<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದ ಮುಖ್ಯವಾಹಿನಿಯ ರಾಜಕೀಯ ಪಕ್ಷಗಳಿಗೆ ಕೇಂದ್ರದಿಂದ ಮಾತುಕತೆಗೆ ಬಂದಿರುವ ಆಹ್ವಾನಕ್ಕೆ ಸಂಬಂಧಿಸಿದಂತೆ ಸಮಾಲೋಚನೆಗಳು ಆರಂಭವಾಗಿವೆ.</p>.<p>ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಪಕ್ಷದ ಹಿರಿಯ ಮುಖಂಡರೊಂದಿಗೆ ಸಮಾಲೋಚನೆ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ.</p>.<p>ಇದೇ 24ರಂದು ಸಭೆಗೆ ಬರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಆಹ್ವಾನ ಕೊಟ್ಟಿದ್ದಾರೆ.ಸಭೆಯಲ್ಲಿ ಭಾಗ<br />ವಹಿಸಬೇಕೇ, ಬೇಡವೇ ಎಂಬುದನ್ನು ಎನ್ಸಿ ಪ್ರಧಾನ ಕಾರ್ಯದರ್ಶಿ ಅಲಿ ಮೊಹಮ್ಮದ್ ಸಾಗರ್ ಮತ್ತು ಕಾಶ್ಮೀರದ ಪ್ರಾಂತೀಯ ಅಧ್ಯಕ್ಷ ನಾಸಿರ್ ಅಸ್ಲಂ ವಾನಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರ ಜತೆಗೆ ಚರ್ಚೆ ನಡೆಸಿದ್ದಾರೆ.</p>.<p>‘ಈ ಸಭೆಯ ಬಳಿಕ ಪೀಪಲ್ಸ್ ಅಲಯನ್ಸ್ ಫಾರ್ ಗುಪ್ಕರ್ ಘೋಷಣೆಯ (ಪಿಎಜಿಡಿ) ಭಾಗವಾಗಿರುವ ಪಕ್ಷಗಳ ಸಭೆ ನಡೆಯಲಿದ್ದು, ಅಲ್ಲಿ ಈ ವಿಷಯದ ಬಗ್ಗೆ ಚರ್ಚಿಸಿ ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುತ್ತವೆ’ ಎಂದು ಅಬ್ದುಲ್ಲಾ ಹೇಳಿದ್ದಾರೆ.</p>.<p>ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಎನ್ಸಿ ಇಲ್ಲಿಯವರೆಗೆ ಯಾವುದೇ ರಚನಾತ್ಮಕ ಅಥವಾ ಸಂಘಟಿತ ಸಭೆ ಕರೆದಿಲ್ಲ ಎಂದು ಪಕ್ಷದ ಮುಖಂಡ ವಾನಿ ಹೇಳಿದ್ದಾರೆ.</p>.<p class="Subhead"><strong>ಮೆಹಬೂಬಾಗೆ ಅಧಿಕಾರ:</strong><br />ಪಿಡಿಪಿ ಯಾವ ನಿಲುವು ತಳೆಯಬೇಕು ಎಂಬುದನ್ನು ನಿರ್ಧರಿಸಲು ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯು ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರಿಗೆ ಅಧಿಕಾರ ನೀಡಿದೆ.ಮೆಹಬೂಬಾ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದ ಮುಖ್ಯವಾಹಿನಿಯ ರಾಜಕೀಯ ಪಕ್ಷಗಳಿಗೆ ಕೇಂದ್ರದಿಂದ ಮಾತುಕತೆಗೆ ಬಂದಿರುವ ಆಹ್ವಾನಕ್ಕೆ ಸಂಬಂಧಿಸಿದಂತೆ ಸಮಾಲೋಚನೆಗಳು ಆರಂಭವಾಗಿವೆ.</p>.<p>ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಪಕ್ಷದ ಹಿರಿಯ ಮುಖಂಡರೊಂದಿಗೆ ಸಮಾಲೋಚನೆ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ.</p>.<p>ಇದೇ 24ರಂದು ಸಭೆಗೆ ಬರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಆಹ್ವಾನ ಕೊಟ್ಟಿದ್ದಾರೆ.ಸಭೆಯಲ್ಲಿ ಭಾಗ<br />ವಹಿಸಬೇಕೇ, ಬೇಡವೇ ಎಂಬುದನ್ನು ಎನ್ಸಿ ಪ್ರಧಾನ ಕಾರ್ಯದರ್ಶಿ ಅಲಿ ಮೊಹಮ್ಮದ್ ಸಾಗರ್ ಮತ್ತು ಕಾಶ್ಮೀರದ ಪ್ರಾಂತೀಯ ಅಧ್ಯಕ್ಷ ನಾಸಿರ್ ಅಸ್ಲಂ ವಾನಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರ ಜತೆಗೆ ಚರ್ಚೆ ನಡೆಸಿದ್ದಾರೆ.</p>.<p>‘ಈ ಸಭೆಯ ಬಳಿಕ ಪೀಪಲ್ಸ್ ಅಲಯನ್ಸ್ ಫಾರ್ ಗುಪ್ಕರ್ ಘೋಷಣೆಯ (ಪಿಎಜಿಡಿ) ಭಾಗವಾಗಿರುವ ಪಕ್ಷಗಳ ಸಭೆ ನಡೆಯಲಿದ್ದು, ಅಲ್ಲಿ ಈ ವಿಷಯದ ಬಗ್ಗೆ ಚರ್ಚಿಸಿ ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುತ್ತವೆ’ ಎಂದು ಅಬ್ದುಲ್ಲಾ ಹೇಳಿದ್ದಾರೆ.</p>.<p>ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಎನ್ಸಿ ಇಲ್ಲಿಯವರೆಗೆ ಯಾವುದೇ ರಚನಾತ್ಮಕ ಅಥವಾ ಸಂಘಟಿತ ಸಭೆ ಕರೆದಿಲ್ಲ ಎಂದು ಪಕ್ಷದ ಮುಖಂಡ ವಾನಿ ಹೇಳಿದ್ದಾರೆ.</p>.<p class="Subhead"><strong>ಮೆಹಬೂಬಾಗೆ ಅಧಿಕಾರ:</strong><br />ಪಿಡಿಪಿ ಯಾವ ನಿಲುವು ತಳೆಯಬೇಕು ಎಂಬುದನ್ನು ನಿರ್ಧರಿಸಲು ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯು ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರಿಗೆ ಅಧಿಕಾರ ನೀಡಿದೆ.ಮೆಹಬೂಬಾ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>