ನವದೆಹಲಿ: ಉಕ್ರೇನ್ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ನಮಗೆ ಮನವರಿಕೆಯಾಗಿದೆ ಎಂದು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಅವರು ತಿಳಿಸಿರುವುದಾಗಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಸೋಮವಾರ ಹೇಳಿದ್ದಾರೆ.
ಈ ಬಿಕ್ಕಟ್ಟು ಇಂಡೊ–ಪೆಸಿಫಿಕ್ನಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಕಾರಣವಾಗಬಾರದೆಂಬ ಆಶಯವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಮಾರಿಸನ್ ಅವರು ವ್ಯಕ್ತಪಡಿಸಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.