<p><strong>ನವದೆಹಲಿ:</strong> ಕೋವಿಡ್ ಸಾಂಕ್ರಾಮಿಕವು ಜನರು ಆರೋಗ್ಯದ ಕುರಿತು ಕಾಳಜಿ ಮತ್ತು ನೈಸರ್ಗಿಕ ಉತ್ಪನ್ನಗಳ ಬಗ್ಗೆ ಗಮನಹರಿಸುವಂತೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ತಿಂಗಳ ರೇಡಿಯೊ ಕಾರ್ಯಕ್ರಮ ‘ಮನ್ ಕೀ ಬಾತ್’ನ 81ನೇ ಕಂತಿನಲ್ಲಿ ಮಾತನಾಡಿದ ಅವರು ಆರ್ಥಿಕತೆ, ತಂತ್ರಜ್ಞಾನ, ಕೃಷಿ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದರು.</p>.<p>‘ಇಂದು ವಿಶ್ವ ನದಿ ದಿನ. ಎಲ್ಲರ ಸಹಕಾರದೊಂದಿಗೆ ನೀರಿನ ಮಾಲಿನ್ಯ ತಡೆಗಟ್ಟಬೇಕಿದೆ. ತಮಿಳುನಾಡಿನ ನಾಗಾ ನದಿಯನ್ನು ಸ್ಥಳೀಯರು ಪುನರುಜ್ಜೀವನಗೊಳಿಸಿದ್ದಾರೆ. ಸಬರಮತಿ ನದಿಯನ್ನು ಶುಷ್ಕ ವಾತಾವರಣದಿಂದ ಪುನರುಜ್ಜೀವನಗೊಳಿಸಲಾಗಿದೆ. ನದಿಗಳನ್ನು ಪುನಶ್ಚೇತನಗೊಳಿಸಲು ಸಾಕಷ್ಟು ಕೆಲಸ ಮಾಡಲಾಗುತ್ತಿದೆ’ ಎಂದು ಮೋದಿ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/world-news/pm-narendra-modi-says-countries-using-terrorism-as-political-tool-must-understand-that-it-is-equally-869944.html" itemprop="url">ಉಗ್ರವಾದ ಪೋಷಿಸುವ ದೇಶಗಳಿಗೂ ಅದರಿಂದ ಅಪಾಯವಿದೆ: ಪಾಕ್ ಬಗ್ಗೆ ಪ್ರಧಾನಿ ಮೋದಿ</a></p>.<p>ಎಲ್ಲರೂ ವರ್ಷಕ್ಕೊಮ್ಮೆಯಾದರೂ ನದಿಗಳ ದಿನ ಆಚರಿಸಬೇಕು ಎಂದು ಅವರು ಕರೆ ನೀಡಿದ್ದಾರೆ.</p>.<p>ಮಹಾತ್ಮ ಗಾಂಧಿಯವರು ಸ್ವಚ್ಛತಾ ಅಭಿಯಾನ ಆರಂಭಿಸಿದ್ದರು. ಆರ್ಥಿಕ ಸ್ವಚ್ಛತೆಯ ಬಗ್ಗೆಯೂ ನಾವು ಗಮನಹರಿಸಬೇಕಿದೆ ಎಂದ ಮೋದಿ, ಯುಪಿಐಯಂಥ ತಂತ್ರಜ್ಞಾನಗಳ ಜನಪ್ರಿಯತೆಯನ್ನು ಉಲ್ಲೇಖಿಸಿದರು.</p>.<p>ಜಾರ್ಖಂಡ್ನಲ್ಲಿ ಮಹಿಳೆಯರು ನಡೆಸುತ್ತಿರುವ ಅಲೋವೆರಾ ಕೃಷಿ ಬಗ್ಗೆ ಮತ್ತು ಅವರ ಬಳಿಯಿಂದ ಸ್ಯಾನಿಟೈಸರ್ ಕಂಪನಿಗಳು ಖರೀದಿ ಮಾಡುತ್ತಿರುವುದರ ಕುರಿತು ಪ್ರಧಾನಿ ಉಲ್ಲೇಖಿಸಿದರು.</p>.<p><strong>ಓದಿ:</strong><a href="https://www.prajavani.net/world-news/pm-narendra-modi-says-little-boy-who-helped-his-father-at-tea-stall-is-addressing-unga-for-fourth-869910.html" itemprop="url">ಚಹಾ ಮಾರಲು ತಂದೆಗೆ ನೆರವಾಗುತ್ತಿದ್ದ ಬಾಲಕನಿಂದ ವಿಶ್ವಸಂಸ್ಥೆಯಲ್ಲಿ ಭಾಷಣ: ಮೋದಿ</a></p>.<p>ಆಯುಷ್ ಸಚಿವಾಲಯವು ಬೇವು ಮತ್ತು ಅಲೋವೆರಾದಂಥ ಗಿಡಮೂಲಿಕೆ ಮತ್ತು ಔಷಧೀಯ ಸಸ್ಯಗಳ ಬಗ್ಗೆ ಬೆಳಕು ಚೆಲ್ಲುವ ಕೆಲಸ ಮಾಡುತ್ತಿದೆ ಎಂದೂ ಮೋದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್ ಸಾಂಕ್ರಾಮಿಕವು ಜನರು ಆರೋಗ್ಯದ ಕುರಿತು ಕಾಳಜಿ ಮತ್ತು ನೈಸರ್ಗಿಕ ಉತ್ಪನ್ನಗಳ ಬಗ್ಗೆ ಗಮನಹರಿಸುವಂತೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ತಿಂಗಳ ರೇಡಿಯೊ ಕಾರ್ಯಕ್ರಮ ‘ಮನ್ ಕೀ ಬಾತ್’ನ 81ನೇ ಕಂತಿನಲ್ಲಿ ಮಾತನಾಡಿದ ಅವರು ಆರ್ಥಿಕತೆ, ತಂತ್ರಜ್ಞಾನ, ಕೃಷಿ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದರು.</p>.<p>‘ಇಂದು ವಿಶ್ವ ನದಿ ದಿನ. ಎಲ್ಲರ ಸಹಕಾರದೊಂದಿಗೆ ನೀರಿನ ಮಾಲಿನ್ಯ ತಡೆಗಟ್ಟಬೇಕಿದೆ. ತಮಿಳುನಾಡಿನ ನಾಗಾ ನದಿಯನ್ನು ಸ್ಥಳೀಯರು ಪುನರುಜ್ಜೀವನಗೊಳಿಸಿದ್ದಾರೆ. ಸಬರಮತಿ ನದಿಯನ್ನು ಶುಷ್ಕ ವಾತಾವರಣದಿಂದ ಪುನರುಜ್ಜೀವನಗೊಳಿಸಲಾಗಿದೆ. ನದಿಗಳನ್ನು ಪುನಶ್ಚೇತನಗೊಳಿಸಲು ಸಾಕಷ್ಟು ಕೆಲಸ ಮಾಡಲಾಗುತ್ತಿದೆ’ ಎಂದು ಮೋದಿ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/world-news/pm-narendra-modi-says-countries-using-terrorism-as-political-tool-must-understand-that-it-is-equally-869944.html" itemprop="url">ಉಗ್ರವಾದ ಪೋಷಿಸುವ ದೇಶಗಳಿಗೂ ಅದರಿಂದ ಅಪಾಯವಿದೆ: ಪಾಕ್ ಬಗ್ಗೆ ಪ್ರಧಾನಿ ಮೋದಿ</a></p>.<p>ಎಲ್ಲರೂ ವರ್ಷಕ್ಕೊಮ್ಮೆಯಾದರೂ ನದಿಗಳ ದಿನ ಆಚರಿಸಬೇಕು ಎಂದು ಅವರು ಕರೆ ನೀಡಿದ್ದಾರೆ.</p>.<p>ಮಹಾತ್ಮ ಗಾಂಧಿಯವರು ಸ್ವಚ್ಛತಾ ಅಭಿಯಾನ ಆರಂಭಿಸಿದ್ದರು. ಆರ್ಥಿಕ ಸ್ವಚ್ಛತೆಯ ಬಗ್ಗೆಯೂ ನಾವು ಗಮನಹರಿಸಬೇಕಿದೆ ಎಂದ ಮೋದಿ, ಯುಪಿಐಯಂಥ ತಂತ್ರಜ್ಞಾನಗಳ ಜನಪ್ರಿಯತೆಯನ್ನು ಉಲ್ಲೇಖಿಸಿದರು.</p>.<p>ಜಾರ್ಖಂಡ್ನಲ್ಲಿ ಮಹಿಳೆಯರು ನಡೆಸುತ್ತಿರುವ ಅಲೋವೆರಾ ಕೃಷಿ ಬಗ್ಗೆ ಮತ್ತು ಅವರ ಬಳಿಯಿಂದ ಸ್ಯಾನಿಟೈಸರ್ ಕಂಪನಿಗಳು ಖರೀದಿ ಮಾಡುತ್ತಿರುವುದರ ಕುರಿತು ಪ್ರಧಾನಿ ಉಲ್ಲೇಖಿಸಿದರು.</p>.<p><strong>ಓದಿ:</strong><a href="https://www.prajavani.net/world-news/pm-narendra-modi-says-little-boy-who-helped-his-father-at-tea-stall-is-addressing-unga-for-fourth-869910.html" itemprop="url">ಚಹಾ ಮಾರಲು ತಂದೆಗೆ ನೆರವಾಗುತ್ತಿದ್ದ ಬಾಲಕನಿಂದ ವಿಶ್ವಸಂಸ್ಥೆಯಲ್ಲಿ ಭಾಷಣ: ಮೋದಿ</a></p>.<p>ಆಯುಷ್ ಸಚಿವಾಲಯವು ಬೇವು ಮತ್ತು ಅಲೋವೆರಾದಂಥ ಗಿಡಮೂಲಿಕೆ ಮತ್ತು ಔಷಧೀಯ ಸಸ್ಯಗಳ ಬಗ್ಗೆ ಬೆಳಕು ಚೆಲ್ಲುವ ಕೆಲಸ ಮಾಡುತ್ತಿದೆ ಎಂದೂ ಮೋದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>