ಪ್ರಧಾನಮಂತ್ರಿ ಮತ್ತು ಬೆಂಗಾವಲು ಪಡೆಯಿದ್ದ ವಾಹನಗಳು ಇದೇ 5ರಂದು ಫಿರೋಜ್ಪುರ್ನ ಮೇಲ್ಸೇತುವೆಯಲ್ಲಿ 15 ನಿಮಿಷ ಸ್ಥಗಿತವಾಗಿದ್ದವು. ಆಗ ರಸ್ತೆಯಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಇದು ಭದ್ರತಾ ವೈಫಲ್ಯದ ಚರ್ಚೆಗೆ ಆಸ್ಪದವಾಗಿತ್ತು. ಪ್ರಧಾನಿಯವರು ರ್ಯಾಲಿಯೊಂದರಲ್ಲಿ ಭಾಗವಹಿಸಬೇಕಿತ್ತು. ಆದರೆ, ಭದ್ರತಾ ಲೋಪದ ಬಳಿಕ ಅವರು ಕಾರ್ಯಕ್ರಮದಲ್ಲಿ ಭಾಗವಹಿಸದೆಯೇ ಹಿಂದಿರುಗಿದ್ದರು.