ನವದೆಹಲಿ: ಮದುವೆ ಸಮಾರಂಭ ಮುಗಿಸಿ ತೆರಳುತ್ತಿದ್ದಬಸ್ವೊಂದು ಚಂಪಾವತ್ ಜಿಲ್ಲೆಯ ಬುದಮ್ ಗ್ರಾಮದ ಸುಖೀದಂಗ್ ರೀತಾ ಸಾಹಿಬ್ ರಸ್ತೆಯಲ್ಲಿ ಕಮರಿಗೆ ಉರುಳಿದ ದುರ್ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.
'ಮದುವೆ ಮುಗಿಸಿಕೊಂಡು ತೆರಳುತ್ತಿದ್ದ ಬಸ್ಇಂದು (ಮಂಗಳವಾರ) ಮುಂಜಾನೆ ಅಪಘಾತಕ್ಕೀಡಾಗಿದೆ. ಈ ವೇಳೆ 14 ಮಂದಿ ಮೃತಪಟ್ಟಿದ್ದಾರೆ' ಎಂದು ಕಮೌನ್ ಪ್ರಾಂತ್ಯದ ಡಿಐಜಿ ನಿಲೇಶ್ ಆನಂದ್ ಭರ್ನೆ ತಿಳಿಸಿದ್ದಾರೆ.
Uttarakhand | 14 people died after the vehicle they were travelling fell into a gorge near Sukhidhang Reetha Sahib road. The accident occurred early morning today when they were returning from a wedding ceremony: Kumaon DIG Nilesh Anand Bharne pic.twitter.com/aGidTX7AGX
ಮೃತರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) ತಲಾ ಎರಡು ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡಿರುವವರಿಗೂ ತಲಾ ₹ 50,000 ನೆರವು ಪ್ರಕಟಿಸಿದ್ದಾರೆ.
ಈ ಮಾಹಿತಿಯನ್ನು ಪ್ರಧಾನಿ ಕಚೇರಿಯು ಟ್ವಿಟರ್ ಮೂಲಕ ತಿಳಿಸಿದ್ದು, 'ಉತ್ತರಾಖಂಡ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ಮೋದಿ ಅವರು ಪಿಎಂಎನ್ಆರ್ಎಫ್ನಿಂದ ತಲಾ ₹ 2 ಲಕ್ಷ ಪರಿಹಾರ ಮತ್ತು ಗಾಯಗೊಂಡಿರುವವರಿಗೆ ತಲಾ ₹ 50,000 ನೆರವು ಘೋಷಿಸಿದ್ದಾರೆ' ಎಂದು ಹೇಳಿದೆ.
PM @narendramodi has announced an ex-gratia of Rs. 2 lakh each from PMNRF for the next of kin of those who lost their lives due to an accident in Uttarakhand. The injured would be given Rs. 50,000.