ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀತಿ ಆಯೋಗದ ಸಭೆ: '3T'ಗಳತ್ತ ಗಮನಹರಿಸುವಂತೆ ರಾಜ್ಯ ಸರ್ಕಾರಗಳಿಗೆ ಮೋದಿ ಕರೆ

Last Updated 7 ಆಗಸ್ಟ್ 2022, 15:30 IST
ಅಕ್ಷರ ಗಾತ್ರ

ನವದಹಲಿ: ಪ್ರತಿಯೊಂದು ರಾಜ್ಯವೂಭಾರತದ ಪ್ರತಿ ಯೋಜನೆಗಳ ಮೂಲಕ '3T' (ವ್ಯಾಪಾರ –ಟ್ರೇಡ್‌, ಪ್ರವಾಸ –ಟೂರಿಸಂ, ತಂತ್ರಜ್ಞಾನ –ಟೂರಿಸಂ) ಅನ್ನು ಪ್ರಪಂಚದಾದ್ಯಂತ ಉತ್ತೇಜಿಸುವುದರತ್ತಗಮನ ಹರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.ಭಾನುವಾರ ನಡೆದನೀತಿ ಆಯೋಗದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ್ದಾರೆ.

ಆಮದು ಪ್ರಮಾಣವನ್ನು ಕಡಿತಗೊಳಿಸುವುದಕ್ಕೆ, ರಫ್ತು ಹೆಚ್ಚಿಸುವುದಕ್ಕೆ ಮತ್ತು ಅವಕಾಶಗಳನ್ನು ಗುರುತಿಸಿಕೊಳ್ಳುವುದಕ್ಕೆ ರಾಜ್ಯಗಳು ಒತ್ತು ನೀಡಬೇಕು ಎಂದು ಸಲಹೆ ನೀಡಿದ್ದಾರೆ. 'ಸಾಧ್ಯವಿರುವ ಎಲ್ಲ ಕಡೆ ಸ್ಥಳೀಯ ಪದಾರ್ಥಗಳನ್ನು ಬಳಸಲು ಜನರನ್ನು ಪ್ರೋತ್ಸಾಹಿಸಬೇಕು' ಎಂದು ಸೂಚಿಸಿರುವ ಅವರು, 'ವೋಕಲ್‌ ಫಾರ್‌ ಲೋಕಲ್‌' ಎಂಬುದು ರಾಜಕೀಯ ಪಕ್ಷದ ಕಾರ್ಯಸೂಚಿಯಲ್ಲ. ಇದು ಎಲ್ಲರ ಗುರಿ ಎಂದು ಒತ್ತಿ ಹೇಳಿದ್ದಾರೆ.

ಜಿಎಸ್‌ಟಿ ಸಂಗ್ರಹವನ್ನು ಹೆಚ್ಚಿಸಲು ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಶ್ರಮಿಸುವ ಅಗತ್ಯವಿದೆ. ನಮ್ಮ ಆರ್ಥಿಕ ಪರಿಸ್ಥಿತಿಯನ್ನು ಸದೃಢಗೊಳಿಸಲು ಮತ್ತು 5 ಲಕ್ಷಕೋಟಿ ಡಾಲರ್‌ಗೆ ಕೊಂಡೊಯ್ಯಲು ಇದು ಅತ್ಯಗತ್ಯವೆಂದು ತಿಳಿಸಿದ್ದಾರೆ.

ಗಣನೀಯ ಚರ್ಚೆಗಳ ಬಳಿಕರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ರೂಪಿಸಲಾಗಿದೆ ಎಂದಿರುವ ಮೋದಿ, ಕಾಲಮಿತಿಯೊಳಗೆಎನ್‌ಇಪಿ ಜಾರಿಗೊಳಿಸಲು ಸ್ಪಷ್ಟ ಮಾರ್ಗಸೂಚಿ ರಚಿಸಬೇಕಿದೆ ಎಂದಿದ್ದಾರೆ.

ಸಭೆಯಲ್ಲಿ ಭಾಗವಹಿಸಿದ ಹಾಗೂ ತಮ್ಮ ಅನುಭವಗಳನ್ನು ಹಂಚಿಕೊಂಡ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್‌ ಗವರ್ನರ್‌ಗಳಿಗೆ ಧನ್ಯವಾದಗಳನ್ನು ತಿಳಿಸಿದರು.

ಇಂದಿನ ಸಭೆಯಲ್ಲಿ ಚರ್ಚಿಸಿದ ವಿಚಾರಗಳು ಮುಂದಿನ 25 ವರ್ಷಗಳವರೆಗೆ ರಾಷ್ಟ್ರೀಯ ಆದ್ಯತೆಗಳೇನು ಎಂಬುದನ್ನು ವ್ಯಾಖ್ಯಾನಿಸಲಿವೆ ಎಂದಿರುವ ಮೋದಿ, 'ಇಂದು ಬಿತ್ತಿರುವ ಬೀಜಗಳು, 2047ಕ್ಕೆ ಫಲ ನೀಡಲಿವೆ' ಎಂದೂ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT