<p><strong>ನವದೆಹಲಿ:</strong> 'ಮನ್ ಕಿ ಬಾತ್' ರೆಡಿಯೊ ಕಾರ್ಯಕ್ರಮದ 75ನೇ ಸಂಚಿಕೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದಪ್ರಧಾನಿ ನರೇಂದ್ರ ಮೋದಿ ಅನೇಕ ವಿಷಯಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.</p>.<p><strong>ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ಮುಖ್ಯಾಂಶಗಳು:<br /><br />ಕೃಷಿಯಲ್ಲಿ ನಾವೀನ್ಯ ತಂತ್ರಗಾರಿಕೆ...</strong><br />ಆದಾಯವನ್ನು ಹೆಚ್ಚಿಸಲು ಮತ್ತು ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ರೈತರು ಸಾಂಪ್ರದಾಯಿಕ ಕೃಷಿಯ ಜೊತೆಗೆ ನಾವೀನ್ಯ ತಂತ್ರಗಾರಿಕೆಗಳನ್ನು ಆಳವಡಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ಮಾಡಿದ್ದಾರೆ.<br /></p>.<p><strong>'ಜನತಾ ಕರ್ಫ್ಯೂ' ನೆನಪಿಸಿದ ಮೋದಿ...</strong><br />ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ನಾವು 'ಜನತಾ ಕರ್ಫ್ಯೂ' ಆಚರಿಸಿದ್ದೆವು. ಇದು ಶಿಸ್ತಿಗೆ ಉತ್ತಮ ಉದಾಹರಣೆಯಾಗಿದ್ದು, ಇಡೀ ಜಗತ್ತಿಗೆ ಸ್ಫೂರ್ತಿಯಾಗಿದೆ. ಕೊರೊನಾ ಸೇನಾನಿಗಳಿಗೆ ನಮ್ಮ ಗೌರವ ಮತ್ತು ಪ್ರೀತಿಯನ್ನು ತೋರಿದ್ದೇವೆ ಎಂದು ತಿಳಿಸಿದ್ದಾರೆ.</p>.<p>ಇಂದು ನಾವು ಜಗತ್ತಿನಲ್ಲೇ ಅತ್ಯಂತ ದೊಡ್ಡ ಕೊರೊನಾ ಲಸಿಕಾ ಅಭಿಯಾನವನ್ನು ನಡೆಸುತ್ತಿದ್ದೇವೆ. ದೇಶದಾದ್ಯಂತ ಜನರು ಲಸಿಕೆಯನ್ನು ಪಡೆಯುತ್ತಿರುವುದನ್ನು ನೋಡಿ ತುಂಬಾನೇ ಸಂತೋಷವಾಗುತ್ತಿದೆ. ಕೇರಳದ ವ್ಯಕ್ತಿಯೊಬ್ಬರು ಇದಕ್ಕೆ 'ಲಸಿಕೆ ಸೇವಾ' ಎಂದು ಹೆಸರಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/ldf-udf-playing-friendly-match-in-kerala-rajnath-singh-817210.html" itemprop="url">ಕೇರಳದಲ್ಲಿ ಎಲ್ಡಿಎಫ್–ಯುಡಿಎಫ್ ‘ಸ್ನೇಹಪರ ಪಂದ್ಯ’: ರಾಜನಾಥ ಸಿಂಗ್ ಟೀಕೆ </a></p>.<p><strong>ಮಿಥಾಲಿ ರಾಜ್ಗೆ ಅಭಿನಂದನೆ...</strong><br />ಭಾರತ ಮಹಿಳಾ ಏಕದಿನ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್, ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ 10,000 ರನ್ ಮೈಲುಗಲ್ಲು ದಾಟಿದ್ದಾರೆ. ಈ ಸಂದರ್ಭದಲ್ಲಿ ನಾನು ಅವರಿಗೆ ಅಭಿನಂದನೆಯನ್ನು ಸಲ್ಲಿಸುತ್ತಿದ್ದು, ಮಹಿಳೆಯರು ಸೇರಿದಂತೆ ಪುರುಷರಿಗೂ ಮಾದರಿಯಾಗಿದ್ದಾರೆ.</p>.<p>ಈ ತಿಂಗಳು ನಾವು ಮಹಿಳಾ ದಿನಚಾರಣೆಯನ್ನು ಆಚರಿಸಿದಾಗ ನಮ್ಮ ಅನೇಕ ಮಹಿಳಾ ಕ್ರೀಡಾಪಟಗಳು ಅತ್ಯುತ್ತಮ ಸಾಧನೆ ಮಾಡಿರುವುದು ಸಂತಸ ತಂದಿದೆ. ಹೆಣ್ಣು ಮಕ್ಕಳು ಕ್ರೀಡೆ ಹಾಗೂ ಜೀವನದ ವಿವಿಧ ವಿಭಾಗಗಳಲ್ಲಿ ತಮ್ಮನ್ನು ತಾವೇ ತೊಡಗಿಸಿಕೊಂಡಿರುವುದು ಬಹಳ ಸಂತೋಷ ನೀಡಿದೆ.</p>.<p>ದೆಹಲಿಯಲ್ಲಿ ಆಯೋಜಿಸಿದ್ದ ಐಎಸ್ಎಸ್ಎಫ್ ವಿಶ್ವಕಪ್ ಶೂಟಿಂಗ್ನಲ್ಲಿ ಭಾರತೀಯ ಮಹಿಳಾ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಿ ದಾಖಲೆ ಬರೆದಿದ್ದಾರೆ. ಪದಕ ಬೇಟೆಯಲ್ಲಿಯೂ ಭಾರತ ಮುಂದಿದೆ ಎಂದು ಉಲ್ಲೇಖಿಸಿದ್ದಾರೆ.</p>.<p><strong>ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದಿಂದ ಪ್ರೇರಣೆ...</strong><br />ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಅನೇಕ ಕಷ್ಟಗಳನ್ನು ಅನುಭವಿಸಿದ್ದರು. ಯಾಕೆಂದರೆ ದೇಶದ ಹಿತಕ್ಕಾಗಿ ತ್ಯಾಗ ಮಾಡುವುದು ತಮ್ಮ ಕರ್ತವ್ಯ ಎಂದು ಪರಿಗಣಿಸಿದ್ದರು. ಅವರ ತ್ಯಾಗ ಮತ್ತು ಬಲಿದಾನ ನಮ್ಮ ಕರ್ತವ್ಯದ ಹಾದಿಗೆ ನಿರಂತರವಾಗಿ ಪ್ರೇರೇಪಿಸಲಿದೆ ಎಂದು ನುಡಿದರು.</p>.<p>ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಅನೇಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಧಾನಿ ಮೋದಿ ಹೇಳಿದರು.</p>.<p><strong>ಕೊಯಮತ್ತೂರಿನ ಬಸ್ ಕಂಡಕ್ಟರ್ಗೆ ಸಲಾಂ...</strong><br />ತಮಿಳುನಾಡಿನ ಕೊಯಮತ್ತೂರಿನ ಬಸ್ ಕಂಡಕ್ಟರ್ ಮಾರಿಮುತ್ತು ಯೋಗನಾಥನ್ ಅವರು ಟಿಕೆಟ್ ಜೊತೆಗೆ ಪ್ರಯಾಣಿಕರಿಗೆ ಉಚಿತ ಸಸಿಗಳನ್ನು ನೀಡುತ್ತಾರೆ. ಇದಕ್ಕಾಗಿ ಅವರು ತಮ್ಮ ಆದಾಯದ ಹೆಚ್ಚಿನ ಆದಾಯವನ್ನು ಖರ್ಚು ಮಾಡುತ್ತಾರೆ. ಅವರ ಪ್ರಯತ್ನಕ್ಕೆ ನನ್ನ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಉಲ್ಲೇಖಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/bjp-mla-thrashed-clothes-torn-by-protesting-farmers-in-punjabs-muktsar-817213.html" itemprop="url">ಪಂಜಾಬ್ ಬಿಜೆಪಿ ಶಾಸಕನನ್ನು ಥಳಿಸಿ ಬಟ್ಟೆ ಹರಿದು ಹಾಕಿದ ರೈತ ಪ್ರತಿಭಟನೆಕಾರರು </a><br /><br /><strong>ಜೇನು ಕೃಷಿ...</strong><br />ಅನೇಕ ರೈತರು ಈಗ ಜೇನು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಡಾರ್ಜಿಲಿಂಗ್ನ ಗುರ್ದುಮ್ ಗ್ರಾಮದ ಜನರು ಜೇನುನೊಣಗಳ ಸಾಕಾಣಿಕೆಯನ್ನು ಕೈಗೊತ್ತಿಕೊಂಡಿದ್ದು, ಅವರು ತಯಾರಿಸಿದ ಜೇನುತುಪ್ಪಕ್ಕೆ ಗಮನಾರ್ಹ ಬೇಡಿಕೆಯಿದೆ. ಇದರಿಂದ ಅವರ ಆದಾಯವು ಹೆಚ್ಚಾಗಿದೆ. ಸ್ವಾವಲಂಬಿ ಭಾರತ ಅಭಿಯಾನದಲ್ಲಿ ಇದು ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ಮನ್ ಕಿ ಬಾತ್' ರೆಡಿಯೊ ಕಾರ್ಯಕ್ರಮದ 75ನೇ ಸಂಚಿಕೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದಪ್ರಧಾನಿ ನರೇಂದ್ರ ಮೋದಿ ಅನೇಕ ವಿಷಯಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.</p>.<p><strong>ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ಮುಖ್ಯಾಂಶಗಳು:<br /><br />ಕೃಷಿಯಲ್ಲಿ ನಾವೀನ್ಯ ತಂತ್ರಗಾರಿಕೆ...</strong><br />ಆದಾಯವನ್ನು ಹೆಚ್ಚಿಸಲು ಮತ್ತು ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ರೈತರು ಸಾಂಪ್ರದಾಯಿಕ ಕೃಷಿಯ ಜೊತೆಗೆ ನಾವೀನ್ಯ ತಂತ್ರಗಾರಿಕೆಗಳನ್ನು ಆಳವಡಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ಮಾಡಿದ್ದಾರೆ.<br /></p>.<p><strong>'ಜನತಾ ಕರ್ಫ್ಯೂ' ನೆನಪಿಸಿದ ಮೋದಿ...</strong><br />ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ನಾವು 'ಜನತಾ ಕರ್ಫ್ಯೂ' ಆಚರಿಸಿದ್ದೆವು. ಇದು ಶಿಸ್ತಿಗೆ ಉತ್ತಮ ಉದಾಹರಣೆಯಾಗಿದ್ದು, ಇಡೀ ಜಗತ್ತಿಗೆ ಸ್ಫೂರ್ತಿಯಾಗಿದೆ. ಕೊರೊನಾ ಸೇನಾನಿಗಳಿಗೆ ನಮ್ಮ ಗೌರವ ಮತ್ತು ಪ್ರೀತಿಯನ್ನು ತೋರಿದ್ದೇವೆ ಎಂದು ತಿಳಿಸಿದ್ದಾರೆ.</p>.<p>ಇಂದು ನಾವು ಜಗತ್ತಿನಲ್ಲೇ ಅತ್ಯಂತ ದೊಡ್ಡ ಕೊರೊನಾ ಲಸಿಕಾ ಅಭಿಯಾನವನ್ನು ನಡೆಸುತ್ತಿದ್ದೇವೆ. ದೇಶದಾದ್ಯಂತ ಜನರು ಲಸಿಕೆಯನ್ನು ಪಡೆಯುತ್ತಿರುವುದನ್ನು ನೋಡಿ ತುಂಬಾನೇ ಸಂತೋಷವಾಗುತ್ತಿದೆ. ಕೇರಳದ ವ್ಯಕ್ತಿಯೊಬ್ಬರು ಇದಕ್ಕೆ 'ಲಸಿಕೆ ಸೇವಾ' ಎಂದು ಹೆಸರಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/ldf-udf-playing-friendly-match-in-kerala-rajnath-singh-817210.html" itemprop="url">ಕೇರಳದಲ್ಲಿ ಎಲ್ಡಿಎಫ್–ಯುಡಿಎಫ್ ‘ಸ್ನೇಹಪರ ಪಂದ್ಯ’: ರಾಜನಾಥ ಸಿಂಗ್ ಟೀಕೆ </a></p>.<p><strong>ಮಿಥಾಲಿ ರಾಜ್ಗೆ ಅಭಿನಂದನೆ...</strong><br />ಭಾರತ ಮಹಿಳಾ ಏಕದಿನ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್, ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ 10,000 ರನ್ ಮೈಲುಗಲ್ಲು ದಾಟಿದ್ದಾರೆ. ಈ ಸಂದರ್ಭದಲ್ಲಿ ನಾನು ಅವರಿಗೆ ಅಭಿನಂದನೆಯನ್ನು ಸಲ್ಲಿಸುತ್ತಿದ್ದು, ಮಹಿಳೆಯರು ಸೇರಿದಂತೆ ಪುರುಷರಿಗೂ ಮಾದರಿಯಾಗಿದ್ದಾರೆ.</p>.<p>ಈ ತಿಂಗಳು ನಾವು ಮಹಿಳಾ ದಿನಚಾರಣೆಯನ್ನು ಆಚರಿಸಿದಾಗ ನಮ್ಮ ಅನೇಕ ಮಹಿಳಾ ಕ್ರೀಡಾಪಟಗಳು ಅತ್ಯುತ್ತಮ ಸಾಧನೆ ಮಾಡಿರುವುದು ಸಂತಸ ತಂದಿದೆ. ಹೆಣ್ಣು ಮಕ್ಕಳು ಕ್ರೀಡೆ ಹಾಗೂ ಜೀವನದ ವಿವಿಧ ವಿಭಾಗಗಳಲ್ಲಿ ತಮ್ಮನ್ನು ತಾವೇ ತೊಡಗಿಸಿಕೊಂಡಿರುವುದು ಬಹಳ ಸಂತೋಷ ನೀಡಿದೆ.</p>.<p>ದೆಹಲಿಯಲ್ಲಿ ಆಯೋಜಿಸಿದ್ದ ಐಎಸ್ಎಸ್ಎಫ್ ವಿಶ್ವಕಪ್ ಶೂಟಿಂಗ್ನಲ್ಲಿ ಭಾರತೀಯ ಮಹಿಳಾ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಿ ದಾಖಲೆ ಬರೆದಿದ್ದಾರೆ. ಪದಕ ಬೇಟೆಯಲ್ಲಿಯೂ ಭಾರತ ಮುಂದಿದೆ ಎಂದು ಉಲ್ಲೇಖಿಸಿದ್ದಾರೆ.</p>.<p><strong>ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದಿಂದ ಪ್ರೇರಣೆ...</strong><br />ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಅನೇಕ ಕಷ್ಟಗಳನ್ನು ಅನುಭವಿಸಿದ್ದರು. ಯಾಕೆಂದರೆ ದೇಶದ ಹಿತಕ್ಕಾಗಿ ತ್ಯಾಗ ಮಾಡುವುದು ತಮ್ಮ ಕರ್ತವ್ಯ ಎಂದು ಪರಿಗಣಿಸಿದ್ದರು. ಅವರ ತ್ಯಾಗ ಮತ್ತು ಬಲಿದಾನ ನಮ್ಮ ಕರ್ತವ್ಯದ ಹಾದಿಗೆ ನಿರಂತರವಾಗಿ ಪ್ರೇರೇಪಿಸಲಿದೆ ಎಂದು ನುಡಿದರು.</p>.<p>ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಅನೇಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಧಾನಿ ಮೋದಿ ಹೇಳಿದರು.</p>.<p><strong>ಕೊಯಮತ್ತೂರಿನ ಬಸ್ ಕಂಡಕ್ಟರ್ಗೆ ಸಲಾಂ...</strong><br />ತಮಿಳುನಾಡಿನ ಕೊಯಮತ್ತೂರಿನ ಬಸ್ ಕಂಡಕ್ಟರ್ ಮಾರಿಮುತ್ತು ಯೋಗನಾಥನ್ ಅವರು ಟಿಕೆಟ್ ಜೊತೆಗೆ ಪ್ರಯಾಣಿಕರಿಗೆ ಉಚಿತ ಸಸಿಗಳನ್ನು ನೀಡುತ್ತಾರೆ. ಇದಕ್ಕಾಗಿ ಅವರು ತಮ್ಮ ಆದಾಯದ ಹೆಚ್ಚಿನ ಆದಾಯವನ್ನು ಖರ್ಚು ಮಾಡುತ್ತಾರೆ. ಅವರ ಪ್ರಯತ್ನಕ್ಕೆ ನನ್ನ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಉಲ್ಲೇಖಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/bjp-mla-thrashed-clothes-torn-by-protesting-farmers-in-punjabs-muktsar-817213.html" itemprop="url">ಪಂಜಾಬ್ ಬಿಜೆಪಿ ಶಾಸಕನನ್ನು ಥಳಿಸಿ ಬಟ್ಟೆ ಹರಿದು ಹಾಕಿದ ರೈತ ಪ್ರತಿಭಟನೆಕಾರರು </a><br /><br /><strong>ಜೇನು ಕೃಷಿ...</strong><br />ಅನೇಕ ರೈತರು ಈಗ ಜೇನು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಡಾರ್ಜಿಲಿಂಗ್ನ ಗುರ್ದುಮ್ ಗ್ರಾಮದ ಜನರು ಜೇನುನೊಣಗಳ ಸಾಕಾಣಿಕೆಯನ್ನು ಕೈಗೊತ್ತಿಕೊಂಡಿದ್ದು, ಅವರು ತಯಾರಿಸಿದ ಜೇನುತುಪ್ಪಕ್ಕೆ ಗಮನಾರ್ಹ ಬೇಡಿಕೆಯಿದೆ. ಇದರಿಂದ ಅವರ ಆದಾಯವು ಹೆಚ್ಚಾಗಿದೆ. ಸ್ವಾವಲಂಬಿ ಭಾರತ ಅಭಿಯಾನದಲ್ಲಿ ಇದು ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>