ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬ ಸದಸ್ಯರಿಗೆ ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಅವರು, 'ಉತ್ತರ ಪ್ರದೇಶದ ಮುರಾದ್ನಗರದಲ್ಲಿ ನಡೆದ ದುರದೃಷ್ಟಕರ ಘಟನೆ ನನಗೆ ತುಂಬಾ ದುಃಖ ತಂದಿದೆ. ರಾಜ್ಯ ಸರ್ಕಾರ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಹಾಗೆಯೇ ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ' ಎಂದು ಹೇಳಿದ್ದಾರೆ.