಘಾಟಿಸಿದ್ದಾರೆ.</p>.<p>ಇಂದು ಬೆಳಿಗ್ಗೆ ಅವರು ₹7,800 ಕೋಟಿ ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಬೇಕಿತ್ತು. ತಾಯಿ ನಿಧನದ ಹಿನ್ನೆಲೆಯಲ್ಲಿ ಅವರು ದಿಢೀರ್ ಅಹಮದಾಬಾದ್ಗೆ ತೆರಳಿದ್ದರು.</p>.<p>ಇದರಲ್ಲಿ ₹2,550 ಕೋಟಿ ವೆಚ್ಚದ ಒಳಚರಂಡಿ ಮೂಲಸೌಕರ್ಯ ಯೋಜನೆಗಳು ಸೇರಿವೆ.</p>.<p>ವಿಚಾರವಾದಿ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಹೆಸರಿನ ರಾಷ್ಟ್ರೀಯ ನೀರು ಮತ್ತು ನೈರ್ಮಲ್ಯ ಸಂಸ್ಥೆಯನ್ನು ಮೋದಿ ಉದ್ಘಾಟಿಸಿದ್ದಾರೆ.</p>.<p>ಮೋದಿ ಅವರು ಕೋಲ್ಕತ್ತಾದಲ್ಲಿ ರಾಷ್ಟ್ರೀಯ ಗಂಗಾ ಪರಿಷತ್ತಿನ (ಎನ್ಜಿಸಿ) ಎರಡನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ/ನವದೆಹಲಿ: </strong>ಗುಜರಾತ್ನ ಗಾಂಧಿನಗರದಲ್ಲಿ ತಾಯಿ ಹೀರಾಬೆನ್ ಅಂತ್ಯಸಂಸ್ಕಾರ ನೆರವೇರಿಸಿ ಪ್ರಧಾನಿ ನರೇಂದ್ರ ಮೋದಿ ಕರ್ತವ್ಯಕ್ಕೆ ಮರಳಿದ್ದಾರೆ.</p>.<p>ಹೌರಾ ಮತ್ತು ನ್ಯೂ ಜಲಪಾಯ್ಗುರಿ ನಡುವಿನ ‘ವಂದೇ ಭಾರತ್ ಎಕ್ಸ್ಪ್ರೆಸ್’ ರೈಲಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.</p>.<p>ಕೋಲ್ಕತ್ತಾ ಮೆಟ್ರೋ ರೈಲು ಪರ್ಪಲ್ ಲೈನ್ನ ಜೋಕಾ-ತಾರಾಟಾಲಾ ವಿಸ್ತರಣೆ ಮತ್ತು ನ್ಯೂ ಜಲಪಾಯ್ಗುರಿ ರೈಲು ನಿಲ್ದಾಣದಲ್ಲಿ ಅಭಿವೃದ್ಧಿಕೆಲಸಗಳು ಸೇರಿದಂತೆ ಇತರೆ ರೈಲ್ವೆ ಯೋಜನೆಗಳನ್ನುಉದ್ಘಾಟಿಸಿದ್ದಾರೆ.</p>.<p>ಇಂದು ಬೆಳಿಗ್ಗೆ ಅವರು ₹7,800 ಕೋಟಿ ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಬೇಕಿತ್ತು. ತಾಯಿ ನಿಧನದ ಹಿನ್ನೆಲೆಯಲ್ಲಿ ಅವರು ದಿಢೀರ್ ಅಹಮದಾಬಾದ್ಗೆ ತೆರಳಿದ್ದರು.</p>.<p>ಇದರಲ್ಲಿ ₹2,550 ಕೋಟಿ ವೆಚ್ಚದ ಒಳಚರಂಡಿ ಮೂಲಸೌಕರ್ಯ ಯೋಜನೆಗಳು ಸೇರಿವೆ.</p>.<p>ವಿಚಾರವಾದಿ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಹೆಸರಿನ ರಾಷ್ಟ್ರೀಯ ನೀರು ಮತ್ತು ನೈರ್ಮಲ್ಯ ಸಂಸ್ಥೆಯನ್ನು ಮೋದಿ ಉದ್ಘಾಟಿಸಿದ್ದಾರೆ.</p>.<p>ಮೋದಿ ಅವರು ಕೋಲ್ಕತ್ತಾದಲ್ಲಿ ರಾಷ್ಟ್ರೀಯ ಗಂಗಾ ಪರಿಷತ್ತಿನ (ಎನ್ಜಿಸಿ) ಎರಡನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>