ಸೋಮವಾರ, ಮಾರ್ಚ್ 27, 2023
32 °C

ರಾಷ್ಟ್ರಪತಿ ಚುನಾವಣೆಯಲ್ಲಿ ಜಯ; ದ್ರೌಪದಿ ಮುರ್ಮು ಅಭಿನಂದಿಸಿದ ಪ್ರಧಾನಿ ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಜಯ ಗಳಿಸಿರುವ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ದ್ರೌಪದಿ ಮುರ್ಮು ತಂಗಿರುವ ನಿವಾಸಕ್ಕೆ ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ.

ಇದನ್ನೂ ಓದಿ: 

ಮೂರನೇ ಸುತ್ತಿನ ಮತ ಎಣಿಕೆಯ ಬಳಿಕ ಒಟ್ಟು ಮತಗಳ ಅರ್ಧದಷ್ಟು ಮತಗಳನ್ನು ದ್ರೌಪದಿ ಮುರ್ಮು ಗಳಿಸಿರುವುದಾಗಿ ಚುನಾವಣಾ ಅಧಿಕಾರಿ ಪಿ.ಸಿ. ಮೋದಿ ಘೋಷಿಸಿದ್ದಾರೆ. ಇದರಿಂದ ಗೆಲುವು ಬಹುತೇಕ ನಿಚ್ಚಳಗೊಂಡಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ.

 

 

 

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು, ರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾದ ಬುಡಕಟ್ಟು ಜನಾಂಗದ ಮೊದಲ ಮಹಿಳೆ ಎಂದೆನಿಸಿಕೊಳ್ಳಲಿದ್ದಾರೆ.

 

ಗುರುವಾರ ನಡೆಯುತ್ತಿರುವ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮು ಅವರು ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಸೋಲಿಸುವುದು ಬಹುತೇಕ ಖಚಿತಗೊಂಡಿದೆ.

ಅಲ್ಲದೆ ದೇಶದೆಲ್ಲೆಡೆ ದ್ರೌಪದಿ ಮುರ್ಮು ಬೆಂಬಲಿಗರಲ್ಲಿ ಸಂಭ್ರಮ ಮನೆ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು