ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿದ ಪ್ರಧಾನಿ ನರೇಂದ್ರ ಮೋದಿ

Last Updated 30 ಅಕ್ಟೋಬರ್ 2020, 3:42 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಅವರು ಅಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿದ್ದಉತ್ಸಾಹಿ ಯುವಕರಾಗಿದ್ದರು ಎಂದು ಹೇಳಿದ್ದಾರೆ.

ಕುಲ್ಗಾಂ ಜಿಲ್ಲೆಯ ಮೂವರು ಬಿಜೆಪಿ ಕಾರ್ಯಕರ್ತರನ್ನು ಉಗ್ರರು ಗುರುವಾರ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಮೋದಿ, ನಮ್ಮ ಮೂವರು ಕಾರ್ಯಕರ್ತರ ಹತ್ಯೆಯಾಗಿರುವುದನ್ನು ನಾನು ಖಂಡಿಸುತ್ತೇನೆ. ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿದ್ದ ಯುವಕರಾಗಿದ್ದರು ಎಂದಿದ್ದಾರೆ.

ಕುಲ್ಗಾಮ್ ಜಿಲ್ಲೆಯ ವೈ.ಕೆ. ಪೊರಾ ಪ್ರದೇಶದಲ್ಲಿ ಗುರುವಾರ ಸಂಜೆ ಫಿದಾ ಹುಸೈನ್‌, ಉಮರ್‌ ಹಜಾಮ್‌ ಮತ್ತು ಉಮರ್‌ ರಶೀದ್‌ ಬೇಗ್‌ ಮೇಲೆ ಉಗ್ರರು ಗುಂಡು ಹಾರಿಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಮೂವರನ್ನು ಖಾಜಿಗುಂಡ್‌ನ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿತ್ತು, ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.

ಲಷ್ಕರ್‌ ಎ ತೊಯಬಾ ಭಯೋತ್ಪಾದಕ ಸಂಘಟನೆ ಜೊತೆಗೆ ಗುರುತಿಸಿಕೊಂಡಿರುವ ‘ದ ರೆಸಿಸ್ಟನ್ಸ್ ಫ್ರಂಟ್‌’ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT