<p><strong>ಲಖನೌ:</strong> ಕೋವಿಡ್ ಲಸಿಕೆ ವಿಷಯದಲ್ಲಿ ರಾಜಕೀಯ ಮಾಡುವುದನ್ನು ತೀವ್ರವಾಗಿ ಟೀಕಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕೆಯ ಕುರಿತ ಭಯ ನಿವಾರಿಸುವ ಪ್ರಯತ್ನ ಮಾಡಿದ್ದಾರೆ. ಲಸಿಕೆ ನೀಡಿಕೆ ವಿಚಾರದಲ್ಲಿ ವಿಜ್ಞಾನಿಗಳ ಸಲಹೆಯಂತೆ ನಡೆದುಕೊಂಡಿರುವುದಾಗಿಯೂ ಹೇಳಿದ್ದಾರೆ.</p>.<p>ವಾರಾಣಸಿ ಲೋಕಸಭಾ ಕ್ಷೇತ್ರದ ಆರೋಗ್ಯ ಕಾರ್ಯಕರ್ತರ ಜತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದದಲ್ಲಿ ಭಾಗವಹಿಸಿದ ಅವರು, ಭಾರತ್ ಬಯೋಟೆಕ್ನ ‘ಕೊವ್ಯಾಕ್ಸಿನ್’ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಿರುವ ಬಗ್ಗೆ ಎದುರಾದ ಟೀಕೆಗಳ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪಿಸಿದ್ದಾರೆ.</p>.<p>‘ವಿಜ್ಞಾನಿಗಳು ಹೇಳಿದ್ದನ್ನು ನಾನು ಮಾಡುತ್ತೇನೆ ಎಂಬ ಒಂದೇ ಪ್ರತಿಕ್ರಿಯೆ ನೀಡಿದ್ದೇನೆ. ಇದು ರಾಜಕಾರಣಿಗಳು ನಿರ್ಧರಿಸುವಂಥ ವಿಷಯವಲ್ಲ’ ಎಂದು ಅವರು ಹೇಳಿದ್ದಾರೆ.</p>.<p>‘ವಿಜ್ಞಾನಿಗಳಿಂದ ಅನುಮತಿ ದೊರೆತ ಬಳಿಕ ಎಲ್ಲಿಂದ ಆರಂಭಿಸಬೇಕು ಎಂಬುದನ್ನು ನಾವು ನಿರ್ಧರಿಸಬೇಕಿತ್ತು. ಬಳಿಕ ನಾವು ನಿರಂತರವಾಗಿ ರೋಗಿಗಳ ಜತೆ ಸಂಪರ್ಕದಲ್ಲಿರುವ ಆರೋಗ್ಯ ಕಾರ್ಯಕರ್ತರಿಂದ ಲಸಿಕೆ ನೀಡಿಕೆ ಆರಂಭಿಸಲು ನಿರ್ಧರಿಸಿದೆವು’ ಎಂದು ಮೋದಿ ಹೇಳಿದ್ದಾರೆ.</p>.<p>‘ಕೆಲವು ಜನ ನನ್ನ ನಿರ್ಧಾರದ ಬಗ್ಗೆಯೂ ಸಿಟ್ಟಾಗಿದ್ದಾರೆ’ ಎಂದೂ ಪ್ರಧಾನಿ ಹೇಳಿದ್ದಾರೆ.</p>.<p>ಲಸಿಕೆ ನೀಡಿಕೆ ಅಭಿಯಾನಕ್ಕೆ ಮೋದಿಯವರು ಜನವರಿ 16ರಂದು ಚಾಲನೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಕೋವಿಡ್ ಲಸಿಕೆ ವಿಷಯದಲ್ಲಿ ರಾಜಕೀಯ ಮಾಡುವುದನ್ನು ತೀವ್ರವಾಗಿ ಟೀಕಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕೆಯ ಕುರಿತ ಭಯ ನಿವಾರಿಸುವ ಪ್ರಯತ್ನ ಮಾಡಿದ್ದಾರೆ. ಲಸಿಕೆ ನೀಡಿಕೆ ವಿಚಾರದಲ್ಲಿ ವಿಜ್ಞಾನಿಗಳ ಸಲಹೆಯಂತೆ ನಡೆದುಕೊಂಡಿರುವುದಾಗಿಯೂ ಹೇಳಿದ್ದಾರೆ.</p>.<p>ವಾರಾಣಸಿ ಲೋಕಸಭಾ ಕ್ಷೇತ್ರದ ಆರೋಗ್ಯ ಕಾರ್ಯಕರ್ತರ ಜತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದದಲ್ಲಿ ಭಾಗವಹಿಸಿದ ಅವರು, ಭಾರತ್ ಬಯೋಟೆಕ್ನ ‘ಕೊವ್ಯಾಕ್ಸಿನ್’ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಿರುವ ಬಗ್ಗೆ ಎದುರಾದ ಟೀಕೆಗಳ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪಿಸಿದ್ದಾರೆ.</p>.<p>‘ವಿಜ್ಞಾನಿಗಳು ಹೇಳಿದ್ದನ್ನು ನಾನು ಮಾಡುತ್ತೇನೆ ಎಂಬ ಒಂದೇ ಪ್ರತಿಕ್ರಿಯೆ ನೀಡಿದ್ದೇನೆ. ಇದು ರಾಜಕಾರಣಿಗಳು ನಿರ್ಧರಿಸುವಂಥ ವಿಷಯವಲ್ಲ’ ಎಂದು ಅವರು ಹೇಳಿದ್ದಾರೆ.</p>.<p>‘ವಿಜ್ಞಾನಿಗಳಿಂದ ಅನುಮತಿ ದೊರೆತ ಬಳಿಕ ಎಲ್ಲಿಂದ ಆರಂಭಿಸಬೇಕು ಎಂಬುದನ್ನು ನಾವು ನಿರ್ಧರಿಸಬೇಕಿತ್ತು. ಬಳಿಕ ನಾವು ನಿರಂತರವಾಗಿ ರೋಗಿಗಳ ಜತೆ ಸಂಪರ್ಕದಲ್ಲಿರುವ ಆರೋಗ್ಯ ಕಾರ್ಯಕರ್ತರಿಂದ ಲಸಿಕೆ ನೀಡಿಕೆ ಆರಂಭಿಸಲು ನಿರ್ಧರಿಸಿದೆವು’ ಎಂದು ಮೋದಿ ಹೇಳಿದ್ದಾರೆ.</p>.<p>‘ಕೆಲವು ಜನ ನನ್ನ ನಿರ್ಧಾರದ ಬಗ್ಗೆಯೂ ಸಿಟ್ಟಾಗಿದ್ದಾರೆ’ ಎಂದೂ ಪ್ರಧಾನಿ ಹೇಳಿದ್ದಾರೆ.</p>.<p>ಲಸಿಕೆ ನೀಡಿಕೆ ಅಭಿಯಾನಕ್ಕೆ ಮೋದಿಯವರು ಜನವರಿ 16ರಂದು ಚಾಲನೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>