ಛಪ್ರಾ: ಬಿಹಾರದ ‘ಡಬಲ್ ಎಂಜಿನ್ ಸರ್ಕಾರ’ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
ಛಪ್ರಾದಲ್ಲಿ ಚುನಾವಣಾ ಪ್ರಚಾರ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
‘ಬಿಹಾರದ ಡಬಲ್ ಎಂಜಿನ್ ಸರ್ಕಾರವು ರಾಜ್ಯದ ಅಭಿವೃದ್ಧಿಗೆ ಬದ್ಧವಾಗಿದ್ದರೆ ಇಬ್ಬರು ‘ಯುವರಾಜ’ರು, ಈ ಪೈಕಿ ಒಬ್ಬ ‘ಜಂಗಲ್ ರಾಜ್’ನಿಂದ ಬಂದವರು, ತಮ್ಮದೇ ಸಿಂಹಾಸನ ರಕ್ಷಿಸಿಕೊಳ್ಳಲು ಹೋರಾಡುತ್ತಿದ್ದಾರೆ’ ಎಂದು ಮೋದಿ ಹೇಳಿದ್ದಾರೆ.
‘3–4 ವರ್ಷಗಳ ಹಿಂದೆ ಉತ್ತರ ಪ್ರದೇಶ ಚುನಾವಣೆ ವೇಳೆ ಈ ಇಬ್ಬರು ಯುವರಾಜರು ಬಸ್ನ ಟಾಪ್ ಮೇಲೆ ಹತ್ತಿ, ಕಪ್ಪು ಜಾಕೆಟ್ಗಳನ್ನು ಧರಿಸಿಕೊಂಡು ಹಳ್ಳಿಗಳಿಗೆ ಭೇಟಿ ನೀಡಿದ್ದನ್ನು ನೀವು ನೋಡಿರಬಹುದು’ ಎಂದೂ ಮೋದಿ ವ್ಯಂಗ್ಯವಾಡಿದ್ದಾರೆ.
ಬಿಹಾರದಲ್ಲಿ ಎನ್ಡಿಎಯು ಮತ್ತೊಮ್ಮೆ ಸರ್ಕಾರ ರಚಿಸುವ ವಿಶ್ವಾಸವಿದೆ. ಮೊದಲ ಹಂತದ ಮತದಾನದ ಬಳಿಕ ಇದು ದೃಢಪಟ್ಟಿದೆ ಎಂದೂ ಅವರು ಹೇಳಿದ್ದಾರೆ.