ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣೇಶ ಚತುರ್ಥಿ: ಜನತೆಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಶುಭಾಶಯ

Last Updated 10 ಸೆಪ್ಟೆಂಬರ್ 2021, 6:38 IST
ಅಕ್ಷರ ಗಾತ್ರ

ಬೆಂಗಳೂರು: ದೇಶಾದ್ಯಂತ ಶುಕ್ರವಾರ ಗಣೇಶ ಚತುರ್ಥಿಯ ಸಂಭ್ರಮ. ಹಬ್ಬದ ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಜನತೆಗೆ ಶುಭ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಶುಭಕೋರಿದ್ದು, ನಿಮ್ಮೆಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯಗಳು. ನಿಮ್ಮೆಲ್ಲರಿಗೂ ಜೀವನದಲ್ಲಿ ಸುಖ, ಶಾಂತಿ, ಸೌಭಾಗ್ಯ ಮತ್ತು ಆರೋಗ್ಯ ತರಲಿ. ಗಣಪತಿ ಬಪ್ಪಾ ಮೋರೆಯಾ ಎಂದು ಟ್ವೀಟ್ ಮಾಡಿದ್ದಾರೆ.

ಮತ್ತೊಂದೆಡೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಟ್ವೀಟ್ ಮಾಡಿದ್ದು, ‘ನಾಡಿನ ಸಮಸ್ತ ಜನತೆಗೆ ಶ್ರೀ ಗಣೇಶ ಚತುರ್ಥಿಯ ಭಕ್ತಿಪೂರ್ವಕ ಶುಭಾಶಯಗಳು.

ಶ್ರೀ ಗಣಪತಿಯ ಕೃಪೆ ನಾಡಿನ ಮೇಲೆ ಸದಾ ಇರಲಿ, ಎದುರಾಗಿರುವ ಸಾಂಕ್ರಾಮಿಕದ ಸಂಕಷ್ಟಗಳೂ ಸೇರಿದಂತೆ, ಎಲ್ಲ ಕಷ್ಟ ಆತಂಕಗಳನ್ನು ದೂರಮಾಡಲಿ, ಜನರಿಗೆ ಆರೋಗ್ಯ, ಯಶಸ್ಸು, ಸಂತೋಷ ಸಮೃದ್ಧಿಗಳನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಶುಭಹಾರೈಸಿದ್ದಾರೆ.

ಉಳಿದಂತೆ, ನಾಡಿನ ಗಣ್ಯರು, ಸೆಲೆಬ್ರಿಟಿಗಳು ಕೂಡ ಸಾಮಾಜಿಕ ತಾಣಗಳ ಮೂಲಕ ಜನರಿಗೆ ಶುಭಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT