ಕಿಶ್ತ್ವಾರ್ ಜಿಲ್ಲೆಯಲ್ಲಿ ಚೆನಾಬ್ ನದಿಯ ಮೇಲೆ ನಿರ್ಮಿಸಲಾಗುತ್ತಿರುವ ರಾಟ್ಲೆ ಮತ್ತು ಕ್ವಾರ್ ಜಲವಿದ್ಯುತ್ ಯೋಜನೆಗಳಿಗೆ ಶಂಕುಸ್ಥಾಪನೆ, ಪಲ್ಲಿ ಪಂಚಾಯ್ತಿಯಲ್ಲಿ ಸುಮಾರು ₹ 70 ಸಾವಿರ ಕೋಟಿ ವೆಚ್ಚದ ಕೈಗಾರಿಕಾ ಹೂಡಿಕೆಗಳಿಗೆ ಶಿಲಾನ್ಯಾಸ ಸಮಾರಂಭ ಹಾಗೂ ಬನಿಹಾಲ್- ಖಾಜಿಗುಂಡ್ ರಸ್ತೆ ಸುರಂಗ ಮಾರ್ಗದ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.